Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಕೊರೊನಾ ಸೋಂಕಿರುವುದನ್ನು ಮುಚ್ಚಿಟ್ಟ ವರ- ಮದ್ವೆಯಾದ 5 ದಿನಕ್ಕೆ ಸಾವು

Public TV
Last updated: July 1, 2020 5:49 pm
Public TV
Share
2 Min Read
KWR COVID
SHARE

-ಮದುವೆಗೆ ಆಗಮಿಸಿದ್ದ ನೆಂಟರಿಷ್ಟರಿಗೂ ಸೋಂಕು

ಕಾರವಾರ: ಮದುವೆ ಸಂಭ್ರಮದಲ್ಲಿ ತನಗೆ ಕೊರೊನಾ ಸೋಂಕು ಹರಡಿರುವುದನ್ನು ಮುಚ್ಚಿಟ್ಟು ಮದುವೆಯಾಗಿದ್ದ ಮದುಮಗ ವಿವಾಹ ಜರುಗಿದ 5ದಿನಕ್ಕೆ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಮದುವೆ ಸಂಭ್ರಮದಲ್ಲಿದ್ದ ಮದುಮಗ ಸದ್ಯ ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ನೆಂಟರು ಹಾಗೂ ಕುಟುಂಬಕ್ಕೆ ಸೋಂಕು ಹರಡಲು ಕಾರಣನಾಗಿದ್ದಾನೆ.

coronavirus 4833754 1920 1

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ ಭಟ್ಕಳದ 26 ವರ್ಷದ ಯುವಕ ತನ್ನ ಮದುವೆ ಸಂಭ್ರಮದಲ್ಲಿದ್ದ. ಈತನಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಇದರಿಂದ ತನ್ನ ಮದುವೆಗೆ ತೊಂದರೆಯಾಗಬಹುದು ಎಂಬ ಕಾರಣದಿಂದ ಎಲ್ಲವನ್ನೂ ಮುಚ್ಚಿಟ್ಟು ಜೂನ್ 25 ರಂದು ಭಟ್ಕಳದಲ್ಲಿ ಮದುವೆಯಾಗಿ ಮಂಗಳೂರಿನಲ್ಲಿರುವ ತನ್ನ ಮನೆಗೆ ತೆರಳಿದ್ದ. ಈ ವೇಳೆ ಸೋಂಕಿನ ತೀವ್ರತೆ ಹೆಚ್ಚಾಗಿ ಮದುವೆಯಾದ ಐದು ದಿನದಲ್ಲೇ ಸಾವನ್ನಪ್ಪಿದ್ದಾನೆ. ಅಲ್ಲದೇ ಮದುವೆ ಸಮಯದಲ್ಲಿ ಈತನ ಕುಟುಂಬದ 75 ಮತ್ತು 65 ವರ್ಷದ ವೃದ್ಧರಿಬ್ಬರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.

marriage

ವೃದ್ಧರಿಬ್ಬರಿಂದ ಸದ್ಯ ಕುಟುಂಬದ 20 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ ಒಂದು ವರ್ಷದ ಮಗುವು ಸೇರಿ 18 ವರ್ಷದ ಒಳಗಿನ 8 ಜನ ಅಪ್ರಾಪ್ತರು ಸೇರಿದ್ದಾರೆ. ಇದಲ್ಲದೇ ಈತನ ಮದುವೆಯಲ್ಲಿ ಭಾಗಿಯಾದ 70 ಜನ ಸಂಬಂಧಿಕರನ್ನು ಕ್ವಾರಂಟೈನ್ ಮಾಡಲಾಗಿದ್ದು ಇವರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.

ಕುಟುಂಬವು ಮದುವೆ ಕಾರಣದಿಂದ ಸೋಂಕಿರುವುದನ್ನು ಮುಚ್ಚಿಟ್ಟು ಹಲವು ಜನರಿಗೆ ಸೋಂಕು ತಗುಲುವಂತೆ ಮಾಡಿದೆ. ಇದಲ್ಲದೇ ಇವರ ಕುಟುಂಬದ ಇಬ್ಬರು ವೃದ್ಧರ ಸ್ಥಿತಿಯೂ ಗಂಭೀರವಾಗಿದೆ. ಈ ಎಲ್ಲಾ ಹಿನ್ನೆಲೆಯನ್ನನು ಅವಲೋಕಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಅವರು ಯುವಕನ ಕುಟುಂಬಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.

KWR DC

ಜಿಲ್ಲೆಯ ಭಟ್ಕಳ ನಗರ ಒಂದರಲ್ಲೇ 93 ಜನ ಕೊರೊನಾ ಸೋಂಕಿತರು ಇದುವರೆಗೂ ದಾಖಲಾಗಿದ್ದಾರೆ. ಜಿಲ್ಲಾಡಳಿತ ಇದುವರೆಗೂ 1,765 ಜನರ ಗಂಟಲು ದ್ರವ ಪರೀಕ್ಷೆ ನಡೆಸಿದೆ. ಇನ್ನು 58 ಮಂದಿಯ ಸ್ಯಾಂಪಲ್ ಫಲಿತಾಂಶ ಬರಬೇಕಿದೆ.

ಭಟ್ಕಳದಲ್ಲಿ ಕಠಿಣ ಕ್ರಮ: ಘಟನೆಯಿಂದಾಗಿ ಸದ್ಯ 20 ಜನರಿಗೆ ಸೋಂಕು ತಗುಲಿದ್ದು, ಇಂದು 10ಕ್ಕೂ ಹೆಚ್ಚು ಜನರಿಗೆ ಸೋಂಕು ದೃಢಪಡುವುದು ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಭಟ್ಕಳದ ಪ್ರತಿ ವಾರ್ಡಿಗೆ ಎರಡು ಫೀವರ್ ಕ್ಲಿನಿಕ್ ಸ್ಥಾಪನೆ ಮಾಡಲಾಗುತ್ತಿದೆ. ಪ್ರತಿ ದಿನ ಮಕ್ಕಳು, ಮಹಿಳೆಯರು, ವೃದ್ಧರು ಕಡ್ಡಾಯವಾಗಿ ತಮ್ಮ ವಾರ್ಡಿನಲ್ಲಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕಿದೆ. ಇಲ್ಲವಾದರೆ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಜೊತೆಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ತಿಳಿಸಿದ್ದಾರೆ.

TAGGED:CoronaCovid 19karwarmarriagePublic TVUttara Kannadayouthಉತ್ತರ ಕನ್ನಡಕಾರವಾರಕೊರೊನಾಕೋವಿಡ್ 19ಪಬ್ಲಿಕ್ ಟಿವಿಮದುವೆಯುವಕ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
3 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

Air India Crash CM Siddaramaiah
Bengaluru City

ಏರ್‌ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ಸಿದ್ದರಾಮಯ್ಯ

Public TV
By Public TV
15 minutes ago
DK Shivakumar 6
Bengaluru City

ಅಹಮದಾಬಾದ್ ವಿಮಾನ ಪತನ ದುರದುಷ್ಟಕರ ಘಟನೆ: ಡಿ.ಕೆ ಶಿವಕುಮಾರ್

Public TV
By Public TV
19 minutes ago
Ahmedabad Planecrash
Latest

ʻಮೇ ಡೇʼ – ವಿಮಾನ ಪತನಕ್ಕೂ ಮುನ್ನ ಎಟಿಸಿಗೆ ಪೈಲಟ್‌ ಕೊಟ್ಟ ಕೊನೆಯ ಸಂದೇಶ

Public TV
By Public TV
23 minutes ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
25 minutes ago
Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
42 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
43 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?