– 6 ತಿಂಗಳಲ್ಲಿ 3 ಬಲಿ ಪಡೆದ ಗಜಪಡೆ
ಕೋಲಾರ: ರಾತ್ರಿ ವೇಳೆ ಸಂಚರಿಸುತ್ತಿದ್ದ ಆನೆಗಳ ಹಿಂಡು ದಾಳಿ ಮಾಡಿದ ಪರಿಣಾಮ ರೈತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ ನಡೆದಿದೆ.
- Advertisement 2
ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಭತ್ತಲಹಳ್ಳಿ ಬಳಿ ಕಳೆದ ರಾತ್ರಿ ಘಟನೆ ನಡೆದಿದ್ದು, 53 ವರ್ಷದ ರೈತ ವೆಂಕಟೇಶಪ್ಪ ಆನೆ ದಾಳಿಯಿಂದ ಜೀವ ಕಳೆದುಕೊಂಡವರಾಗಿದ್ದಾರೆ.
- Advertisement 3
- Advertisement 4
ರಾತ್ರಿ ಊಟ ಮಾಡಿ ತೋಟದ ಬಳಿ ಕಾವಲಿಗೆಂದು ತೆರಳುತ್ತಿದ್ದ ವೇಳೆ ಆನೆ ಹಿಂಡು ದಾಳಿ ಮಾಡಿದ್ದರಿಂದ ವೆಂಕಟೇಶಪ್ಪ ಸಾವನ್ನಪ್ಪಿದ್ದಾರೆ. ಆನೆ ದಾಳಿ ಮಾಡಿದ ಪರಿಣಾಮ ತಲೆ ಸಂಪೂರ್ಣವಾಗಿ ನಜ್ಜಗುಜ್ಜಾಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಳೆದ 6 ತಿಂಗಳಲ್ಲಿ ಆನೆ ಹಿಂಡು ದಾಳಿಗೆ ಜಿಲ್ಲೆಯ ಮೂವರು ಬಲಿಯಾಗಿದ್ದಾರೆ. ಅನೆ ಹಿಂಡು ದಾಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದ್ದು, ಆನೆ ದಾಳಿಗೆ ಪರಿಹಾರ ಕಂಡುಕೊಳ್ಳದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ.