ಕೋವಿಡ್ ನಿಯಮ ಪಾಲಿಸಿಲ್ಲ ಅಂದ್ರೆ ಈಗಿರುವ ವಿನಾಯ್ತಿ ರದ್ದು – ಮತ್ತೆ ಲಾಕ್‍ಡೌನ್ ಬಗ್ಗೆ ಸಿಎಂ ಮಾತು 

Public TV
2 Min Read
cm bsy

– ಕರ್ನಾಟಕದ 8 ಜಿಲ್ಲೆಗಳಲ್ಲಿ ಸೋಂಕು ಹೆಚ್ಚಳ

ಬೆಂಗಳೂರು: ಅನ್‍ಲಾಕ್ ಬಳಿಕ ಸೋಂಕಿನ ಪ್ರಮಾಣ ಏರುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ಬಿಗಿಕ್ರಮದ ಬಗ್ಗೆ ಮಾತು ಆಡಿದ್ದಾರೆ. ಒಂದು ವೇಳೆ ಕೋವಿಡ್ ನಿಯಮಗಳನ್ನು ಪಾಲಿಸದೇ ಹೋದರೆ ಈಗ ನೀಡಲಾಗಿರುವ 15 ದಿನಗಳ ವಿನಾಯ್ತಿಯನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.
ಜುಲೈ 3ರಂದು 15 ದಿನಗಳವರೆಗೆ ಅಂದರೆ ಜುