Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆ

Public TV
Last updated: August 5, 2021 4:41 pm
Public TV
Share
3 Min Read
mahesh
SHARE

ಬೆಂಗಳೂರು: ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಅವರು ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

bjp

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಭಾರತೀಯ ಜನತಾ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ತುಳಿತಕ್ಕೆ ಒಳಗಾದವರಿಗೆ ಸ್ವಾಭಿಮಾನದ ಬದುಕು ಸಿಗಲಿದೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಆಗಲಿದೆ ಎಂಬ ವಿಶ್ವಾಸದೊಂದಿಗೆ ಕೊಳ್ಳೇಗಾಲದ ಶಾಸಕ ಮಹೇಶ್ ಅವರು ಬಿಜೆಪಿ ಸೇರಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಯ ಆಶಯವನ್ನು ರಾಜ್ಯ ಸರ್ಕಾರ ಈಡೇರಿಸಲಿದೆ. ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆ ಇರುವ ಸಾಮಾಜಿಕ ನೆಲೆಗಟ್ಟು ಸ್ಥಾಪನೆ ಆಗಲಿದೆ ಎಂದು ಅಭಿಪ್ರಾಯಪಟ್ಟರು.

bommai 1

ಮಹೇಶ್ ಅವರು ಪಕ್ಷದ ಜೊತೆ ಮತ್ತು ಯಡಿಯೂರಪ್ಪ ಅವರ ಜೊತೆಗೆ ಹೊಂದಿರುವ ಸಂಬಂಧ ಮತ್ತು ಅನುಭವ ಇವತ್ತು ಅವರ ಈ ನಿರ್ಣಯಕ್ಕೆ ಪೂರಕವಾಗಿದೆ. ಅವರನ್ನು ಪಕ್ಷಕ್ಕೆ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಉತ್ತಮ ಬೆಳವಣಿಗೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಎನ್.ಮಹೇಶ್ ಅವರ ಸೇರ್ಪಡೆಯ ಶುಭ ಕ್ಷಣ ಈಗ ಬಂದಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಬರುವುದರ ಮುನ್ಸೂಚನೆ ಇದಾಗಿದ್ದು, ರಾಜ್ಯದಲ್ಲಿ ದಲಿತ ಸಮೂಹ ಬಿಜೆಪಿ ಪರವಾಗಿದೆ ಎಂಬ ಸಂದೇಶ ಪ್ರಧಾನಿಯವರಾದ ನರೇಂದ್ರ ಮೋದಿ ಅವರನ್ನು ತಲುಪಲು ನಮ್ಮ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಅವರು ತಿಳಿಸಿದರು.

bommai 1 1

ಮಹೇಶ್ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಹೆಚ್ಚಿನ ಬಲ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 135 ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರಕ್ಕೆ ಬರಬೇಕೆಂಬ ಸಂಕಲ್ಪ ನಮ್ಮದಾಗಿದೆ. ಅದಕ್ಕಾಗಿ ಎಲ್ಲರೂ ಶ್ರಮಿಸಬೇಕು. ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡೋಣ ಎಂದು ನುಡುದರು. ಇದನ್ನೂ ಓದಿ: ಜಮೀರ್ ಮನೆಗೆ ಹಾಲು ಹಾಕಲು ಬಂದ ವ್ಯಕ್ತಿಯೂ ಒಳಗೆ ಲಾಕ್

ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಬಿಎಸ್‍ಪಿಯನ್ನು ರಾಜ್ಯದಲ್ಲಿ ಕಟ್ಟಿ ಬೆಳೆಸಿದ ಎನ್. ಮಹೇಶ್ ಅವರು ಈಗ ಬಿಜೆಪಿ ಸೇರಿದ್ದಾರೆ. ನರೇಂದ್ರ ಮೋದಿಯವರ ಆಡಳಿತ, ರಾಜ್ಯದಲ್ಲಿ ಯಡಿಯೂರಪ್ಪ ಅವರ ಆಡಳಿತ, ಬಿಜೆಪಿ ಚಿಂತನೆ, ವಿಚಾರಧಾರೆಗಳನ್ನು ಮೆಚ್ಚಿ ಬಿಜೆಪಿಗೆ ಸೇರಿದ್ದು ಅವರಿಗೆ ಸ್ವಾಗತ ಎಂದರು. ಅವರ ಮೂಲಕ ಬಿಜೆಪಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ ಆಗಬೇಕು. ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ಬೇರೆ ಬೇರೆ ಪಕ್ಷಗಳ ಹತ್ತಾರು ಜನರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿಯವರ ಏಳು ವರ್ಷಗಳ ಅಭಿವೃದ್ಧಿ ಕಾರ್ಯ, ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಜನಪರ ಆಡಳಿತವನ್ನು ಮೆಚ್ಚಿಕೊಂಡು ಅನೇಕರು ಬಿಜೆಪಿ ಸೇರಲು ಉತ್ಸುಕತೆ ತೋರಿದ್ದಾರೆ. ಡಾ. ಬಾಬಾಸಾಹೇಬ್ ಅಂಬೇಡ್ಕರರಿಗೆ ನ್ಯಾಯ ನೀಡುವ ಕಾರ್ಯವನ್ನು ಬಿಜೆಪಿಯ ಕೇಂದ್ರ ಸರ್ಕಾರ ಮಾಡಿದೆ. ಇದನ್ನು ಗಮನಿಸಿ ದಲಿತ ಸಮುದಾಯವು ಈಗ ಬಿಜೆಪಿಯತ್ತ ಸಹಜವಾಗಿಯೇ ಆಕರ್ಷಿತವಾಗುತ್ತಿದೆ ಎಂದು ಅವರು ವಿವರಿಸಿದರು.

ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಕೊಳ್ಳೇಗಾಲ ಶಾಸಕ ಶ್ರೀ ಎನ್. ಮಹೇಶ್ ಅವರನ್ನು, ಪಕ್ಷದ ರಾಜ್ಯಾಧ್ಯಕ್ಷ ಶ್ರೀ @nalinkateel ಮತ್ತು ಮುಖ್ಯಮಂತ್ರಿ ಶ್ರೀ @BSBommai ಅವರೊಂದಿಗೆ, ಆತ್ಮೀಯವಾಗಿ ಸ್ವಾಗತಿಸಲಾಯಿತು. ವಿಶೇಷವಾಗಿ ಚಾಮರಾಜನಗರ ಭಾಗದಲ್ಲಿ ಇದರಿಂದ ಪಕ್ಷಕ್ಕೆ ಹೆಚ್ಚಿನ ಬಲ ಬಂದಂತಾಗಿದೆ.@BJP4Karnataka pic.twitter.com/eKPFfdllfm

— B.S.Yediyurappa (@BSYBJP) August 5, 2021

ಎನ್.ಮಹೇಶ್ ಅವರು ಮಾತನಾಡಿ, ರಾಷ್ಟ್ರದ 130 ಕೋಟಿ ಜನರ ಅಭಿವೃದ್ಧಿಗಾಗಿ ಬಿಜೆಪಿ ಪ್ರಯತ್ನಿಸುತ್ತಿದೆ. ಆ ವಿಚಾರವನ್ನು ಗಮನಿಸಿ ನಾನು ಬಿಜೆಪಿ ಸೇರುತ್ತಿದ್ದೇನೆ. ಇದಕ್ಕೆ ಮತ್ತೊಂದು ಪ್ರೇರಕ ಶಕ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರು. ಬಿಜೆಪಿ ಈಗ ಪ್ರಬುದ್ಧ ಮನಸ್ಥಿತಿಯೊಂದಿಗೆ ರಾಷ್ಟ್ರವನ್ನು ಸಮಗ್ರ ಅಭಿವೃದ್ಧಿ ಕಡೆ ಒಯ್ಯುತ್ತಿದೆ. ಅದೂ ನನ್ನ ಬಿಜೆಪಿ ಸೇರ್ಪಡೆಗೆ ಕಾರಣ ಎಂದರು. ಮಾಜಿ ಸಿಎಂ ಯಡಿಯೂರಪ್ಪ ಅವರ ನನಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನನಗೆ ಹಲವಾರು ವರ್ಷಗಳಿಂದ ಪರಿಚಿತರು. ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಎಲ್ಲಾ ಮುಖಂಡರ ಜೊತೆ ಸೇರಿ ಪಕ್ಷದ ಸಂಘಟನೆಗೆ ಶ್ರಮಿಸಲಿದ್ದೇನೆ ಎಂದು ಅವರು ತಿಳಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ರವಿಕುಮಾರ್, ಸಿದ್ದರಾಜು, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ವಿಜಯೇಂದ್ರ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಆರ್ ಅಶೋಕ್, ಸಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್, ಎಸ್‍ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಮುಖಂಡರು, ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

TAGGED:Basavaraj BommaibjpkollegalaMLAN.Maheshnalinkumar kateelPublic TVYediyurappaಎನ್.ಮಹೇಶ್ಡಾ.ಬಿ.ಆರ್.ಅಂಬೇಡ್ಕರ್ನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬಿಜೆಪಿಬೊಮ್ಮಾಯಿಯಡಿಯೂರಪ್ಪ
Share This Article
Facebook Whatsapp Whatsapp Telegram

You Might Also Like

SharanPrakash Patil
Districts

ನೀಟ್ ಸೀಟು – ದಲ್ಲಾಳಿಗಳ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಶರಣಪ್ರಕಾಶ್ ಪಾಟೀಲ್

Public TV
By Public TV
45 minutes ago
Huge tree falls on tourists car in Kallatthagiri
Chikkamagaluru

ಕಲ್ಲತ್ತಗಿರಿ | ಪ್ರವಾಸಿಗರ ಕಾರಿನ ಮೇಲೆ ಬಿದ್ದ ಬೃಹತ್ ಮರ – ತಪ್ಪಿದ ಅನಾಹುತ

Public TV
By Public TV
1 hour ago
UT Khadar in Malaysia 1
Latest

ಅಧ್ಯಯನ ಪ್ರವಾಸ: ಮಲೇಶಿಯಾದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್

Public TV
By Public TV
2 hours ago
G 7 Summit Leaders
Latest

ಇರಾನ್‌ ಜೊತೆ ಸಂಘರ್ಷ; ಇಸ್ರೇಲ್‌ ಬೆಂಬಲಕ್ಕೆ ನಿಂತ G-7 ನಾಯಕರು

Public TV
By Public TV
2 hours ago
Bike taxi Seize
Bengaluru City

ಬೈಕ್ ಟ್ಯಾಕ್ಸಿಗೆ ಬ್ರೇಕ್ – ಒಂದೇ ದಿನದಲ್ಲಿ 103 ವಾಹನಗಳು ಸೀಜ್

Public TV
By Public TV
2 hours ago
D K Shivakumar 2
Bengaluru City

ಇಡಿ ತನಿಖೆಗೆ ನನ್ನ ಸಹೋದರ ಡಿ.ಕೆ ಸುರೇಶ್ ಸಹಕಾರ ಕೊಡ್ತಾರೆ: ಡಿಕೆಶಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?