Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್‍ನಿಂದ ಮೃತಪಟ್ಟವರ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಅನುಮತಿ – ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್‍ನಿಂದ ಮೃತಪಟ್ಟವರ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಅನುಮತಿ – ಅಶೋಕ್

Bengaluru City

ಕೋವಿಡ್‍ನಿಂದ ಮೃತಪಟ್ಟವರ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರಕ್ಕೆ ಅನುಮತಿ – ಅಶೋಕ್

Public TV
Last updated: April 23, 2021 8:56 pm
Public TV
Share
3 Min Read
BNG COVID DEATH 1
SHARE

– ಬೆಂಗಳೂರಿನ ತಾವರಕೆರೆಯಲ್ಲಿ ಕಟ್ಟಿಗೆಯಲ್ಲಿ ಸುಡಬಹುದು
– ಸಿದ್ದರಾಮಯ್ಯ, ಕುಮಾರಸ್ವಾಮಿ ಸಲಹೆಯನ್ನು ಪಾಲಿಸುತ್ತೇವೆ

ಬೆಂಗಳೂರು: ಕೋವಿಡ್‍ನಿಂದ ಮೃತಪಟ್ಟವರಿಗೆ ಅವರ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಲು ಅವಕಾಶ ನೀಡಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೋವಿಡ್‍ನಿಂದ ಮೃತಪಟ್ಟವರಿಗೆ ಅವರ ಸ್ವಂತ ಜಮೀನಿನಲ್ಲಿ ಅಂತ್ಯ ಸಂಸ್ಕಾರ ಮಾಡಲು ಅವಕಾಶ ನೀಡಿದ್ದೇವೆ. ಆದರೆ ಸಂಬಂಧಪಟ್ಟವರಿಂದ ಅನುಮತಿ ಪಡೆದು ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದು ಹೇಳಿದರು.

2069d374 7f39 4c6e ac14 dcba6bb33d9c

 

ನಾಳೆಯಿಂದ ಪ್ರತೀ 3 ಗಂಟೆಗೆ 50 ಶವ ಸಂಸ್ಕಾರಕ್ಕೆ ಅವಕಾಶ ನೀಡಲಾಗುತ್ತಿದೆ. ನೀರಿನ ಸಂಪರ್ಕ ಕೂಡ ಲಭ್ಯವಾಗಿದೆ. ಅಂಬುಲೆನ್ಸ್‍ಗಳು ರಸ್ತೆಯಲ್ಲಿ ಸಾಲು-ಸಾಲಾಗಿ ನಿಲ್ಲಬಾರದು. ಹೀಗಾಗಿ ಶವ ಸಂಸ್ಕಾರಕ್ಕೆ ಬರುವ ಜನರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಿದ್ದೇವೆ. ಬಂದ ತಕ್ಷಣ ಯಾವುದೇ ವಿಳಂಬವಿಲ್ಲದೆ ಶವ ಸಂಸ್ಕಾರಕ್ಕೆ ಅವಕಾಶ ಮಾಡಿ ಕೊಡಲಾಗುವುದು. ಇದಕ್ಕಾಗಿ ಎರಡು ಕೆಎಸ್‍ಆರ್‍ಪಿ ತುಕಡಿ ಕೂಡ ನಿಯೋಜನೆ ಮಾಡಿದ್ದೇವೆ. ಈ ವಿಚಾರದಲ್ಲಿ ಬೆಂಗಳೂರಿನ ಮೇಲಿರುವ ಒತ್ತಡ ನೂರಕ್ಕೆ ನೂರು ಕಡಿಮೆಯಾಗಿದೆ. ಯಾವುದೇ ಶವ ಸಂಸ್ಕಾರಕ್ಕೂ ಇನ್ನು ಮುಂದೆ ಕ್ಯೂ ಇರುವುದಿಲ್ಲ ಎಂದರು.

ಹಳ್ಳಿಗಳಲ್ಲೂ ಶವ ಸಂಸ್ಕಾರ ಮಾಡಬಹುದು. ಆದರೆ ಪಿಡಿಇಗಳಿಂದ ಅನುಮತಿ ಪಡೆಯಬೇಕು. ಸೋಂಕಿನಿಂದ ಮೃತರಾದವರನ್ನು ದಫನ್ ಮಾಡಬಹುದು. ತಾವರೆಕೆರೆಯಲ್ಲಿ ಇಂತಹ ಶವ ಸಂಸ್ಕಾರಕ್ಕೆ ಅವಕಾಶ ನೀಡಲಾಗಿದೆ. ಕಟ್ಟಿಗೆಯಲ್ಲಿ 50 ಶವ ಸುಡಲು ಅವಕಾಶವಿದೆ. ಇದಕ್ಕಾಗಿ ಈಗಾಗಲೇ 30 ಲೋಡ್ ಕಟ್ಟಿಗೆ ತರಿಸಲಾಗಿದೆ. ಇನ್ನೂ 30 ಲೋಡ್ ಕಟ್ಟಿಗೆ ಬರಲಿದೆ. ನೀರಿಗಾಗಿ ಬೋರ್‍ವೆಲ್ ಹಾಕಲಾಗಿದೆ. ಆಂಬ್ಯುಲೆನ್ಸ್ ನಿಲ್ಲಿಸಲು ಟೆಂಟ್ ಹಾಕಿದ್ದೇವೆ. ಬಂದ ಜನರು ಕುಳಿತುಕೊಳ್ಳಲು ಚೇರ್ ವ್ಯವಸ್ಥೆ ಮಾಡಲಾಗಿದೆ. ಏಕ ಕಾಲದಲ್ಲಿ 25 ಶವಗಳನ್ನು ಸುಡಬಹುದು. ಬೂದಿ, ಇನ್ನಿತರ ವೇಸ್ಟೇಜ್ ಸಂಗ್ರಹಕ್ಕೆ ಹಳ್ಳವನ್ನು ತೋಡಲಾಗಿದೆ ಎಂದು ವಿವರಿಸಿದರು.

corona death 1

ನಾಳೆಯಿಂದ ಶವ ಸುಡಲು ಯಾವುದೇ ಸಮಸ್ಯೆಯಾಗಲ್ಲ. ಇನ್ನೊಂದು ಕಡೆ 50 ಎಕರೆ ಭೂಮಿ ಗುರುತಿಸಿದ್ದೇವೆ. ಅಲ್ಲಿ ಸೋಮವಾರದಿಂದ ಶವ ಸುಡಲು ವ್ಯವಸ್ಥೆಯಾಗಲಿದೆ. ಬೇರೆ ಜಿಲ್ಲೆಗಳಲ್ಲೂ ಶವ ಸಂಸ್ಕಾರಕ್ಕೆ ಸೂಚಿಸಿದ್ದೇವೆ. ಗೋಮಾಳ ಭೂಮಿಯಲ್ಲೂ ಶವ ಸಂಸ್ಕಾರಕ್ಕೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಈಗಾಗಲೇ ಡಿಸಿಗಳಿಗೆ ಸೂಚಿಸಿದ್ದೇವೆ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಯಾವ ಸಲಹೆ ಕೊಡುತ್ತಾರೆ ಆ ಸಲಹೆಗಳನ್ನು ನಾವು ಕಾರ್ಯರೂಪಕ್ಕೆ ತರುತ್ತೇವೆ ಎಂದಿದ್ದಾರೆ.

ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಇಬ್ಬರ ಹೇಳಿಕೆಯನ್ನೂ ಗಮನಿಸಿದ್ದೇನೆ. ಇಬ್ಬರ ಟೀಕೆಗಳನ್ನೂ ಸಲಹೆ ಎಂದು ಸ್ವೀಕರಿಸಿ ಕೆಲಸ ಮಾಡುತ್ತೇವೆ. ಜೆಡಿಎಸ್, ಕಾಂಗ್ರೆಸ್‍ನಲ್ಲಿ ಭಿನ್ನಾಭಿಪ್ರಾಯ ಇದೆ. ಕಾಂಗ್ರೆಸ್ ಅಧ್ಯಕ್ಷರು ಮೊದಲು ಸತ್ತವರಿಗೆ ಸರಿಯಾಗಿ ಸಂಸ್ಕಾರ ಮಾಡಿ ಎಂದಿದ್ದಾರೆ. ಆದರೆ ಜೆಡಿಎಸ್‍ನವರು ಮೊದಲು ಬದುಕಿರುವವರಿಗೆ ವ್ಯವಸ್ಥೆ ಮಾಡಿ ಎಂದಿದ್ದಾರೆ. ಎರಡನ್ನೂ ಕೂಡ ನಾವು ಪಾಲನೆ ಮಾಡುತ್ತಿದ್ದೇವೆ ಎಂದರು.

ckb corona death 1

 

ವಾರಾಂತ್ಯದ ಕರ್ಫ್ಯೂ ಜಾರಿ ವಿಚಾರವಾಗಿ ಮಾತನಾಡಿದ ಅವರು, ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ವೇಳೆ ಯಾರೆಲ್ಲಾ ಓಡಾಡಬಹುದು ಎಂಬ ಬಗ್ಗೆ ಕಂದಾಯ ಇಲಾಖೆಯಿಂದ ಆದೇಶ ಹೊರಡಿಸಿದ್ದೇವೆ. ತುರ್ತು ಸೇವೆ ಒದಗಿಸುವವರು, ತುರ್ತು ಸೇವೆ ಒದಗಿಸುವ ಕಂಪನಿಗಳು, ಟೆಲಿಕಾಂ, ಇಂಟರ್ ನೆಟ್  ಸರ್ವೀಸ್‍ನವರು, ರೋಗಿಗಳು ಹಾಗೂ ಅವರ ಸಹಾಯಕರು, ವ್ಯಾಕ್ಸಿನ್ ಪಡೆಯುವ ನಾಗರಿಕರು, ಆಸ್ಪತ್ರೆಗೆ ತೆರಳುವವರಿಗೆ ಅವಕಾಶವಿದೆ. ಕಂಪನಿಗಳಿಗೆ ತೆರಳುವವರು ಐಡಿ ಕಾರ್ಡ್ ತೋರಿಸುವುದು ಕಡ್ಡಾಯ. ದಿನಸಿ, ಹಣ್ಣು, ತರಕಾರಿ, ಮಾಂಸದ ಅಂಗಡಿ ಬೆಳಿಗ್ಗೆ 6ರಿಂದ 10ರವರೆಗೆ ತೆರೆದಿರಬಹುದು. ಹೋಟೆಲ್, ರೆಸ್ಟೋರೆಂಟ್‍ಗಳಲ್ಲಿ ಕೇವಲ ಪಾರ್ಸಲ್ ನೀಡಲು ಅವಕಾಶವಿದೆ. ಸಾರ್ವಜನಿಕರು ಟ್ಯಾಕ್ಸಿ, ಆಟೋ ಬಳಸಬಹುದು. ಬೇರೆ ಜಿಲ್ಲೆ ಹಾಗೂ ರಾಜ್ಯಕ್ಕೆ ತೆರಳಲು ಅವಕಾಶವಿದೆ. ಆದರೆ ಟಿಕೇಟ್ ತೋರಿಸುವುದು ಕಡ್ಡಾಯ ಎಂದು ತಿಳಿಸಿದರು.

TAGGED:corna virusCoronaCovid19deathkarnatakaಆರ್ ಅಶೋಕ್ಕರ್ಫ್ಯೂಕೋವಿಡ್ 19ಸಿದ್ದರಾಮಯ್ಯಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
3 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
3 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
3 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
4 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
5 hours ago
Thawar Chand Gehlot Internal Reservation Bill
Bengaluru City

ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?