ಕೋವಿಡ್ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ 4 ಬಸ್ ಜಪ್ತಿ

Public TV
1 Min Read
rto bus

ಬೆಂಗಳೂರು: ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಕಳ್ಳ ಮಾರ್ಗದಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ನಾಲ್ಕು ಬಸ್‍ಗಳನ್ನು ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ನರೇಂದ್ರ ಹೋಳ್ಕರ್ ನೇತೃತ್ವದ ತಂಡ ದಾಳಿ ಮಾಡಿ ಜಪ್ತಿ ಮಾಡಿದೆ.

rto bus

ಬಾಗೇಪಲ್ಲಿ, ಅತ್ತಿಬೆಲೆ ಮತ್ತು ಎಸ್ಟೀಮ್ ಮಾಲ್ ಬಳಿ ದಾಳಿ ನಡೆಸಿ ಈ ಬಸ್‍ಗಳನ್ನು ಆರ್‍ಟಿಒ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಕೋವಿಡ್ ನಿಯಮಾವಳಿಗಳ ಪ್ರಕಾರ ಯಾವುದೇ ಬಸ್‍ಗಳು ಕಾರ್ಯಾರಣೆ ಮಾಡುವಂತಿಲ್ಲ. ಆದರೆ ಈ ನಾಲ್ಕು ಖಾಸಗಿ ಬಸ್‍ಗಳು ನಿಯಮಗಳನ್ನು ಉಲ್ಲಂಘಿಸಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದವು.

ಬಾಗೇಪಲ್ಲಿಯಲ್ಲಿ ಮೋಟಾರ್ ವಾಹನ ನಿರೀಕ್ಷಕ ಸಿ.ತಿಪ್ಪೇಸ್ವಾಮಿ, ವೆಂಕಟೇಶ್, ಜಿ.ಎನ್.ಸುರೇಶ್ ತಂಡ ಕಾರ್ಯಾಚರಣೆ ನಡೆಸಿ ಮೂರು ಬಸ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಎಆರ್ ಟಿಒ ರಾಜಣ್ಣ, ಕೃಷ್ಣಾನಂದ, ಇನ್‍ಸ್ಪೆಕ್ಟರ್ ರಾಜ್ ಕುಮಾರ್, ಸುಧಾಕರ್, ರಾಜೇಶ್, ಜಗದೀಶ್ ಮತ್ತು ಜಯಣ್ಣ ಅವರನ್ನೊಳಗೊಂಡ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಾತ್ರಿ ವೇಳೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಒಂದು ಬಸ್‍ನ್ನು ವಶಪಡಿಸಿಕೊಂಡಿದ್ದಾರೆ.

lockdown 4

ನೇಪಾಳಕ್ಕೆ ತೆರಳಲು ಸಿದ್ಧವಾಗಿದ್ದ ಬಸ್‍ನಲ್ಲಿದ್ದ ಪ್ರಯಾಣಿಕರನ್ನು ವಾಪಸ್ ಕಳುಹಿಸಿಲಾಗಿದೆ. ಇನ್ನೂ ಮೂರು ಬಸ್ ಗಳಲ್ಲಿದ್ದ ಪ್ರಯಾಣಿಕರಿಗೆ ಕೆಎಸ್‍ಆರ್‍ಟಿಸಿ ಬಸ್‍ಗಳ ವ್ಯವಸ್ಥೆ ಮಾಡಿ ಅವರ ಊರುಗಳಿಗೆ ತಲುಪಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *