Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೋಳಿ ಮೊಟ್ಟೆ, ಮಾಂಸ ಮಾರಾಟಕ್ಕೆ ನಿರ್ಬಂಧವಿಲ್ಲ: ಸಚಿವ ಪ್ರಭು ಚವ್ಹಾಣ್

Public TV
Last updated: January 8, 2021 8:38 pm
Public TV
Share
3 Min Read
ygr prabhu chouhan 1
SHARE

– ಹಕ್ಕಿ ಜ್ವರ ನಿಯಂತ್ರಣಕ್ಕೆ ರಾಜ್ಯಮಟ್ಟದ ಉನ್ನತ ಸಮಿತಿ

ಬೆಂಗಳೂರು: ಹಕ್ಕಿ ಜ್ವರದ ಬಗ್ಗೆ ತೀವ್ರ ನಿಗಾ ವಹಿಸಲಾಗಿದ್ದು, ರಾಜ್ಯದಲ್ಲಿ ಕೋಳಿ ಮೊಟ್ಟೆ, ಮಾಂಸ ಮಾರಾಟಕ್ಕೆ ನಿರ್ಬಂಧವಿಲ್ಲ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಸ್ಪಷ್ಟಪಡಿಸಿದ್ದಾರೆ.

ಇಂದು ಆನ್‍ಲೈನ್ ಮೂಲಕ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಹಕ್ಕಿ ಜ್ವರದ ಬಗ್ಗೆ ತೀವ್ರ ನಿಗಾವಹಿಸುವಂತೆ ಸಚಿವರು ಸೂಚಿಸಿದ್ದಾರೆ.

birds duck bird flu

ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ಕಂಡುಬಂದಿಲ್ಲ. ಆದರೂ ಇಲಾಖೆಯ ಅಧಿಕಾರಿಗಳು ಹೆಚ್ಚು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಆತಂಕ ಪಡದೆ ಮೊಟ್ಟೆ ಮತ್ತು ಮಾಂಸವನ್ನು ಸೇವಿಸಬಹುದಾಗಿದೆ. ಕೇರಳ ಹೊರತುಪಡಿಸಿ ಇತರೇ ರಾಜ್ಯಗಳಿಗೆ ಕೋಳಿ ಮತ್ತು ಕೋಳಿ ಉತ್ಪನ್ನಗಳ ಮಾರಾಟ ಹಾಗೂ ಸಾಗಾಣಿಕೆಗೆ ಯಾವುದೇ ನಿರ್ಬಂಧ ಇಲ್ಲ. ಕೇರಳದಿಂದ ಬರುವ ಕೋಳಿ, ಕುಕ್ಕುಟ, ಕೋಳಿ ಉತ್ಪನ್ನಗಳ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

MND BIRD 3

ಗಡಿ ಭಾಗದಲ್ಲಿ ಹೈ ಅಲರ್ಟ್
ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳು ಹಾಗೂ ಇತರೇ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಕ್ಕಿ ಜ್ವರ ತಡೆಗಟ್ಟಲು ರೋಗ ನಿಯಂತ್ರಣ ಸಮಿತಿ ಸಭೆಗಳನ್ನು ನಡೆಸಿ ಮುಂಜಾಗೃತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಹಾಗೂ ಪೊಲೀಸ್ ಇಲಾಖೆ ಜೊತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ತಿಳಿಸಲಾಗಿದೆ. ಎಲ್ಲ ಕೋಳಿ ಫಾರಂಗಳಲ್ಲಿ ಮುಂಜಾಗೃತಾ ಕ್ರಮವಾಗಿ ರೋಗ ನಿಯಂತ್ರಣ ಔಷಧಿಗಳಿಂದ ಸ್ವಚ್ಛಗೊಳಿಸುವುದು ಮತ್ತು ಕನಿಷ್ಟ ಜೈವಿಕ ರಕ್ಷಣಾ ಪದ್ಧತಿ ಅಳವಡಿಕೊಳ್ಳುವಂತೆ ತೀರ್ಮಾನಿಸಿ ಕ್ರಮವಹಿಸುವಂತೆ ತಿಳಿಸಲಾಗಿದೆ ಎಂದರು.

MND BIRD 4

ಕೇರಳದ ಗಡಿ ಭಾಗದ ಜಿಲ್ಲೆಗಳಾದ ಮೈಸೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಕಾಡು ಹಕ್ಕಿಗಳು, ನೀರು ಹಕ್ಕಿಗಳು, ವಲಸೆ ಹಕ್ಕಿಗಳು ಬಾತುಕೋಳಿಗಳು, ಗೀಜಗದ ಹಕ್ಕಿಗಳು ಇತ್ಯಾದಿ ವಿವಿಧ ಪ್ರಭೇದದ ಹಕ್ಕಿಗಳ ಅಸಹಜ ಸಾವು ಅಥವಾ ಹಕ್ಕಿ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಗಮನಹರಿಸಿ ಕ್ರಮಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮುಂಜಾಗ್ರತಾ ಕ್ರಮವಾಗಿ ಅವಶ್ಯವಿರುವ ಪರಿಕರಗಳು ಮತ್ತು ರೋಗ ನಿಯಂತ್ರಕ ರಾಸಾಯನಿಕಗಳನ್ನು ಕ್ರೂಢೀಕರಿಸಿ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ಧರಾಗಲು ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರ ಪರಿಷ್ಕರಿಸಿ ಹೊರಡಿಸಿರುವ 2021ರ ಹಕ್ಕಿಜ್ವರದ ನಿಯಂತ್ರಣ ಹಾಗೂ ನಿರ್ವಹಣೆ ಮಾರ್ಗಸೂಚಿಗಳ ಪ್ರಕಾರ ಸರ್ವೇಕ್ಷಣೆ, ಕಣ್ಗಾವಲು ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಾಗೂ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.

MND BIRD 2

ನಗರ ಸಭೆ, ಪುರಸಭೆ ವ್ಯಾಪ್ತಿಯ ಪ್ರದೇಶದಲ್ಲಿ ಹಕ್ಕಿಗಳು, ಕೋಳಿಗಳ ಮರಣ ಸಂಭವಿಸಿದಲ್ಲಿ ಅದರ ಸಮೀಪ ಸಾರ್ವಜನಿಕರು ಹೊಗದಂತೆ ಮತ್ತು ಮುಟ್ಟದಂತೆ ತಿಳುವಳಿಕೆ ನೀಡಬೇಕು. ವೈಯಕ್ತಿಕ ಸುರಕ್ಷತೆಯನ್ನು ಅನುಸರಿಸಿ, ಜೈವಿಕ ಸುರಕ್ಷತಾ ಕ್ರಮಗಳೊಂದಿಗೆ ವಿಲೇವಾರಿ ಮಾಡಲು ಪಶುಸಂಗೋಪನೆ ಇಲಾಖೆಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು.

ಎಲ್ಲ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಕುಕ್ಕುಟ ಕ್ಷೇತ್ರಗಳ್ಲಿ ವಿಶೇಷವಾಗಿ, ಪಕ್ಷಿಧಾಮ, ಪ್ರಾಣಿ ಸಂಗ್ರಹಾಲಯ ಹಾಗೂ ನೀರು ಸಂಗ್ರಣ ಸ್ಥಳಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವುದು. ಕೋಳಿಗಳು, ಹಿತ್ತಲ ಕೋಳಿಗಳು, ಹಕ್ಕಿಗಳು, ಕಾಡು ಹಕ್ಕಿಗಳು, ವಲಸೆ ಹಕ್ಕಿಗಳ ಯಾವುದೇ ಅಸ್ವಾಭಾವಿಕ ಮರಣ ಸಂಭವಿಸಿದಲ್ಲಿ ಅಥವಾ ರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿ. ಕೋಳಿ ಶೀತ ಜ್ವರದ ಸಂಭವನೀಯತೆಯನ್ನು ಪರಿಗಣಿಸಿ, ಸಂಬಂಧಪಟ್ಟ ಪ್ರಯೋಗಾಲಯಕ್ಕೆ ವರದಿ ಮಾಡಿ, ರೋಗ ವಿಶ್ಲೇಷಣೆ ನಡೆಸುವ ಬಗ್ಗೆ ಕ್ರಮ ವಹಿಸಿ ಹಾಗೂ ಜೈವಿಕ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಿ ಎಂದು ಸಚಿವರು ಸೂಚಿಸಿದ್ದಾರೆ.

Bird flu

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶೀ ರಾಜೇಂದ್ರಕುಮಾರ್ ಕಠಾರಿಯಾ, ಅಯುಕ್ತ ಹೆಚ್.ಬಸವರಾಜೇಂದ್ರ, ನಿರ್ದೇಶಕ ಡಾ.ಬಿ.ಎಸ್.ಶಿವಾರಾಮ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅರಣ್ಯ, ನಗರಾಭಿದ್ಧಿ, ಸಾರಿಗೆ, ಗೃಹ ಇಲಾಖೆ, ಕಂದಾಯ ಇಲಾಖೆ, ಹಣಕಾಸು ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

TAGGED:Bird flumeetingofficersPrabhu ChauhanPublic TVಅಧಿಕಾರಿಗಳುಪಬ್ಲಿಕ್ ಟಿವಿಪ್ರಭು ಚೌವ್ಹಾಣ್ಸಭೆಹಕ್ಕಿ ಜ್ವರ
Share This Article
Facebook Whatsapp Whatsapp Telegram

You Might Also Like

Police raid over 17 dance bars in Bengaluru
Crime

ಬೆಂಗಳೂರಿನ 17ಕ್ಕೂ ಹೆಚ್ಚು ಡ್ಯಾನ್ಸ್‌ ಬಾರ್‌ಗಳ ಮೇಲೆ ಪೊಲೀಸರ ದಿಢೀರ್‌ ದಾಳಿ

Public TV
By Public TV
2 minutes ago
Akhila Pajimannu
Bengaluru City

ಯುವ ಗಾಯಕಿ ಅಖಿಲಾ ಪಜಿಮಣ್ಣು ಬಾಳಲ್ಲಿ ಬಿರುಗಾಳಿ – ವಿವಾಹ ವಿಚ್ಛೇದನಕ್ಕೆ ಅರ್ಜಿ

Public TV
By Public TV
14 minutes ago
Crime
Bengaluru City

ಮಗುವಿಗೆ ಜನ್ಮ ನೀಡಿ ರಕ್ತಸ್ರಾವದಿಂದ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ಸಾವು

Public TV
By Public TV
7 hours ago
kannadigas israel and iran return
Bengaluru City

ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

Public TV
By Public TV
8 hours ago
Amit Shah in Benagluru
Bengaluru City

ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ – ತಡರಾತ್ರಿ ರೆಬೆಲ್ ನಾಯಕ ಸಭೆ

Public TV
By Public TV
8 hours ago
Chess Divya Deshmukh
Latest

ಚೆಸ್ | ದಿವ್ಯಾ ದೇಶಮುಖ್ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?