ಕೊರೊನಾ ಹಿನ್ನೆಲೆ ಕೋಲಾರದಲ್ಲಿ ಗಲ್ಲಿ ಗಣೇಶ ನಿಷೇಧ: ಡಿಸಿ ಸತ್ಯಭಾಮ

Public TV
1 Min Read
KLR GANESH FEST

– ಮನೆಗಳಲ್ಲಿ ಅರಶಿಣ, ಗೋಧಿ ಹಿಟ್ಟಿನಿಂದ ಗಣೇಶ ತಯಾರಿಸಿ
– ಸರಳ, ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ

ಕೋಲಾರ: ಕೊರೊನಾ ಹಿನ್ನೆಲೆ ಈ ಬಾರಿ ಸಾರ್ವಜನಿಕವಾಗಿ ಬೀದಿಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪನೆ ಮಾಡಲು ಅವಕಾಶವಿಲ್ಲವೆಂದು ಜಿಲ್ಲಾಧಿಕಾರಿ ಸತ್ಯಭಾಮ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂಕಷ್ಟದ ಹಿನ್ನೆಲೆ ಗಣೇಶ ಹಬ್ಬವನ್ನು ಆಡಂಬರದಿಂದ ಆಚರಣೆ ಮಾಡದೆ, ಸರಳವಾಗಿ ಮತ್ತು ಭಕ್ತಿ-ಭಾವದಿಂದ ಆಚರಣೆ ಮಾಡುವಂತೆ ಜನರಲ್ಲಿ ಮನವಿ ಮಾಡಿದರು.

ganesha idol

ಈ ಹಿಂದೆ ಗಣೇಶ ಮೂರ್ತಿಗಳನ್ನು ಗಲ್ಲಿಗಳಲ್ಲಿ ಪ್ರತಿಷ್ಟಾಪನೆ ಮಾಡುವ ಜೊತೆಗೆ ಸಾರ್ವಜನಿಕವಾಗಿ ವಿಸರ್ಜನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಎಲ್ಲೆಡೆ ಜನರನ್ನು ಬೆಂಬಿಡದೆ ಕಾಡುತ್ತಿರುವುದರಿಂದ ಗಣೇಶ ಮೂರ್ತಿಗಳನ್ನು ಸಾರ್ವಜನಿಕವಾಗಿ ಪ್ರತಿಷ್ಟಾಪನೆ ಮಾಡಲು ಮತ್ತು ವಿಸರ್ಜನೆ ಮಾಡಲು ಅವಕಾಶವಿಲ್ಲ. ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮನೆಗಳಲ್ಲಿ ಮಾಡಿಕೊಂಡು ಪೂಜೆ ಮಾಡಿ, ಬಳಿಕ ವಿಸರ್ಜನೆ ಮಾಡುವಂತೆ ಸೂಚಿಸಿದರು.

dwd 601 ganesha 1

ಮಾರುಕಟ್ಟೆಗಳಲ್ಲಿ ಪಿಒಪಿ ಗಣಪತಿಗಳ ಮಾರಾಟಕ್ಕೂ ಅವಕಾಶವಿಲ್ಲ, ಒಂದು ವೇಳೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಎಲ್ಲರೂ ಮನೆಗಳಲ್ಲಿ ಅರಿಶಿನ ಪುಡಿ ಮತ್ತು ಗೋದಿ ಹಿಟ್ಟಿನಿಂದ ಗಣೇಶನ ವಿಗ್ರಹಗಳನ್ನು ತಯಾರಿಸಿ ರೋಗಮುಕ್ತರಾಗುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಕಾರ್ತಿಕ ರೆಡ್ಡಿ ಸೇರಿದಂತೆ ಪರಿಸರ ನಿಯಂತ್ರಣ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *