Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ವಿರುದ್ಧ ಸಮರ- 8 ಉತ್ಪನ್ನ ಲೋಕಾರ್ಪಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರೊನಾ ವಿರುದ್ಧ ಸಮರ- 8 ಉತ್ಪನ್ನ ಲೋಕಾರ್ಪಣೆ

Bengaluru City

ಕೊರೊನಾ ವಿರುದ್ಧ ಸಮರ- 8 ಉತ್ಪನ್ನ ಲೋಕಾರ್ಪಣೆ

Public TV
Last updated: August 6, 2020 2:57 pm
Public TV
Share
5 Min Read
ashwath narayan
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ವಿವಿಧ ಪ್ರಯತ್ನಗಳಿಗೆ ಸರ್ಕಾರ ಮುಂದಾಗುತ್ತಿದೆ. ಇದೀಗ ಹೊಸ ತಂತ್ರಜ್ಞಾನ, ಹೊಸ ಮಾದರಿಯ ಸಲಕರಣೆಗಳ ಮೊರೆ ಹೋಗುತ್ತಿದೆ. ಇಂದು ವಿವಿಧ ಉತ್ಪನ್ನಗಳನ್ನು ಉಪಮುಖ್ಯಮಂತ್ರಿ ಡಾ.ಸಿ.ಅಶ್ವಥ್ ನಾರಾಯಣ್ ಬಿಡುಗಡೆಗೊಳಿಸಿದ್ದಾರೆ.

ಕರ್ನಾಟಕ ನಾವೀನ್ಯ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್) ವ್ಯಾಪ್ತಿಯ ಬೆಂಗಳೂರು ಜೈವಿಕ ನಾವೀನ್ಯತೆ ಕೇಂದ್ರ (ಬಿಬಿಸಿ) ಅಭಿವೃದ್ಧಿಪಡಿಸಿರುವ ಉತ್ಪನ್ನಗಳನ್ನು ವಿಧಾನಸೌಧದಲ್ಲಿ ಡಾ.ಅಶ್ವಥ್ ನಾರಾಯಣ್ ಬಿಡುಗಡೆ ಮಾಡಿದ್ದಾರೆ. ಪದ್ಮ ವೈಟಲ್ಸ್, ಮಲ್ಲೀಸ್ ಕಾರ್ಡಿಟೀ, ಸಿಡಿ 4 ಷೀಲ್ಡ್, ಭೀಮ್ ರೋಟಿ, ಇಮ್ಯೂನ್ ಬೂಸ್ಟರ್- ಡೈಲಿ ಡ್ರಾಪ್ಸ್, ವೆಜ್ ಫಲ್ ಸ್ಯಾನಿಟೈಸರ್, ವಾಟರ್ ಸ್ಯಾನಿಟೈಸರ್, ಆ್ಯಂಟಿ- ಮೈಕ್ರೋಬಿಯಲ್ ಎಚ್‍ವಿಎಸಿ ಮಾಡ್ಯೂಲ್ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಇದೇ ವೇಳೆ ಐಐಬಿಎಂ-ಬಿಬಿಸಿ ಯಿಂದ ಎಂಒಯುಗೆ ಸಹಿ ಹಾಕಲಾಗಿದೆ.

vlcsnap 2020 08 06 13h05m32s109 e1596699681295

ಪದ್ಮ ವೈಟಲ್ಸ್: ಕಾರ್ಡಿಯಾಕ್ ಡಿಸೈನ್ ಲ್ಯಾಬ್ಸ್ ನ ಡಾ.ಮದನ್ ಗೋಪಾಲ್ ಈ ಕೇಂದ್ರೀಕೃತ ಆರೋಗ್ಯ ನಿಗಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ರೋಗಿಯ ಇಸಿಜಿ, ಉಸಿರಾಟ, ಎಸ್‍ಪಿಒ 2 ಮತ್ತು ದೇಹದ ಉಷ್ಣತೆ ಮೇಲೆ ನಿರಂತರವಾಗಿ ನಿಗಾ ಇರಿಸುವುದರ ಜೊತೆಗೆ ಅಂಕಿ-ಅಂಶಗಳನ್ನು ವಿಶ್ಲೇಷಿಸಿ ಟೆಲಿಮೆಟ್ರಿ ಮೂಲಕ ರವಾನಿಸುತ್ತದೆ. ಮುನ್ನೆಚ್ಚರಿಕೆ ವ್ಯವಸ್ಥೆಯನ್ನೂ ಇದು ಒಳಗೊಂಡಿದೆ. ರೋಗಿಗಳ ಶರೀರವನ್ನು ಮುಟ್ಟದೇ ನಿಗಾ ವಹಿಸಬಹುದಾಗಿದೆ. ಹೀಗಾಗಿ ಕೋವಿಡ್-19 ಸೋಂಕಿನ ಚಿಕಿತ್ಸೆ ಸಂದರ್ಭದಲ್ಲಿ ಉಪಯುಕ್ತವಾಗಲಿದೆ. ಇದನ್ನು ನಾರಾಯಣ ಹೃದಯಾಲಯದಲ್ಲಿ ದೃಢೀಕರಿಸಲಾಗಿದೆ.

vlcsnap 2020 08 06 12h59m52s31 e1596699777766

ಐಸಿಯು ಪೇಷೆಂಟ್ ಮಾನಿಟರ್ ಒದಗಿಸುವ ಬಹುತೇಕ ಅಂಶಗಳು ಇದರಲ್ಲಿವೆ. ಇದನ್ನು ಬಳಸಿ ಯಾವುದೇ ಸಾಮಾನ್ಯ ಹಾಸಿಗೆಯನ್ನು ಮಾನಿಟರ್ಡ್ ಬೆಡ್ ಆಗಿ ಬದಲಾಯಿಸಬಹುದು. ಬೆಲೆ ಕಡಿಮೆ ಇದ್ದು, ಹಗುರವಾಗಿರುವುದರಿಂದ ರೋಗಿಯ ಮೇಲಿಡುವ ನಿಗಾ ಸಾಮಥ್ರ್ಯ ಹೆಚ್ಚಾಗುತ್ತದೆ. ರೋಗಿಯ ಇಸಿಜಿ, ಉಸಿರಾಟ, ಎಸ್‍ಪಿಒ2 ಮತ್ತು ದೇಹದ ಉಷ್ಣತೆಯನ್ನು ದಾಖಲಿಸಲು ಬೇಕಾಗುವ ನರ್ಸ್ ಗಳ ಸಂಖ್ಯೆಯನ್ನು ತಗ್ಗಿಸುತ್ತದೆ.

ಮಲ್ಲೀಸ್ ಕಾರ್ಡಿಟೀ: ರೋಗ ನಿರೋಧಕ ಶಕ್ತಿ ಉದ್ದೀಪಕವಾದ ಇದನ್ನು ಮಲ್ಲಿಪಾತ್ರ ನ್ಯೂಟ್ರಾಸ್ಯೂಟಿಕಲ್ಸ್ ನ ಡಾ.ಮೌಷ್ಮಿ ಮೊಂಡಲ್ ಅಭಿವೃದ್ಧಿಪಡಿಸಿದ್ದಾರೆ. ಔಷಧೀಯ ಗುಣವುಳ್ಳ ಅಣಬೆಯಾದ `ಕಾರ್ಡಿಸೆಪ್ಸ್’ ಬಳಸಿ ಇದನ್ನು ತಯಾರಿಸಲಾಗಿದೆ. ಪ್ರಯೋಗಾಲಯ ಪರಿಸ್ಥಿತಿಗಳಲ್ಲಿ ಬೆಳೆಯಲಾಗುವ ಈ ಅಣಬೆ ತಳಿಯು ವೈರಾಣು ನಿರೋಧಕ ಗುಣಸ್ವಭಾವ ಹೊಂದಿದೆ. ಕೋವಿಡ್-19 ಸನ್ನಿವೇಶದಲ್ಲಿ ವ್ಯಕ್ತಿಯ ರೋಗ ನಿರೋಧಕ ಮಟ್ಟವನ್ನು ಹೆಚ್ಚಿಸಲು ಸಹಾಯಕವಾಗಿದೆ. ಇದು ಪೇಟೆಂಟ್ ಹೊಂದಿದ್ದು, ಎಸ್‍ಎಸ್‍ಎಸ್‍ಎಐನಿಂದ ಅನುಮೋದನೆಗೊಂಡಿದೆ.

