– ಲಾಠಿ ರುಚಿ ತೋರಿಸಿದ ಪೊಲೀಸರು
ಕೋಲಾರ: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ನೋಡಲು ಬಂದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಪ್ರಸಂಗ ಕೋಲಾರದ ಮಾಲೂರು ಪಟ್ಟಣದಲ್ಲಿ ನಡೆದಿದೆ.
- Advertisement 2
ಹೌದು. ಧ್ರುವ ಅವರು ಇಂದು ಮಾಲೂರು ಪಟ್ಟಣದ ಕೊಂಡಯ್ಯ ಹಾರ್ಡ್ ವೇರ್ ಮಳಿಗೆ ಉದ್ಘಾಟಿಸಲೆಂದು ಕೋಲಾರದ ಮಾಲೂರು ಪಟ್ಟಣಕ್ಕೆ ಬಂದಿದ್ದರು. ಈ ವೇಳೆ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ರಸ್ತೆಯುದ್ದಕ್ಕೂ ಜಮಾಯಿಸಿದ್ದರು. ಈ ವೇಳೆ ಎಸ್ಕಾರ್ಟ್ ಭದ್ರತೆಯಲ್ಲೂ ಧ್ರುವ ತಮ್ಮ ಅಭಿಮಾನಿಗಳತ್ತ ಕೈ ಬೀಸಿದರು.
- Advertisement 3
- Advertisement 4
ಇತ್ತ ಧ್ರುವನನ್ನು ನೋಡುತ್ತಿದ್ದಂತೆಯೇ ಅಭಿಮಾನಿಗಳು ಜೋರಾಗಿ ಕೂಗುತ್ತಾ ಸಾವಿರಾರು ಸಂಖ್ಯೆಯಲ್ಲಿ ಮುಗಿಬಿದ್ದರು. ಅಭಿಮಾನಿಗಳನ್ನ ನಿಯಂತ್ರಿಸಲು ಪೊಲೀಸರ ಹರಸಾಹಸ ಪಟ್ಟರು. ಕೊನೆಗೆ ಸಾಧ್ಯವಾಗದೆ ಲಾಠಿ ಬೀಸಿದ್ದಾರೆ. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಅಭಿಮಾನಿಗಳು ಚದುರಿದ್ದಾರೆ. ನಟನ ನೋಡಲು ಅಭಿಮಾನಿಗಳು ಜಮಾಯಿಸಿದ್ದರಿಂದ ಕೋಲಾರ – ಹೊಸೂರು- ಬೆಂಗಳೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಉಂಟಾಯಿತು. ಕಿಮೀ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಬಳಿಕ ಮಾತನಾಡಿದ ಧ್ರುವ, ಕೊರೊನಾ ಸಂದರ್ಭದಲ್ಲಿ ನಿಮ್ಮನ್ನು ಭೇಟಿ ಮಾಡಿಲ್ಲ. ಇದೀಗ ಇಷ್ಟು ಜನರನ್ನು ನೋಡಿ ತುಂಬಾ ಖುಷಿಯಾಯ್ತು ಎಂದು ಹೇಳಿದರು.