Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಾರದ ಹೆದ್ದಾರಿಗಳಲ್ಲಿ ಅಪಘಾತ ತಡೆಗೆ ಒತ್ತು ಕೊಡಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೋಲಾರದ ಹೆದ್ದಾರಿಗಳಲ್ಲಿ ಅಪಘಾತ ತಡೆಗೆ ಒತ್ತು ಕೊಡಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

Districts

ಕೋಲಾರದ ಹೆದ್ದಾರಿಗಳಲ್ಲಿ ಅಪಘಾತ ತಡೆಗೆ ಒತ್ತು ಕೊಡಿ: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

Public TV
Last updated: June 25, 2021 6:40 pm
Public TV
Share
2 Min Read
KLR DC 1
SHARE

ಕೋಲಾರ: ಜಿಲ್ಲೆಯಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ಹೆಚ್ಚು ಅಪಘಾತ ಸಂಭವಿಸುತ್ತಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಹಾಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‍ಎಚ್‍ಎಐ) ಅಧಿಕಾರಿಗಳಿಗೆ ಸೂಚಿಸಿದ್ದಾರೆ.

KLR DC 2 medium

ಕೋಲಾರದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಡಾ.ಸೆಲ್ವಮಣಿ ಅವರು, ವಾಹನ ಸವಾರರ ಜೀವ ಮುಖ್ಯ. ಹೆದ್ದಾರಿಯಲ್ಲಿ ವಾಹನಗಳ ವೇಗ ನಿಯಂತ್ರಿಸಲು ಬ್ಯಾರಿಕೇಡ್ ಅಳವಡಿಸಿ ಮತ್ತು ರಸ್ತೆ ಉಬ್ಬು ನಿರ್ಮಿಸಿ. ಜೊತೆಗೆ ವಾಹನ ಸವಾರರಿಗೆ ಅನುಕೂಲವಾಗುವಂತೆ ಸೂಚನಾ ಫಲಕಗಳನ್ನು ಅಳವಡಿಸಿ. ಹೆದ್ದಾರಿಯಲ್ಲಿ ಹೆಚ್ಚು ಅಪಘಾತ ಸಂಭವಿಸುತ್ತಿರುವ ಬಗ್ಗೆ ಸಾಕಷ್ಟು ದೂರು ಬಂದಿವೆ. ಈ ದೂರುಗಳನ್ನು ಆಧರಿಸಿ ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ. ಆ ಸ್ಥಳಗಳಲ್ಲಿ ಅಪಘಾತ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಿ. ರಸ್ತೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸಿ. ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:ನಾಡಿನತ್ತ ಹೆಜ್ಜೆ ಹಾಕುತ್ತಿರುವ ಜಿಂಕೆ, ಕೃಷ್ಣಮೃಗಗಳು – ನಾಯಿ ದಾಳಿಗೆ ಸಾವು

ಅಪಘಾತಗಳಿಂದ ಹೆಚ್ಚು ಸಾವು ನೋವು ಸಂಭವಿಸುತ್ತಿವೆ. ಹಳ್ಳಿಯ ಜನರು ಜಾನುವಾರು ಹಿಡಿದುಕೊಂಡು ಹೆದ್ದಾರಿ ಮೂಲಕ ತಮ್ಮ ಜಮೀನುಗಳಿಗೆ ಹೋಗುತ್ತಾರೆ. ಅಂತಹ ಕಡೆ ಕೆಳ ಸೇತುವೆ (ಅಂಡರ್ ಪಾಸ್) ನಿರ್ಮಾಣ ಮಾಡಿ. ಹೆದ್ದಾರಿಯಿಂದ ಹಳ್ಳಿಯ ರಸ್ತೆಗಳಿಗೆ ಸಂಪರ್ಕ ಕಲ್ಪಿಸುವ ಜಾಗಗಳಲ್ಲಿ ಸಿಗ್ನಲ್ ಅಳವಡಿಸಿ. ಜಿಲ್ಲಾ ಕೇಂದ್ರದ ಹೊರವಲಯದ ಕೊಂಡರಾಜನಹಳ್ಳಿ ಬೈಪಾಸ್ ರಸ್ತೆಯಲ್ಲಿ ಹಾಗೂ ನಗರದ ಹಲವೆಡೆ ವ್ಯಾಪಾರಿಗಳು ಸರ್ವಿಸ್ ರಸ್ತೆ ಒತ್ತುವರಿ ಮಾಡಿಕೊಂಡು ಅಂಗಡಿಗಳನ್ನು ಇಟ್ಟಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಮತ್ತು ಜನರ ಓಡಾಟಕ್ಕೆ ಸಮಸ್ಯೆಯಾಗಿ ಅಪಘಾತ ಸಂಭವಿಸುತ್ತಿವೆ. ಶೀಘ್ರವೇ ಆ ಅಂಗಡಿಗಳನ್ನು ತೆರವು ಮಾಡಿ ಎಂದು ಆದೇಶಿಸಿದರು.

