Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ಹಗರಣ – ಅನುಮಾನ ಮೂಡಿಸುತ್ತಿದೆ ಸರ್ಕಾರದ ನಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರೊನಾ ಹಗರಣ – ಅನುಮಾನ ಮೂಡಿಸುತ್ತಿದೆ ಸರ್ಕಾರದ ನಡೆ

Bengaluru City

ಕೊರೊನಾ ಹಗರಣ – ಅನುಮಾನ ಮೂಡಿಸುತ್ತಿದೆ ಸರ್ಕಾರದ ನಡೆ

Public TV
Last updated: July 24, 2020 9:28 pm
Public TV
Share
3 Min Read
corona corruption bjp congress covid19
SHARE

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ 2 ಸಾವಿರ ಕೋಟಿ ರೂ. ಹಗರಣದ ಆರೋಪ ಮಾಡಿದ ಬೆನ್ನಲ್ಲೇ ತಾನು ಹೆಣೆದ ಬಲೆಯಲ್ಲಿ ಬಿಜೆಪಿ ಸರ್ಕಾರ ಸಿಲುಕಿಕೊಳ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಈ ಪ್ರಶ್ನೆ ಏಳಲು ಕಾರಣ ಸರ್ಕಾರದ ಅನುಮಾನದ ನಡೆ. ಯಾಕಂದ್ರೆ, ಕೊರೊನಾ ವೈದ್ಯಕೀಯ ಸಲಕರಣೆಗಳ ಖರೀದಿ ಆರೋಪ ಕೇಳಿ ಬಂದ ದಿನದಿಂದಲೂ ಸರ್ಕಾರದ ಪ್ರತಿಯೊಂದು ನಡೆಯೂ ಅನುಮಾನ ಮೂಡಿಸುವಂತೆ ಇದೆ.

Ventilator

ಯಾಕೆ ಅನುಮಾನ?
ಆರಂಭದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ತನಿಖೆಯನ್ನು ಸರ್ಕಾರ ತಡೆದಿತ್ತು. ಬಳಿಕ – ಆಸ್ಪತ್ರೆಗಳ ಪರಿಶೀಲನೆಗೆ ಮುಂದಾದಾಗ ಅದನ್ನು ತಡೆದಿತ್ತು. ಸಿದ್ದರಾಮಯ್ಯ ಹಗರಣ ಆರೋಪ ಮಾಡಿ ಪತ್ರ ಬರೆದಾಗ 17 ದಿನಗಳ ಕಾಲ ಪ್ರತಿಕ್ರಿಯೆ ನೀಡಿರಲಿಲ್ಲ. ಯಾರಿಗೂ ಕೊರೊನಾ ಕುರಿತ ಮಾಹಿತಿ ನೀಡದಂತೆ ಆರೋಗ್ಯ ಇಲಾಖೆಗೆ ಸೂಚಿಸಿತ್ತು. ದಾದ ಬಳಿಕ ಹಗರಣದ ಆರೋಪದ ಯಾವುದೇ ಪ್ರಶ್ನೆಗಳಿಗೂ ನಿಖರ ಮಾಹಿತಿ, ದಾಖಲೆ ನೀಡದೇ ಇರುವ ಕಾರಣ ಸರ್ಕಾರದ ನಡೆ ಅನುಮಾನ ಮೂಡಿಸುವಂತಿದೆ.

mask fm

ಮತ್ತೆ ಕೆಣಕಿದ ಸಿದ್ದರಾಮಯ್ಯ
ನಿನ್ನೆ 2000 ಕೋಟಿ ಹಗರಣ ಆರೋಪ ಮಾಡಿರೋ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಕೂಡ ಬಿಜೆಪಿ ಸರ್ಕಾರವನ್ನು ಕೆಣಕಿದ್ದಾರೆ. ವೈದ್ಯಕೀಯ ಉಪಕರಣಗಳ ಖರೀದಿಯೆಲ್ಲವೂ ಪಾರದರ್ಶಕವಾಗಿದ್ದರೆ, ನ್ಯಾಯಾಂಗ ತನಿಖೆಗೆ ಭಯವೇಕೆ ಅಂತ ಚಿವುಟಿದ್ದಾರೆ. ಇವತ್ತು ಮತ್ತೊಮ್ಮೆ ಸುದ್ದಿಗೋಷ್ಠಿ ಮಾಡುವ ಜೊತೆಗೆ, 15ಕ್ಕೂ ಹೆಚ್ಚು ಟ್ವೀಟ್‍ಗಳ ಮೂಲಕ ಬಿಜೆಪಿ ಸರ್ಕಾರವನ್ನು ಕಾಡಿದ್ದಾರೆ. ಆದ್ರೆ, ಹಗರಣದ ತನಿಖೆಗೆ ಸಿದ್ದರಾಮಯ್ಯ ಬಿಗಿಪಟ್ಟು ಹಿಡಿದಿದ್ದರೂ, ಬಿಜೆಪಿ ಸಚಿವರು ಮಾತ್ರ ತುಟಿ ಬಿಚ್ಚಿಲ್ಲ.

"2,000 ಕೋಟಿ ವೆಚ್ಚದಲ್ಲಿ 50,000 ವೆಂಟಿಲೇಟರ್‌ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ" ಎಂದು ಪ್ರಧಾನಿ‌ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

"ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‌ಗಳು ಕಳಪೆ" ಎಂದು ಈ ಮಂತ್ರಿಗಳು ಹೇಳಲಿ ನೋಡೋಣ.
5/15#LekkaKodi

— Siddaramaiah (@siddaramaiah) July 24, 2020

ನ್ಯಾಯಾಂಗ ತನಿಖೆ ನಡೆಸುವುದನ್ನು ಬಿಟ್ಟು ಉಳಿದೆಲ್ಲದರ ಮಾತನಾಡಿದ್ದಾರೆ. ನಿನ್ನೆ ವೀರಾವೇಶದ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಒಂದು ಹೆಜ್ಜೆ ಹಿಂದೆ ಇಟ್ಟಂತೆ ಕಾಣುತ್ತಿದೆ. ತನಿಖೆ ನಡೆಸುವಂತೆ ಸಿದ್ದರಾಮಯ್ಯ ನಮಗೆ ಸೂಚನೆ ಕೊಡುವ ಅಧಿಕಾರ ಹೊಂದಿಲ್ಲ. 2019ರ ವೆಂಟಿರೇಟರ್ ಖರೀದಿಯ ತನಿಖೆ ಬಗ್ಗೆ ನಾವ್ ತೀರ್ಮಾನ ಮಾಡ್ತೀವಿ. ಸಿದ್ದರಾಮಯ್ಯ ಹೇಳಿದ್ರು ಅಂತ ತನಿಖೆ ಮಾಡುವುದಿಲ್ಲ ಎಂದಿದ್ದಾರೆ.

ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರು,ಮೊಬೈಲ್ ಎಲ್ಲದರಲ್ಲಿಯೂ‌ ಸಾಮಾನ್ಯ, ಐಷಾರಾಮಿ‌ ಎರಡೂ ಇರುತ್ತವೆ.
ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬಹುದಿತ್ತಲ್ಲವೇ? ಯಾಕೆ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದರು? ಇದಕ್ಕೆ ಮಂತ್ರಿಗಳಲ್ಲಿ ಉತ್ತರ ಇದೆಯೇ?
6/15

— Siddaramaiah (@siddaramaiah) July 24, 2020

ಇನ್ನೊಂದೆಡೆ ಡಿಸಿಎಂ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ನಡೆಸಿದರಾದರೂ, ತನಿಖೆ ಬಗ್ಗೆ ಮಾತನಾಡಲಿಲ್ಲ. ಸಿದ್ದರಾಮಯ್ಯ ಹೇಳಿದಂತೆ ಸಮಾಜ ಕಲ್ಯಾಣ ಇಲಾಖೆಯಲ್ಲಿ 500 ಕೋಟಿ ಅಕ್ರಮವಾಗಿಲ್ಲ. ನನ್ನ ಇಲಾಖೆಯಲ್ಲಿ 5 ಕೋಟಿಯೂ ಖರ್ಚಾಗಿಲ್ಲ. ಹೀಗಾಗಿ ಸುಳ್ಳಿಗೆ ತನಿಖೆ ಬೇಕಾ ಅಂತ ಪ್ರಶ್ನಿಸಿದರು.

ಮಹಾಭಾರತದ ಪಾಂಡವರು- ಕೌರವರ ಚರ್ಚೆ ಈಗ ಯಾಕೆ? ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಎಳೆದು ತರುವುದೇಕೆ ?

ಅವರು ಕೌರವರಾಗಲೂ ಅರ್ಹತೆ ಇಲ್ಲದ ದುಷ್ಟರು.

ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ.

ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ,
ಐಯಾಮ್ ಸಿದ್ದರಾಮಯ್ಯ ಓನ್ಲಿ.
11/15#LekkaKodi

— Siddaramaiah (@siddaramaiah) July 24, 2020

ಈ ಮಧ್ಯೆ, ಸರಣಿ ಪ್ರಶ್ನೆಗಳ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಪಂಚ ಸಚಿವರಿಗೆ ಪಂಚ ಪ್ರಶ್ನೆ ಕೇಳಿದ್ದಾರೆ. ಆದರೆ ಸಿದ್ದರಾಮಯ್ಯ ಪ್ರಶ್ನೆಗಳಿಗೆ ಯಡಿಯೂರಪ್ಪ ಕ್ಯಾಬಿನೆಟ್ ಸಚಿವರು ಯಾರು ತುಟಿಬಿಚ್ಚಿಲ್ಲ. ತಪ್ಪೇ ಮಾಡಿಲ್ಲ ಎಂದಾದರೆ ತನಿಖೆಗೆ ಭಯ ಏಕೆ? ಅನ್ನೋದು ಇಲ್ಲಿ ಪ್ರಶ್ನೆ. ಜೊತೆಗೆ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಐವರು ಸಚಿವರ ಪೈಕಿ ನಾಲ್ವರು ಇಂದು ಎಲ್ಲೂ ಕಾಣಿಸಿಕೊಳ್ಳಲಿಲ್ಲ.

ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ.
ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ.

ನಾವು ತನಿಖೆಗೆ ಆಗ್ರಹಿಸಿದ ಮೇಲೆ ಉಪಕರಣಗಳ ಖರೀದಿಗೆ ನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು.
4/15#LekkaKodi

— Siddaramaiah (@siddaramaiah) July 24, 2020

ಸರ್ಕಾರಕ್ಕೆ ಸಿದ್ದು ಪಂಚಪ್ರಶ್ನೆ..
ಪ್ರಶ್ನೆ 1 > ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?
ಪ್ರಶ್ನೆ 2 > ಸರ್ಕಾರ ಅಕ್ರಮ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ?
ಪ್ರಶ್ನೆ 3 > ವೆಂಟಿಲೇಟರ್‌ಗಳನ್ನು ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಕೇಂದ್ರ ಸರ್ಕಾರ ಖರೀದಿಸಿದ್ದು ಸುಳ್ಳಾ?
ಪ್ರಶ್ನೆ 4 > ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಖರೀದಿ ಬಗ್ಗೆ ತನಿಖೆ ನಡೆಸಬಹುದಲ್ಲವೇ?
ಪ್ರಶ್ನೆ 5 > ಬಿಬಿಎಂಪಿ ಆಯುಕ್ತರ ಏಕಾಏಕಿ ವರ್ಗಾವಣೆ ಯಾಕಾಯ್ತು? ಯಾರ ಭ್ರಷ್ಟಾಚಾರ ಮುಚ್ಚಿಡಲು ಅವರನ್ನು ಬಲಿ ಕೊಟ್ಟಿರಿ?

ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದು ನಿಜ. ತಜ್ಞರ ಶಿಫಾರಸು ಇಲ್ಲದೆ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ‌ ಟಿಪ್ಪಣಿ ಬರೆಯಲಾಗಿರುವುದು ನಿಜ. ಈ ಟಿಪ್ಪಣಿಯ ಮಹತ್ವ ಏನು?
8/15#LekkaKodi

— Siddaramaiah (@siddaramaiah) July 24, 2020

TAGGED:bjpcongresscorruptionCovid 19ventilatorಕರ್ನಾಟಕಕೊರೊನಾಕೋವಿಡ್ 19ಬಿಜೆಪಿಬೆಂಗಳೂರುಭ್ರಷ್ಟಾಚಾರ
Share This Article
Facebook Whatsapp Whatsapp Telegram

Cinema news

BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows

You Might Also Like

gold
Bengaluru City

ಚಿನ್ನ 10 ಗ್ರಾಂಗೆ 1.50 ಲಕ್ಷ, ಬೆಳ್ಳಿ ಕೆ.ಜಿಗೆ 3 ಲಕ್ಷ: ಸಾರ್ವಕಾಲಿಕ ದಾಖಲೆ

Public TV
By Public TV
1 minute ago
DGP Ramachandra Rao copy
Bengaluru City

ರಾಸಲೀಲೆ ವಿಡಿಯೋ ವೈರಲ್ – ಡಿಜಿಪಿ ರಾಮಚಂದ್ರರಾವ್ ತಲೆದಂಡ

Public TV
By Public TV
21 minutes ago
01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಬಹುದೇ ಮದ್ದು?

Public TV
By Public TV
8 hours ago
budget 2026 tax
Latest

Budget 2026 income tax expectations: ಹೊಸ ತೆರಿಗೆ ಪದ್ಧತಿ ಮತ್ತಷ್ಟು ಲಾಭದಾಯಕವಾಗುತ್ತಾ?

Public TV
By Public TV
8 hours ago
RCB Women vs Gujarat Giants Women won by 61 runs RCB QUALIFY FOR THE PLAYOFFS
Cricket

ಗುಜರಾತ್‌ ವಿರುದ್ಧ 61 ರನ್‌ಗಳ ಭರ್ಜರಿ ಜಯ – ಪ್ಲೇ ಆಫ್‌ ಪ್ರವೇಶಿಸಿದ ಆರ್‌ಸಿಬಿ

Public TV
By Public TV
9 hours ago
Nitin Nabin
Latest

ಹೊಸ ತಲೆಮಾರಿನತ್ತ ಹೆಜ್ಜೆ ಹಾಕಿದ ಬಿಜೆಪಿ – 45 ವರ್ಷಕ್ಕೆ ನಿತಿನ್ ನಬಿನ್‌ಗೆ ಅಧ್ಯಕ್ಷ ಪಟ್ಟ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?