vlcsnap 2020 08 06 13h02m58s114 e1596699884903

ಈ ಕಾರ್ಡಿಯೋಸೆಪ್‍ಗಳ ಸಕ್ರಿಯ ಸಂಯೋಜನೆ ನೈಸರ್ಗಿಕವಾಗಿ ಬೆಳೆದ ಕಾರ್ಡಿಯೋಸೆಪ್ ಗಳಂತೆಯೇ ಇರುವುದು ಅಧ್ಯಯನಗಳಿಂದ ದೃಢಪಟ್ಟಿದೆ. ಇದು ದೇಹದಲ್ಲಿ ಸಕ್ಕರೆ ಹಾಗೂ ಕೊಲೆಸ್ಟ್ರಾಲ್ ಪ್ರಮಾಣವನ್ನು ಸಮತೋಲನದಲ್ಲಿ ಇರಿಸುತ್ತದೆ. ದೇಹದಲ್ಲಿನ ನಂಜುಕಾರಕಗಳನ್ನು ನಿವಾರಿಸಿ ದೇಹ ಕ್ಷಮತೆಯನ್ನು ಹೆಚ್ಚಿಸುತ್ತದೆ. ಇದನ್ನು 2-3 ಗ್ರಾಂ. ನಂತೆ 15 ದಿನಗಳ ಕಾಲ ಬಳಸಿದರೆ ಉತ್ತಮ ಫಲಿತಾಂಶ ಕಾಣಬಹುದು. ನೂತನ ವಿಧಾನ ಬಳಸಿ ಇದರ ಸಕ್ರಿಯ ಘಟಕಾಂಶವನ್ನು 20 ಮಿ.ಗ್ರಾಂ.ಗೆ ಸಂವರ್ಧಿಸಲಾಗಿದೆ. ಪ್ರಯೋಗಾಲಯದಲ್ಲಿ ಇಲಿಗಳ ಮೇಲೆ ಮಾಡಿದ ಪ್ರಯೋಗದಲ್ಲಿ ಇದು ಅತ್ಯುತ್ತಮ ಫಲಿತಾಂಶ ನೀಡಿದೆ. ಇದರ ಬೆಲೆ 30 ಗ್ರಾಂ. ಗೆ 2400 ರೂ. ಆಗಿದೆ.

ಸಿಡಿ 4 ಷೀಲ್ಡ್: ಬಾಯಲ್ಲಿರಿಸಿಕೊಂಡು ಚೀಪಬಹುದಾದ ಈ ಮಾತ್ರೆಯನ್ನು ಸ್ಟೇಬಿಕಾನ್ ಕಂಪನಿಯ ಡಾ.ವಿಜಯ್ ಲಂಕಾ ಮತ್ತು ತಂಡದವರು ಅಭಿವೃದ್ಧಿಪಡಿಸಿದ್ದಾರೆ. ಇದು ಉರಿಯೂತ ಮತ್ತು ಸೋಂಕಿನ ವಿರುದ್ಧ ಹೋರಾಡುವ ಕ್ಯೂರ್ ಕ್ಯುಮಿನ್ ಮತ್ತು ವಿಟಮಿನ್ ಬಿ 12 ಅನ್ನು ಒಳಗೊಂಡಿದೆ. ದೇಹದೊಳಗೆ ವೈರಾಣು ಬೀರುವ ಪ್ರಭಾವಕ್ಕೆ ಅನುಗುಣವಾಗಿ ಸಿಡಿ4+, ಸಿಡಿ8+ ಮತ್ತು ಐಎಫ್‍ಎನ್ ಗಳನ್ನು ಸಕ್ರಿಯಗೊಳಿಸುವ ಮೂಲಕ ಅಂತರ್ಗತವಾಗಿರುವ ರೋಗ ನಿರೋಧಕ ಶಕ್ತಿಯನ್ನು ಉತ್ತೇಜಿಸುತ್ತದೆ. ರೋಗ ನಿರೋಧಕತೆಯನ್ನು ಮಾರ್ಪಾಡುಗೊಳಿಸುವ ಗುಣಸ್ವಭಾವಗಳನ್ನು ಹೊಂದಿರುವುದರ ಜೊತೆಗೆ ವೈರಾಣು ಸೋಂಕಿಗೆ ಪ್ರತಿಕ್ರಿಯೆಯಾಗಿ ಸೈಟೋಕೈನ್ ದಾಳಿಯನ್ನು ತಗ್ಗಿಸುತ್ತದೆ. ಇದು ಭಾರತೀಯ ಆಹಾರ ಸುರಕ್ಷತಾ ಮತ್ತು ಪ್ರಮಾಣೀಕರಣಗಳ ಪ್ರಾಧಿಕಾರ ಎಫ್‍ಎಸ್‍ಎಸ್‍ಐ ನಿಂದ ಅನುಮೋದನೆಗೊಂಡಿದೆ.

vlcsnap 2020 08 06 13h03m55s166 e1596700002280

ಭೀಮ್ ರೋಟಿ: ಚಪಾತಿ ರೂಪದಲ್ಲಿರುವ ಈ ರೋಗ ನಿರೋಧಕ ಉದ್ದೀಪಕವನ್ನು ಆಸ್ಪರ್ಟಿಕ ಕಂಪನಿಯ ಡಾ.ಶ್ರೀನಿವಾಸ್ ಅವರು ಅಭಿವೃದ್ಧಿಪಡಿಸಿದ್ದಾರೆ. ಆಯುಷ್ ಸಚಿವಾಲಯವು ಶಿಫಾರಸು ಮಾಡಿದ ಗಿಡಮೂಲಿಕೆಗಳ ಮಿಶ್ರಣಗಳನ್ನು ಒಳಗೊಂಡಿರುವುದು ಇದರ ವಿಶೇಷ. ಇದರ ಘಟಕಾಂಶಗಳನ್ನು ಸೂಪರ್ ಕ್ರಿಟಿಕಲ್ ಫ್ಲುಯಿಡ್ ಸಂಸ್ಕರಣಾ ತಾಂತ್ರಿಕತೆಯಿಂದ ಸಿದ್ಧಪಡಿಸಲಾಗಿದೆ. ಇದು, ವ್ಯಕ್ತಿಯ ದೇಹಕ್ಕೆ ಗಿಡಮೂಲಿಕೆ ಸಾರವು ಗರಿಷ್ಠ ಮಟ್ಟದಲ್ಲಿ ತಲುಪುವುದನ್ನು ಖಾತ್ರಿಗೊಳಿಸುತ್ತದೆ. ಈ ಚಪಾತಿಗಳು ಹೆಚ್ಚಿನ ಬಾಳಿಕೆ ಅವಧಿಯನ್ನು ಹೊಂದಿದ್ದು, ಸಂಗ್ರಹಿಸಿಡುವುದು ಕೂಡ ಸುಲಭವಾಗಿದೆ.

vlcsnap 2020 08 06 13h04m29s2 e1596700066580

ಪ್ರತಿ ಚಪಾತಿ 40 ಗ್ರಾಂ. ಇದ್ದು, 200 ಮೈಕ್ರೋಗ್ರಾಂ ಗಿಡಮೂಲಿಕೆ ಸಾರವನ್ನು ಒಳಗೊಂಡಿರುತ್ತದೆ. ಇದು `ರೆಡಿ ಟು ಈಟ್’ ಆಗಿದ್ದು, ತವಾ ಮೇಲೆ ಬಿಸಿ ಮಾಡಿಕೊಂಡು ತಿನ್ನಬಹುದು. ಕೊಠಡಿ ತಾಪಮಾನದಲ್ಲಿ 6 ತಿಂಗಳು ಬಾಳಿಕೆ ಅವಧಿ ಹೊಂದಿರುತ್ತದೆ. ಶುಂಠಿ, ಕರಿಮೆಣಸು, ಅರಿಶಿನ, ಲವಂಗ, ಕಪ್ಪು ಜೀರಿಗೆ, ಜೀರಿಗೆಗಳ ಮಿಶ್ರಣದಿಂದ ಹೊರತೆಗೆಯಲಾದ ಸಾರ ಇದರಲ್ಲಿರುತ್ತದೆ. ಇದಕ್ಕೆ ಯಾವುದೇ ಪ್ರಿಸರ್ವೇಟಿವ್ ಬಳಸುವುದಿಲ್ಲ. ಜೊತೆಗೆ ಬೇಯಿಸಿದ ನಂತರವೂ ಇದರ ಸಕ್ರಿಯ ಘಟಕಾಂಶಗಳು ಸತ್ವ ಕಳೆದುಕೊಳ್ಳುವುದಿಲ್ಲ ಎಂಬುದು ತಯಾರಕರ ವಿವರಣೆ. ಎಫ್‍ಎಸ್‍ಎಸ್‍ಐ ನಿಂದ ಅನುಮೋದನೆಗೊಂಡಿರುವ ಈ ಉತ್ಪನ್ನದ ಪೇಟೆಂಟ್ ಗಾಗಿ ಈಗಾಗಲೇ ಅರ್ಜಿ ಸಲ್ಲಿಸಲಾಗಿದೆ.

ಇಮ್ಯೂನ್ ಬೂಸ್ಟರ್(ಡೈಲಿ ಡ್ರಾಪ್ಸ್): ರೋಗ ಪ್ರತಿರೋಧ ಶಕ್ತಿ ಉದ್ದೀಪಿಸುವ ಈ ಹನಿಯನ್ನು ಕೂಡ ಆಸ್ಪರ್ಟಿಕ ಕಂಪನಿಯ ಡಾ.ಶ್ರೀನಿವಾಸ್ ಅವರೇ ಅಭಿವೃದ್ಧಿಪಡಿಸಿದ್ದಾರೆ. ಇದು ಸಹ ಆಯುಷ್ ಸಚಿವಾಲಯ ಶಿಫಾರಸು ಮಾಡಿರುವ ಗಿಡಮೂಲಿಕೆ ಮಿಶ್ರಣಗಳನ್ನು ಒಳಗೊಂಡಿದೆ. ಇದರ ಘಟಕಾಂಶಗಳನ್ನು ಸೂಪರ್ ಕ್ರಿಟಿಕಲ್ ಫ್ಲುಯಿಡ್ ಸಂಸ್ಕರಣಾ ತಾಂತ್ರಿಕತೆಯಿಂದ ಸಿದ್ಧಪಡಿಸಲಾಗಿದೆ. ವ್ಯಕ್ತಿಯ ದೇಹಕ್ಕೆ ಗಿಡಮೂಲಿಕೆ ಸಾರವು ಗರಿಷ್ಠ ಮಟ್ಟದಲ್ಲಿ ತಲುಪುವುದನ್ನು ಖಾತ್ರಿಗೊಳಿಸುತ್ತದೆ. ಒಂದು ಲೋಟ ಬಿಸಿ ನೀರಿಗೆ ಇದರ ಒಂದೇ ಒಂದು ಹನಿಯನ್ನು ಸೇರಿಸುವ ಮೂಲಕ ಪರಿಣಾಮ ಪಡೆಯಬಹುದು.

vlcsnap 2020 08 06 13h04m08s51 e1596700163515

250 ಮಿ.ಲೀ. ಬಿಸಿ ನೀರು ಹಾಗೂ 100 ಮಿ.ಲೀ. ಹಾಲಿಗೆ ಸೇರಿಸಿಕೊಂಡು ಕುಡಿಯಬಹುದು. ಇದರ ಬಾಳಿಕೆ ಅವಧಿ 3 ವರ್ಷಗಳು. ಆಯುರ್ವೇದ ವೈದ್ಯ ಪದ್ಧತಿಯಲ್ಲಿ ಒಪ್ಪಿತವಾದ `ಗೋಲ್ಡನ್ ಮಿಲ್ಕ್’ ನ ಸುಧಾರಿತ ರೂಪ ಇದಾಗಿದೆ. ಅರಿಶಿನ, ಶುಂಠಿ, ಕಪ್ಪು ಜೀರಿಗೆ, ಜೀರಿಗೆ, ಲವಂಗ, ಕರಿ ಮೆಣಸಿನ ಸಕ್ರಿಯ ಘಟಕಾಂಶಗಳನ್ನು ಇದು ಒಳಗೊಂಡಿದೆ ಎಂಬುದು ಕಂಪನಿಯ ವಿವರಣೆ. ಇದೂ ಸಹ ಎಫ್‍ಎಸ್‍ಎಸ್‍ಐ ನಿಂದ ಅನುಮೋದನೆಗೊಂಡಿದೆ.

ವೆಜ್ ಫಲ್ (ಹಣ್ಣು ಮತ್ತು ತರಕಾರಿ ಸ್ಯಾನಿಟೈಸರ್): ಕ್ರಿಮ್ಮಿ ಬಯೋಟೆಕ್ ನ ದೀಪಕ್ ಭಜಂತ್ರಿ ಇದನ್ನು ಅಭಿವೃದ್ಧಿಪಡಿಸಿದ್ದಾರೆ. ಮೈಕ್ರೋಬ್ ಗಳ (ಸೂಕ್ಷ್ಮಾಣುಜೀವಿಗಳ) ವಿರುದ್ಧ ಪರಿಣಾಮಕಾರಿಯಾದ ಮತ್ತು ಕೀಟನಾಶಕಗಳನ್ನು ಹೊರಸೆಳೆಯಬಲ್ಲ ಈ ಸ್ಯಾನಿಟೈಸರ್ ನ್ನು ಖಾದ್ಯ ಘಟಕಾಂಶಗಳನ್ನು ಬಳಸಿ ತಯಾರಿಸಲಾಗಿದೆ. ಇದು ಕ್ಲೋರಿನ್ ಹಾಗೂ ಆಲ್ಕೋಹಾಲ್ (ಮದ್ಯಸಾರ) ಮುಕ್ತ ಎಂಬುದು ಗಮನಾರ್ಹ ಅಂಶ.

vlcsnap 2020 08 06 13h05m05s103 e1596700223955

1 ಲೀಟರ್ ನೀರಿಗೆ 10 ಮಿ.ಲೀ. ದ್ರಾವಣ ಹಾಕಿ ಅದರಲ್ಲಿ 3 ನಿಮಿಷ ಕಾಲ ಹಣ್ಣು ಮತ್ತು ತರಕಾರಿಗಳನ್ನು ನೆನೆಸಬೇಕು. ನಂತರ, ಕೈಯಿಂದ ಹಣ್ಣು ಹಾಗೂ ತರಕಾರಿಗಳನ್ನು ಉಜ್ಜಿ ಹೊರತೆಗೆದು ಅವನ್ನು ಬಳಕೆ ಯೋಗ್ಯ ನೀರಿನಿಂದ ತೊಳೆಯಬೇಕು. ಇದು ಹಣ್ಣು ಹಾಗೂ ತರಕಾರಿಗಳನ್ನು ವೈರಾಣು ಮತ್ತು ಬ್ಯಾಕ್ಟೀರಿಯಾಗಳಿಂದ ಮುಕ್ತಗೊಳಿಸುತ್ತದೆ ಎನ್ನಲಾಗಿದೆ. ಇದರ ಬೆಲೆ 500 ಎಂ.ಎಲ್.ಗೆ 150 ರೂ. ಆಗಿದೆ.

ವಾಟರ್ ಸ್ಯಾನಿಟೈಸರ್- ಕಿಚನ್ ಟ್ಯಾಪ್: ಯುವಿ ಪ್ಯೂರಿಫೈಯರ್ ನ ಕಿರುರೂಪವಾದ ಇದನ್ನು ಬಯೋಫೈ ಕಂಪನಿಯ ರವಿಕುಮಾರ್ ಅಭಿವೃದ್ಧಿಪಡಿಸಿದ್ದಾರೆ. ನೀರಿನ ನಲ್ಲಿಗೆ ಇದನ್ನು ಅಳವಡಿಸಬಹುದು. ಫೇಜಸ್ ನಂತಹ ವೈರಾಣು ಸೇರಿದಂತೆ ಶೇ.99ರಷ್ಟು ಮೈಕ್ರೋಬ್ ಗಳನ್ನು ಇದು ಯಶಸ್ವಿಯಾಗಿ ಕೊಲ್ಲಲಿದೆ.

vlcsnap 2020 08 06 13h02m42s208 e1596700306540

ಆ್ಯಂಟಿ- ಮೈಕ್ರೋಬಿಯಲ್ ಎಚ್‍ವಿಎಸಿ ಮಾಡ್ಯೂಲ್: ಎಚ್‍ವಿಎಸಿ ಸಿಸ್ಟಮ್ ಗೆ ಅಳವಡಿಸಬಹುದಾದ ಈ ಮಾಡ್ಯೂಲ್ (ಘಟಕ) ನ್ನು ಬಯೋಫೈ ನ ರವಿ ಕುಮಾರ್ ಅಭಿವೃದ್ಧಿಪಡಿಸಿದ್ದಾರೆ. ಒಳಬರುವ ಗಾಳಿಯನ್ನು ನಿರ್ಮಲಗೊಳಿಸುವ ಕೆಲಸವನ್ನು ಇದು ಮಾಡುತ್ತದೆ. ಪ್ರದೂಷಣೆಯಿಂದ ಕೂಡಿರುವ ಸಾಧ್ಯತೆಯಿರುವ ಹವಾನಿಯಂತ್ರಿತ ಗಾಳಿ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇದು ಸಹಕಾರಿ. ಹೀಗಾಗಿ, ಕೋವಿಡ್-19 ಸನ್ನಿವೇಶದಲ್ಲಿ ಇದರಿಂದ ಹೆಚ್ಚಿನ ಉಪಯೋಗವಿದೆ. ಯುವಿ=ಟೈಟಾನಿಯಂ ಡೈಯಾಕ್ಸೈಡ್ ತಾಂತ್ರಿಕತೆ ಆಧರಿಸಿ ಇದನ್ನು ರೂಪಿಸಲಾಗಿದೆ. ಪೇಟೆಂಟ್ ಹೊಂದಿರುವ ಈ ಉತ್ಪನ್ನವು ದೃಢೀಕರಣಗೊಂಡಿದೆ.

TAGGED:CoronavirusDr. C. Ashwath NarayanImmunityPublic TVಕೊರೊನಾ ವೈರಸ್ಡಾ.ಸಿ.ಅಶ್ವಥ್ ನಾರಾಯಣ್ಪಬ್ಲಿಕ್ ಟಿವಿರೋಗ ನಿರೋಧಕ ಶಕ್ತಿ
Share This Article
Facebook Whatsapp Whatsapp Telegram

Cinema news

Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories

You Might Also Like

crude oil LPG
Latest

ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ

Public TV
By Public TV
28 minutes ago
Shola Forest Wildfire chikkamagaluru
Chikkamagaluru

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
2 hours ago
rcb
Bengaluru City

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಉಚಿತ

Public TV
By Public TV
2 hours ago
Samartha Shamanur
Davanagere

ಟಿಕೆಟ್‌ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಮರ್ಥ್‌ ಶಾಮನೂರು

Public TV
By Public TV
2 hours ago
g.parameshwara 2
Bengaluru City

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌

Public TV
By Public TV
3 hours ago
veterinarian dies after attacked by an hippopotamus at tiger and lion safari tyavarekoppa
Districts

ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?