Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಸಮರ್ಥವಾಗಿ ನಿಭಾಯಿಸಿದ್ದ ಶೈಲಜಾರಿಗೆ ಕೊಕ್- ಕೇರಳ ಸಿಎಂ ಹೊಸ ಕ್ಯಾಬಿನೆಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊರೊನಾ ಸಮರ್ಥವಾಗಿ ನಿಭಾಯಿಸಿದ್ದ ಶೈಲಜಾರಿಗೆ ಕೊಕ್- ಕೇರಳ ಸಿಎಂ ಹೊಸ ಕ್ಯಾಬಿನೆಟ್

Latest

ಕೊರೊನಾ ಸಮರ್ಥವಾಗಿ ನಿಭಾಯಿಸಿದ್ದ ಶೈಲಜಾರಿಗೆ ಕೊಕ್- ಕೇರಳ ಸಿಎಂ ಹೊಸ ಕ್ಯಾಬಿನೆಟ್

Public TV
Last updated: May 18, 2021 4:54 pm
Public TV
Share
2 Min Read
KK Shailaja 3
SHARE

– ಕಳೆದ ಬಾರಿಯ ಎಲ್ಲ ಸಚಿವರು ಔಟ್, ಹೊಸಬರು, ಯುವಕರಿಗೆ ಆದ್ಯತೆ

ತಿರುವನಂತಪುರಂ: ಕೇರಳದಲ್ಲಿ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್(ಎಲ್‍ಡಿಎಫ್) ಸರ್ಕಾರ ಪೂರ್ಣ ಬಹುಮತದಿಂದ ಮತ್ತೆ ಅಧಿಕಾರಕ್ಕೆ ಬಂದಿದ್ದು, ಎರಡನೇ ಬಾರಿ ಪಿಣರಾಯಿ ವಿಜಯನ್ ಮುಖ್ಯಮಂತ್ರಿಯಾಗುತ್ತಿದ್ದಾರೆ. ಆದರೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಎರಡು ದಿನ ಇರುವಾಗಲೇ ಕ್ಯಾಬಿನೆಟ್ ಕುರಿತು ಅಚ್ಚರಿಯ ವಿಷಯ ಹೊರಗೆ ಬಿದ್ದಿದೆ. ಕೊರೊನಾ ಸಮರ್ಥವಾಗಿ ನಿರ್ವಹಿಸುವ ಮೂಲಕ ವಿಶ್ವಸಂಸ್ಥೆ ಸೇರಿದಂತೆ ವಿವಿಧ ಗಣ್ಯರ ಮೆಚ್ಚುಗೆಗೆ ಪಾತ್ರವಾಗಿದ್ದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ಅವರನ್ನು ಈ ಬಾರಿ ಕ್ಯಾಬಿನೆಟ್‍ನಿಂದ ಹೊರಗಿಡಲಾಗುತ್ತಿದೆ.

pinarayi vijayam

ಕಳೆದ ಬಾರಿಯ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದಲ್ಲಿ ಆರೋಗ್ಯ ಸಚಿವೆಯಾಗಿದ್ದ ಕೆ.ಕೆ.ಶೈಲಜಾ ಅವರು 2021ರ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 60 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಅಲ್ಲದೆ ಕಳೆದ ಬಾರಿ ಆರೋಗ್ಯ ಸಚಿವೆಯಾಗಿದ್ದಾಗ ಕೊರೊನಾ ಸಮರ್ಥವಾಗಿ ನಿಭಾಯಿಸಿದ್ದರು. ಈ ಬಗ್ಗೆ ವಿಶ್ವಸಂಸ್ಥೆಯಾದಿಯಾಗಿ ಪ್ರಮುಖ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೂ ಈ ಬಾರಿಯ ಕ್ಯಾಬಿನೆಟ್‍ನಲ್ಲಿ ಇವರನ್ನು ಕೈ ಬಿಡಲಾಗಿದೆ.

KK Shailaja

ಈ ಕುರಿತು ಸಿಪಿಐ(ಎಂ) ರಾಜ್ಯ ಸಮಿತಿ ಹೇಳಿಕೆ ನೀಡಿದ್ದು, ಆರೋಗ್ಯ ಸಚಿವೆ ಶೈಲಜಾ ಸೇರಿ ಪ್ರಸ್ತುತ ಈಗಿರುವ ಎಲ್ಲ ಮಂತ್ರಿಗಳನ್ನು ಕೈ ಬಿಡಲಾಗಿದೆ. ಪಕ್ಷವು ಎಂ.ಬಿ.ರಾಜೇಶ್ ಅವರನ್ನು ಸ್ಪೀಕರ್ ಅಭ್ಯರ್ಥಿಯಾಗಿ ಘೋಷಿಸಿದೆ. ಶೈಲಜಾ ಅವರನ್ನು ಸರ್ಕಾರದ ಮುಖ್ಯ ಸಚೇತಕರಾಗಿ (ವಿಪ್) ಮಾಡಲಾಗಿದೆ. ಟಿ.ಪಿ.ರಾಮಕೃಷ್ಣನ್ ಅವರನ್ನು ಪಕ್ಷದ ಶಾಸಕಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ ಎಂದು ಪಕ್ಷ ಸ್ಪಷ್ಟಪಡಿಸಿದೆ.

ಪಿಣರಾಯಿ ವಿಜಯನ್ ಅವರನ್ನು ಸಿಎಂ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ, ಎಂ.ವಿ.ಗೋವಿಂದನ್, ಕೆ.ರಾಧಾಕೃಷ್ಣನ್, ಕೆ.ಎನ್.ಬಾಲಗೋಪಾಲ್, ಪಿ.ರಾಜೀವ್, ವಿ.ಎನ್.ವಾಸವನ್, ಸಾಜಿ ಚೆರಿಯನ್, ವಿ.ಶಿವಂಕುಟ್ಟಿ, ಮೊಹಮ್ಮದ್ ರಿಯಾಜ್, ಡಾ.ಆರ್.ಬಿಂದು, ವೀಣಾ ಜಾರ್ಜ್ ಹಾಗೂ ವಿ.ಅಬ್ದುಲ್ ರೆಹ್ಮಾನ್ ಅವರನ್ನು ಸಚಿವರಾಗಿ ಘೋಷಿಸಲಾಗಿದೆ ಎಂದು ಸಿಪಿಐ(ಎಂ) ತಿಳಿಸಿದೆ.

KK Shailaja 2

ಶೈಲಜಾ ಅವರನ್ನು ಕ್ಯಾಬಿನೆಟ್‍ನಿಂದ ಹೊರಗಿರಿಸಿದ್ದಕ್ಕೆ ಶಾಸಕ ಎ.ಎನ್.ಶಮ್ಸೀರ್ ಪ್ರತಿಕ್ರಿಯಿಸಿ, ಇದು ನಮ್ಮ ಪಕ್ಷದ ನಾಯಕರು ಕೈಗೊಂಡಿರುವ ಸಾಮೂಹಿಕ ನಿರ್ಧಾರವಾಗಿದೆ. ಒಬ್ಬ ವ್ಯಕ್ತಿಯನ್ನು ಪಕ್ಷದಿಂದ ಹೊರಗಿಟ್ಟು ನೋಡಬೇಡಿ, ಈ ಕುರಿತು ಪಕ್ಷದ ನಾಯಕರನ್ನೇ ಪ್ರಶ್ನಿಸಬೇಕು. ಹೊಸ ಕ್ಯಾಬಿನೆಟ್‍ನಲ್ಲಿ ಪಿಣರಾಯಿ ವಿಜಯನ್ ಹೊರತುಪಡಿಸಿ ಬೇರೆ ಯಾವ ಸಚಿವರೂ ಇಲ್ಲ. ಎಲ್ಲ ಹೊಸಬರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಇದು ಯುವಕರ ಹಾಗೂ ಹಿರಿಯರ ಮಿಶ್ರಣವಾಗಿದೆ ಎಂದು ವಿವರಿಸಿದ್ದಾರೆ.

corona 2 1

ಎಲ್‍ಡಿಎಫ್ ವಕ್ತಾರ ಎ.ವಿಜಯರಾಘವನ್ ಈ ಕುರಿತು ಸೋಮವಾರವೇ ಮಾಹಿತಿ ನೀಡಿದ್ದು, ಮೇ 20ರಂದು ಪಿಣರಾಯಿ ವಿಜಯನ್ ಸೇರಿ 21 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರಲ್ಲಿ 12 ಜನ ಸಿಪಿಐ(ಎಂ), ನಾಲ್ವರು ಸಿಪಿಐ, ಕೇರಳ ಕಾಂಗ್ರೆಸ್(ಎಂ), ಜೆಡಿಎಸ್ ಹಾಗೂ ಎನ್‍ಸಿಪಿಯಿಂದ ತಲಾ ಒಬ್ಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಉಳಿದಂತೆ ನಾಲ್ಕು ಏಕ ಶಾಸಕರ ಪಕ್ಷಗಳು ಎರಡು ಕ್ಯಾಬಿನೆಟ್ ಹುದ್ದೆಗಳನ್ನು ಹಂಚಿಕೊಳ್ಳಲಿದ್ದು, ಪ್ರತಿ ಪಕ್ಷವು ತಲಾ 2.5 ವರ್ಷಗಳ ಅವಧಿಯನ್ನು ಪಡೆಯುತ್ತದೆ ಎಂದು ತಿಳಿಸಿದ್ದರು.

TAGGED:cabinetCPI (M)keralaKK ShailajaPublic TVಕೆ.ಕೆ.ಶೈಲಜಾಕೇರಳಕ್ಯಾಬಿನೆಟ್ಪಬ್ಲಿಕ್ ಟಿವಿಸಿಪಿಐಎಂ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
3 minutes ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
47 minutes ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
1 hour ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
1 hour ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
2 hours ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?