ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡಬೇಕು: ಲಕ್ಷ್ಮಣ್ ಸವದಿ

Public TV
1 Min Read
LAXMAN

ಕಲಬುರಗಿ: ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ.

ಸಾರಿಗೆ ನೌಕರರ ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಯವಿಟ್ಟು ಕೊರೊನಾ ಸಂಕಷ್ಟದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನೀತಿ ಸಂಹಿತೆಯಿಂದಾಗಿ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ. ಘೋಷಣೆ ಮಾಡುವ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು.

BMTC

ನೀತಿ ಸಂಹಿತೆ ಜಾರಿ ಇರೋದ್ರಿಂದ ಏನು ಹೇಳಲು ಆಗೋದಿಲ್ಲ. ಇಂದು ಸಾರಿಗೆ ನೌಕರರ ಜೊತೆ ಜೊತೆ ಅಧಿಕಾರಿಗಳು ಸಭೆ ನಡೆಸಲಿದ್ದಾರೆ ಎಂದರು.

ಇದೇ ವೇಳೆ ಮಸ್ಕಿ, ಬಸವಕಲ್ಯಾಣ, ಬೆಳಗಾವಿಯಲ್ಲಿ ಪ್ರಚಾರ ಮಾಡುತ್ತಿದ್ದೇವೆ. ಮೂರು ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲುತ್ತದೆ. ನಮ್ಮಲ್ಲಿ ಸಣ್ಣಪುಟ್ಟ ಗೊಂದಲಗಳು ಇವೆ ವರಿಷ್ಠರು ಸರಿಪಡಿಸುತ್ತಾರೆ. ಆದರೆ ಕಾಂಗ್ರೆಸ್ಸಿನಲ್ಲಿ ಮನೆ ಒಂದು ಮೂರು ಬಾಗಿಲು ಆಗಿದೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *