Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೊರೊನಾ ಹಗರಣ – ಅನುಮಾನ ಮೂಡಿಸುತ್ತಿದೆ ಸರ್ಕಾರದ ನಡೆ

Public TV
Last updated: July 24, 2020 9:28 pm
Public TV
Share
3 Min Read
corona corruption bjp congress covid19
SHARE

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ 2 ಸಾವಿರ ಕೋಟಿ ರೂ. ಹಗರಣದ ಆರೋಪ ಮಾಡಿದ ಬೆನ್ನಲ್ಲೇ ತಾನು ಹೆಣೆದ ಬಲೆಯಲ್ಲಿ ಬಿಜೆಪಿ ಸರ್ಕಾರ ಸಿಲುಕಿಕೊಳ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಈ ಪ್ರಶ್ನೆ ಏಳಲು ಕಾರಣ ಸರ್ಕಾರದ ಅನುಮಾನದ ನಡೆ. ಯಾಕಂದ್ರೆ, ಕೊರೊನಾ ವೈದ್ಯಕೀಯ ಸಲಕರಣೆಗಳ ಖರೀದಿ ಆರೋಪ ಕೇಳಿ ಬಂದ ದಿನದಿಂದಲೂ ಸರ್ಕಾರದ ಪ್ರತಿಯೊಂದು ನಡೆಯೂ ಅನುಮಾನ ಮೂಡಿಸುವಂತೆ ಇದೆ.

Ventilator

ಯಾಕೆ ಅನುಮಾನ?
ಆರಂಭದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ತನಿಖೆಯನ್ನು ಸರ್ಕಾರ ತಡೆದಿತ್ತು. ಬಳಿಕ – ಆಸ್ಪತ್ರೆಗಳ ಪರಿಶೀಲನೆಗೆ ಮುಂದಾದಾಗ ಅದನ್ನು ತಡೆದಿತ್ತು. ಸಿದ್ದರಾಮಯ್ಯ ಹಗರಣ ಆರೋಪ ಮಾಡಿ ಪತ್ರ ಬರೆದಾಗ 17 ದಿನಗಳ ಕಾಲ ಪ್ರತಿಕ್ರಿಯೆ ನೀಡಿರಲಿಲ್ಲ. ಯಾರಿಗೂ ಕೊರೊನಾ ಕುರಿತ ಮಾಹಿತಿ ನೀಡದಂತೆ ಆರೋಗ್ಯ ಇಲಾಖೆಗೆ ಸೂಚಿಸಿತ್ತು. ದಾದ ಬಳಿಕ ಹಗರಣದ ಆರೋಪದ ಯಾವುದೇ ಪ್ರಶ್ನೆಗಳಿಗೂ ನಿಖರ ಮಾಹಿತಿ, ದಾಖಲೆ ನೀಡದೇ ಇರುವ ಕಾರಣ ಸರ್ಕಾರದ ನಡೆ ಅನುಮಾನ ಮೂಡಿಸುವಂತಿದೆ.

mask fm

ಮತ್ತೆ ಕೆಣಕಿದ ಸಿದ್ದರಾಮಯ್ಯ
ನಿನ್ನೆ 2000 ಕೋಟಿ ಹಗರಣ ಆರೋಪ ಮಾಡಿರೋ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಕೂಡ ಬಿಜೆಪಿ ಸರ್ಕಾರವನ್ನು ಕೆಣಕಿದ್ದಾರೆ. ವೈದ್ಯಕೀಯ ಉಪಕರಣಗಳ ಖರೀದಿಯೆಲ್ಲವೂ ಪಾರದರ್ಶಕವಾಗಿದ್ದರೆ, ನ್ಯಾಯಾಂಗ ತನಿಖೆಗೆ ಭಯವೇಕೆ ಅಂತ ಚಿವುಟಿದ್ದಾರೆ. ಇವತ್ತು ಮತ್ತೊಮ್ಮೆ ಸುದ್ದಿಗೋಷ್ಠಿ ಮಾಡುವ ಜೊತೆಗೆ, 15ಕ್ಕೂ ಹೆಚ್ಚು ಟ್ವೀಟ್‍ಗಳ ಮೂಲಕ ಬಿಜೆಪಿ ಸರ್ಕಾರವನ್ನು ಕಾಡಿದ್ದಾರೆ. ಆದ್ರೆ, ಹಗರಣದ ತನಿಖೆಗೆ ಸಿದ್ದರಾಮಯ್ಯ ಬಿಗಿಪಟ್ಟು ಹಿಡಿದಿದ್ದರೂ, ಬಿಜೆಪಿ ಸಚಿವರು ಮಾತ್ರ ತುಟಿ ಬಿಚ್ಚಿಲ್ಲ.

"2,000 ಕೋಟಿ ವೆಚ್ಚದಲ್ಲಿ 50,000 ವೆಂಟಿಲೇಟರ್‌ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ" ಎಂದು ಪ್ರಧಾನಿ‌ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

"ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‌ಗಳು ಕಳಪೆ" ಎಂದು ಈ ಮಂತ್ರಿಗಳು ಹೇಳಲಿ ನೋಡೋಣ.
5/15#LekkaKodi

— Siddaramaiah (@siddaramaiah) July 24, 2020

ನ್ಯಾಯಾಂಗ ತನಿಖೆ ನಡೆಸುವುದನ್ನು ಬಿಟ್ಟು ಉಳಿದೆಲ್ಲದರ ಮಾತನಾಡಿದ್ದಾರೆ. ನಿನ್ನೆ ವೀರಾವೇಶದ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಒಂದು ಹೆಜ್ಜೆ ಹಿಂದೆ ಇಟ್ಟಂತೆ ಕಾಣುತ್ತಿದೆ. ತನಿಖೆ ನಡೆಸುವಂತೆ ಸಿದ್ದರಾಮಯ್ಯ ನಮಗೆ ಸೂಚನೆ ಕೊಡುವ ಅಧಿಕಾರ ಹೊಂದಿಲ್ಲ. 2019ರ ವೆಂಟಿರೇಟರ್ ಖರೀದಿಯ ತನಿಖೆ ಬಗ್ಗೆ ನಾವ್ ತೀರ್ಮಾನ ಮಾಡ್ತೀವಿ. ಸಿದ್ದರಾಮಯ್ಯ ಹೇಳಿದ್ರು ಅಂತ ತನಿಖೆ ಮಾಡುವುದಿಲ್ಲ ಎಂದಿದ್ದಾರೆ.

ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರು,ಮೊಬೈಲ್ ಎಲ್ಲದರಲ್ಲಿಯೂ‌ ಸಾಮಾನ್ಯ, ಐಷಾರಾಮಿ‌ ಎರಡೂ ಇರುತ್ತವೆ.
ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬಹುದಿತ್ತಲ್ಲವೇ? ಯಾಕೆ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿಸಿದರು? ಇದಕ್ಕೆ ಮಂತ್ರಿಗಳಲ್ಲಿ ಉತ್ತರ ಇದೆಯೇ?
6/15

— Siddaramaiah (@siddaramaiah) July 24, 2020

ಇನ್ನೊಂದೆಡೆ ಡಿಸಿಎಂ ಗೋವಿಂದ ಕಾರಜೋಳ ಸುದ್ದಿಗೋಷ್ಠಿ ನಡೆಸಿದರಾದರೂ, ತನಿಖೆ ಬಗ್ಗೆ ಮಾತನಾಡಲಿಲ್ಲ. ಸಿದ್ದರಾಮಯ್ಯ ಹೇಳಿದಂತೆ ಸಮಾಜ ಕಲ್ಯಾಣ ಇಲಾಖೆಯಲ್ಲಿ 500 ಕೋಟಿ ಅಕ್ರಮವಾಗಿಲ್ಲ. ನನ್ನ ಇಲಾಖೆಯಲ್ಲಿ 5 ಕೋಟಿಯೂ ಖರ್ಚಾಗಿಲ್ಲ. ಹೀಗಾಗಿ ಸುಳ್ಳಿಗೆ ತನಿಖೆ ಬೇಕಾ ಅಂತ ಪ್ರಶ್ನಿಸಿದರು.

ಮಹಾಭಾರತದ ಪಾಂಡವರು- ಕೌರವರ ಚರ್ಚೆ ಈಗ ಯಾಕೆ? ದ್ವಾಪರ ಯುಗದಲ್ಲಿ ನಡೆದಿದ್ದನ್ನು ಈಗ ಎಳೆದು ತರುವುದೇಕೆ ?

ಅವರು ಕೌರವರಾಗಲೂ ಅರ್ಹತೆ ಇಲ್ಲದ ದುಷ್ಟರು.

ನಾನು ನನ್ನನ್ನು ಬೇರೆಯವರಿಗೆ ಹೋಲಿಕೆ ಮಾಡಿಕೊಳ್ಳುವುದಿಲ್ಲ.

ನಾನು ಪಾಂಡವನೂ ಅಲ್ಲ, ಕೌರವನೂ ಅಲ್ಲ,
ಐಯಾಮ್ ಸಿದ್ದರಾಮಯ್ಯ ಓನ್ಲಿ.
11/15#LekkaKodi

— Siddaramaiah (@siddaramaiah) July 24, 2020

ಈ ಮಧ್ಯೆ, ಸರಣಿ ಪ್ರಶ್ನೆಗಳ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಪಂಚ ಸಚಿವರಿಗೆ ಪಂಚ ಪ್ರಶ್ನೆ ಕೇಳಿದ್ದಾರೆ. ಆದರೆ ಸಿದ್ದರಾಮಯ್ಯ ಪ್ರಶ್ನೆಗಳಿಗೆ ಯಡಿಯೂರಪ್ಪ ಕ್ಯಾಬಿನೆಟ್ ಸಚಿವರು ಯಾರು ತುಟಿಬಿಚ್ಚಿಲ್ಲ. ತಪ್ಪೇ ಮಾಡಿಲ್ಲ ಎಂದಾದರೆ ತನಿಖೆಗೆ ಭಯ ಏಕೆ? ಅನ್ನೋದು ಇಲ್ಲಿ ಪ್ರಶ್ನೆ. ಜೊತೆಗೆ ನಿನ್ನೆ ಸುದ್ದಿಗೋಷ್ಠಿ ನಡೆಸಿದ್ದ ಐವರು ಸಚಿವರ ಪೈಕಿ ನಾಲ್ವರು ಇಂದು ಎಲ್ಲೂ ಕಾಣಿಸಿಕೊಳ್ಳಲಿಲ್ಲ.

ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ.
ತನಿಖೆಗೆ ಸರ್ಕಾರ ಒಪ್ಪುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ.

ನಾವು ತನಿಖೆಗೆ ಆಗ್ರಹಿಸಿದ ಮೇಲೆ ಉಪಕರಣಗಳ ಖರೀದಿಗೆ ನೀಡಿದ್ದ ಆದೇಶ ರದ್ದು ಮಾಡಲಾಗಿದೆ ಎಂಬುದರ ಬಗ್ಗೆ ನನಗೆ ತಿಳಿಯದು.
4/15#LekkaKodi

— Siddaramaiah (@siddaramaiah) July 24, 2020

ಸರ್ಕಾರಕ್ಕೆ ಸಿದ್ದು ಪಂಚಪ್ರಶ್ನೆ..
ಪ್ರಶ್ನೆ 1 > ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ?
ಪ್ರಶ್ನೆ 2 > ಸರ್ಕಾರ ಅಕ್ರಮ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ?
ಪ್ರಶ್ನೆ 3 > ವೆಂಟಿಲೇಟರ್‌ಗಳನ್ನು ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಕೇಂದ್ರ ಸರ್ಕಾರ ಖರೀದಿಸಿದ್ದು ಸುಳ್ಳಾ?
ಪ್ರಶ್ನೆ 4 > ಸಮ್ಮಿಶ್ರ ಸರ್ಕಾರ ಇದ್ದಾಗ ಖರೀದಿ ಮಾಡಿರುವ ವೆಂಟಿಲೇಟರ್ ಖರೀದಿ ಬಗ್ಗೆ ತನಿಖೆ ನಡೆಸಬಹುದಲ್ಲವೇ?
ಪ್ರಶ್ನೆ 5 > ಬಿಬಿಎಂಪಿ ಆಯುಕ್ತರ ಏಕಾಏಕಿ ವರ್ಗಾವಣೆ ಯಾಕಾಯ್ತು? ಯಾರ ಭ್ರಷ್ಟಾಚಾರ ಮುಚ್ಚಿಡಲು ಅವರನ್ನು ಬಲಿ ಕೊಟ್ಟಿರಿ?

ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿಗೆ ಪ್ರಸ್ತಾವನೆ ಕಳುಹಿಸಿದೆ ಎಂದು ಹೇಳಿದ್ದು ನಿಜ. ತಜ್ಞರ ಶಿಫಾರಸು ಇಲ್ಲದೆ ಉಪಕರಣಗಳ ಖರೀದಿಗೆ ಮುಂದಾಗಿರುವುದಾಗಿ‌ ಟಿಪ್ಪಣಿ ಬರೆಯಲಾಗಿರುವುದು ನಿಜ. ಈ ಟಿಪ್ಪಣಿಯ ಮಹತ್ವ ಏನು?
8/15#LekkaKodi

— Siddaramaiah (@siddaramaiah) July 24, 2020

TAGGED:bjpcongresscorruptionCovid 19ventilatorಕರ್ನಾಟಕಕೊರೊನಾಕೋವಿಡ್ 19ಬಿಜೆಪಿಬೆಂಗಳೂರುಭ್ರಷ್ಟಾಚಾರ
Share This Article
Facebook Whatsapp Whatsapp Telegram

You Might Also Like

KD teaser date announced Dhruva Sarja Prem
Cinema

ಕೆಡಿ ಟೀಸರ್ ಡೇಟ್ ಘೋಷಣೆ – ಪ್ರಚಾರದ ವೈಖರಿಯಲ್ಲಿದೆ ಮಿಸ್ಟರಿ!

Public TV
By Public TV
16 minutes ago
Darshan Son in law Chandu
Cinema

ದರ್ಶನ್ ಫ್ಯಾಮಿಲಿ ಕುಡಿ ಶೀಘ್ರದಲ್ಲೇ ಹೀರೋ ಆಗಿ ಎಂಟ್ರಿ?

Public TV
By Public TV
33 minutes ago
CM Siddaramaiah Kaginele Mutt 1
Bengaluru City

ದುರಹಂಕಾರಿ ಅಂದ್ರೂ ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ: ಸಿದ್ದರಾಮಯ್ಯ

Public TV
By Public TV
40 minutes ago
Heart Attack 1
Chikkamagaluru

Heart Attack | ರಾಜ್ಯದಲ್ಲಿಂದು ಐವರು ಬಲಿ – ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ರಾಜಣ್ಣ ಸೂಚನೆ

Public TV
By Public TV
1 hour ago
6 cows die after being hit by passenger train in bagalkote
Bagalkot

ಪ್ಯಾಸೆಂಜರ್‌ ಟ್ರೈನ್‌ ಡಿಕ್ಕಿ – 6 ದನಗಳ ದೇಹ ಛಿದ್ರ ಛಿದ್ರ

Public TV
By Public TV
2 hours ago
Chalavadi Narayanswamy
Bengaluru City

ಮುಸ್ಲಿಂ ಓಲೈಕೆಗಾಗಿ ಸಂವಿಧಾನಕ್ಕೆ 370ನೇ ವಿಧಿ ಸೇರಿಸಿದ್ದೇ ನೆಹರೂ: ಛಲವಾದಿ ಕಿಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?