Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೋವಿಡ್‍ನಿಂದ ಮೃತಪಟ್ಟವರ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಅನುಮತಿ – ಅಶೋಕ್

Public TV
Last updated: April 23, 2021 8:56 pm
Public TV
Share
3 Min Read
BNG COVID DEATH 1
SHARE

– ಬೆಂಗಳೂರಿನ ತಾವರಕೆರೆಯಲ್ಲಿ ಕಟ್ಟಿಗೆಯಲ್ಲಿ ಸುಡಬಹುದು
– ಸಿದ್ದರಾಮಯ್ಯ, ಕುಮಾರಸ್ವಾಮಿ ಸಲಹೆಯನ್ನು ಪಾಲಿಸುತ್ತೇವೆ

ಬೆಂಗಳೂರು: ಕೋವಿಡ್‍ನಿಂದ ಮೃತಪಟ್ಟವರಿಗೆ ಅವರ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಲು ಅವಕಾಶ ನೀಡಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೋವಿಡ್‍ನಿಂದ ಮೃತಪಟ್ಟವರಿಗೆ ಅವರ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಲು ಅವಕಾಶ ನೀಡಿದ್ದೇವೆ. ಆದರೆ ಸಂಬಂಧಪಟ್ಟವರಿಂದ ಅನುಮತಿ ಪಡೆದು ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದು ಹೇಳಿದರು.

2069d374 7f39 4c6e ac14 dcba6bb33d9c

 

ನಾಳೆಯಿಂದ ಪ್ರತೀ 3 ಗಂಟೆಗೆ 50 ಶವ ಸಂಸ್ಕಾರಕ್ಕೆ ಅವಕಾಶ ನೀಡಲಾಗುತ್ತಿದೆ. ನೀರಿನ ಸಂಪರ್ಕ ಕೂಡ ಲಭ್ಯವಾಗಿದೆ. ಅಂಬುಲೆನ್ಸ್‍ಗಳು ರಸ್ತೆಯಲ್ಲಿ ಸಾಲು-ಸಾಲಾಗಿ ನಿಲ್ಲಬಾರದು. ಹೀಗಾಗಿ ಶವ ಸಂಸ್ಕಾರಕ್ಕೆ ಬರುವ ಜನರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಿದ್ದೇವೆ. ಬಂದ ತಕ್ಷಣ ಯಾವುದೇ ವಿಳಂಬವಿಲ್ಲದೆ ಶವ ಸಂಸ್ಕಾರಕ್ಕೆ ಅವಕಾಶ ಮಾಡಿ ಕೊಡಲಾಗುವುದು. ಇದಕ್ಕಾಗಿ ಎರಡು ಕೆಎಸ್‍ಆರ್‍ಪಿ ತುಕಡಿ ಕೂಡ ನಿಯೋಜನೆ ಮಾಡಿದ್ದೇವೆ. ಈ ವಿಚಾರದಲ್ಲಿ ಬೆಂಗಳೂರಿನ ಮೇಲಿರುವ ಒತ್ತಡ ನೂರಕ್ಕೆ ನೂರು ಕಡಿಮೆಯಾಗಿದೆ. ಯಾವುದೇ ಶವ ಸಂಸ್ಕಾರಕ್ಕೂ ಇನ್ನು ಮುಂದೆ ಕ್ಯೂ ಇರುವುದಿಲ್ಲ ಎಂದರು.

ಹಳ್ಳಿಗಳಲ್ಲೂ ಶವ ಸಂಸ್ಕಾರ ಮಾಡಬಹುದು. ಆದರೆ ಪಿಡಿಇಗಳಿಂದ ಅನುಮತಿ ಪಡೆಯಬೇಕು. ಸೋಂಕಿನಿಂದ ಮೃತರಾದವರನ್ನು ದಫನ್ ಮಾಡಬಹುದು. ತಾವರೆಕೆರೆಯಲ್ಲಿ ಇಂತಹ ಶವ ಸಂಸ್ಕಾರಕ್ಕೆ ಅವಕಾಶ ನೀಡಲಾಗಿದೆ. ಕಟ್ಟಿಗೆಯಲ್ಲಿ 50 ಶವ ಸುಡಲು ಅವಕಾಶವಿದೆ. ಇದಕ್ಕಾಗಿ ಈಗಾಗಲೇ 30 ಲೋಡ್ ಕಟ್ಟಿಗೆ ತರಿಸಲಾಗಿದೆ. ಇನ್ನೂ 30 ಲೋಡ್ ಕಟ್ಟಿಗೆ ಬರಲಿದೆ. ನೀರಿಗಾಗಿ ಬೋರ್‍ವೆಲ್ ಹಾಕಲಾಗಿದೆ. ಆಂಬ್ಯುಲೆನ್ಸ್ ನಿಲ್ಲಿಸಲು ಟೆಂಟ್ ಹಾಕಿದ್ದೇವೆ. ಬಂದ ಜನರು ಕುಳಿತುಕೊಳ್ಳಲು ಚೇರ್ ವ್ಯವಸ್ಥೆ ಮಾಡಲಾಗಿದೆ. ಏಕ ಕಾಲದಲ್ಲಿ 25 ಶವಗಳನ್ನು ಸುಡಬಹುದು. ಬೂದಿ, ಇನ್ನಿತರ ವೇಸ್ಟೇಜ್ ಸಂಗ್ರಹಕ್ಕೆ ಹಳ್ಳವನ್ನು ತೋಡಲಾಗಿದೆ ಎಂದು ವಿವರಿಸಿದರು.

corona death 1

ನಾಳೆಯಿಂದ ಶವ ಸುಡಲು ಯಾವುದೇ ಸಮಸ್ಯೆಯಾಗಲ್ಲ. ಇನ್ನೊಂದು ಕಡೆ 50 ಎಕರೆ ಭೂಮಿ ಗುರುತಿಸಿದ್ದೇವೆ. ಅಲ್ಲಿ ಸೋಮವಾರದಿಂದ ಶವ ಸುಡಲು ವ್ಯವಸ್ಥೆಯಾಗಲಿದೆ. ಬೇರೆ ಜಿಲ್ಲೆಗಳಲ್ಲೂ ಶವ ಸಂಸ್ಕಾರಕ್ಕೆ ಸೂಚಿಸಿದ್ದೇವೆ. ಗೋಮಾಳ ಭೂಮಿಯಲ್ಲೂ ಶವ ಸಂಸ್ಕಾರಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಈಗಾಗಲೇ ಡಿಸಿಗಳಿಗೆ ಸೂಚಿಸಿದ್ದೇವೆ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಯಾವ ಸಲಹೆ ಕೊಡುತ್ತಾರೆ ಆ ಸಲಹೆಗಳನ್ನು ನಾವು ಕಾರ್ಯರೂಪಕ್ಕೆ ತರುತ್ತೇವೆ ಎಂದಿದ್ದಾರೆ.

ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಇಬ್ಬರ ಹೇಳಿಕೆಯನ್ನೂ ಗಮನಿಸಿದ್ದೇನೆ. ಇಬ್ಬರ ಟೀಕೆಗಳನ್ನೂ ಸಲಹೆ ಎಂದು ಸ್ವೀಕರಿಸಿ ಕೆಲಸ ಮಾಡುತ್ತೇವೆ. ಜೆಡಿಎಸ್, ಕಾಂಗ್ರೆಸ್‍ನಲ್ಲಿ ಭಿನ್ನಾಭಿಪ್ರಾಯ ಇದೆ. ಕಾಂಗ್ರೆಸ್ ಅಧ್ಯಕ್ಷರು ಮೊದಲು ಸತ್ತವರಿಗೆ ಸರಿಯಾಗಿ ಸಂಸ್ಕಾರ ಮಾಡಿ ಎಂದಿದ್ದಾರೆ. ಆದರೆ ಜೆಡಿಎಸ್‍ನವರು ಮೊದಲು ಬದುಕಿರುವವರಿಗೆ ವ್ಯವಸ್ಥೆ ಮಾಡಿ ಎಂದಿದ್ದಾರೆ. ಎರಡನ್ನೂ ಕೂಡ ನಾವು ಪಾಲನೆ ಮಾಡುತ್ತಿದ್ದೇವೆ ಎಂದರು.

ckb corona death 1

 

ವಾರಾಂತ್ಯದ ಕರ್ಫ್ಯೂ ಜಾರಿ ವಿಚಾರವಾಗಿ ಮಾತನಾಡಿದ ಅವರು, ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ವೇಳೆ ಯಾರೆಲ್ಲಾ ಓಡಾಡಬಹುದು ಎಂಬ ಬಗ್ಗೆ ಕಂದಾಯ ಇಲಾಖೆಯಿಂದ ಆದೇಶ ಹೊರಡಿಸಿದ್ದೇವೆ. ತುರ್ತು ಸೇವೆ ಒದಗಿಸುವವರು, ತುರ್ತು ಸೇವೆ ಒದಗಿಸುವ ಕಂಪನಿಗಳು, ಟೆಲಿಕಾಂ, ಇಂಟರ್ ನೆಟ್  ಸರ್ವೀಸ್‍ನವರು, ರೋಗಿಗಳು ಹಾಗೂ ಅವರ ಸಹಾಯಕರು, ವ್ಯಾಕ್ಸಿನ್ ಪಡೆಯುವ ನಾಗರಿಕರು, ಆಸ್ಪತ್ರೆಗೆ ತೆರಳುವವರಿಗೆ ಅವಕಾಶವಿದೆ. ಕಂಪನಿಗಳಿಗೆ ತೆರಳುವವರು ಐಡಿ ಕಾರ್ಡ್ ತೋರಿಸುವುದು ಕಡ್ಡಾಯ. ದಿನಸಿ, ಹಣ್ಣು, ತರಕಾರಿ, ಮಾಂಸದ ಅಂಗಡಿ ಬೆಳಿಗ್ಗೆ 6ರಿಂದ 10ರವರೆಗೆ ತೆರೆದಿರಬಹುದು. ಹೋಟೆಲ್, ರೆಸ್ಟೋರೆಂಟ್‍ಗಳಲ್ಲಿ ಕೇವಲ ಪಾರ್ಸಲ್ ನೀಡಲು ಅವಕಾಶವಿದೆ. ಸಾರ್ವಜನಿಕರು ಟ್ಯಾಕ್ಸಿ, ಆಟೋ ಬಳಸಬಹುದು. ಬೇರೆ ಜಿಲ್ಲೆ ಹಾಗೂ ರಾಜ್ಯಕ್ಕೆ ತೆರಳಲು ಅವಕಾಶವಿದೆ. ಆದರೆ ಟಿಕೇಟ್ ತೋರಿಸುವುದು ಕಡ್ಡಾಯ ಎಂದು ತಿಳಿಸಿದರು.

TAGGED:corna virusCoronaCovid19deathkarnatakaಆರ್ ಅಶೋಕ್ಕರ್ಫ್ಯೂಕೋವಿಡ್ 19ಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

chandan shetty 1
Chinnaswamy Stampede | ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯ್ತು: ಚಂದನ್ ಶೆಟ್ಟಿ
12 minutes ago
Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
12 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago

You Might Also Like

rcb stampede
Bengaluru City

ಪೊಲೀಸರು ಅನುಮತಿ ನೀಡದೇ ಇದ್ರೂ ಪಟ್ಟು ಹಿಡಿದು ವಿಜಯೋತ್ಸವ ಆಯೋಜನೆ!

Public TV
By Public TV
22 minutes ago
Chinnaswamy Stadium Stampede Bhumik Hassan
Bengaluru City

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ – ಇಂದು ಭೂಮಿಕ್ ಅಂತ್ಯಕ್ರಿಯೆ

Public TV
By Public TV
36 minutes ago
daily horoscope dina bhavishya
Astrology

ದಿನ ಭವಿಷ್ಯ 05-06-2025

Public TV
By Public TV
1 hour ago
virat kohli bengaluru stampede
Bengaluru City

ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ

Public TV
By Public TV
7 hours ago
bengaluru stambede 1
Bengaluru City

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ

Public TV
By Public TV
8 hours ago
HD Kumaraswamy 1
Bengaluru City

ಅಲ್ಲಿ ಹೆಣಗಳು ಬಿದ್ದಿವೆ, ಇವರು ಕಪ್‌ಗೆ ಮುತ್ತು ಕೊಟ್ಟುಕೊಂಡು ನಿಂತಿದ್ದಾರೆ: ಸಿಎಂ, ಡಿಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?