barigate medium

ಕಾಮಗಾರಿ ಪೂರ್ಣಗೊಳಿಸಿ:
ಜಿಲ್ಲಾಡಳಿತ ಭವನದ ಮುಂದೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಮೇಲ್ಸೇತುವೆ ಹಾಗೂ ಹೆದ್ದಾರಿಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಅಗತ್ಯವಿರುವ ಕಡೆ ಸರ್ವಿಸ್ ರಸ್ತೆ ನಿರ್ಮಾಣ ಮಾಡಬೇಕು. ಜಿಲ್ಲೆಯಾದ್ಯಂತ ಅತಿ ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ. ಆ ಸ್ಥಳಗಳಲ್ಲಿ ನಿಧಾನವಾಗಿ ಚಲಿಸುವಂತೆ ವಾಹನ ಸವಾರರಿಗೆ ಮಾಹಿತಿ ನೀಡಲು ಸೂಚನಾ ಫಲಕ ಹಾಕಬೇಕು. ಮಡೇರಹಳ್ಳಿಯು ಹೆಚ್ಚು ಅಪಘಾತ ಸಂಭವಿಸುವ ಸ್ಥಳವಾಗಿದ್ದು, ಅಲ್ಲಿ ವೈಜ್ಞಾನಿಕವಾಗಿ ರಸ್ತೆ ಉಬ್ಬು ನಿರ್ಮಿಸಿ. ಅರಾಭಿಕೊತ್ತನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಅಂಡರ್‍ಪಾಸ್‍ನಲ್ಲಿ ಮಳೆ ನೀರು ನಿಲ್ಲುತ್ತಿರುವ ಬಗ್ಗೆ ದೂರು ಬಂದಿದೆ. ವಿದ್ಯುತ್ ದೀಪ ಅಳವಡಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮಳೆ ನೀರು ನಿಲ್ಲದಂತೆ ಕ್ರಮ ವಹಿಸಬೇಕು. ಅಪಘಾತ ಪ್ರಕರಣಗಳ ಗಾಯಾಳುಗಳ ಚಿಕಿತ್ಸೆಗೆ ಎಸ್‍ಎನ್‍ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.

ವಾಹನ ಜಪ್ತಿ ಮಾಡಿ:
ಸರಕು ಸಾಗಣೆ ವಾಹನಗಳಲ್ಲಿ ನಿಯಮಬಾಹಿರವಾಗಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿದೆ. ಸರಕು ಸಾಗಣೆ ವಾಹನಗಳ ಚಾಲಕರು ಜನರ ಪ್ರಾಣದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಪ್ರಯಾಣಿಕರನ್ನು ಕರೆದೊಯ್ಯುವ ಸರಕು ಸಾಗಣೆ ವಾಹನಗಳನ್ನು ಜಪ್ತಿ ಮಾಡಿ ಎಂದು ಪೊಲೀಸರಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು, ಕೆಜಿಎಫ್ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಇಲಕ್ಕಿಯಾ ಕರುಣಾಗರನ್,ಆರ್‍ಟಿಒ ಸಿಬ್ಬಂದಿ ಹಾಜರಿದ್ದರು.

TAGGED:DCKolarpolicePublic TVroadಕೋಲಾರಜಿಲ್ಲಾಧಿಕರಿಪಬ್ಲಿಕ್ ಟಿವಿಪೋಲಿಸ್ರಸ್ತೆಸಂಚಾರ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
12 minutes ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
15 minutes ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
30 minutes ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
55 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
1 hour ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?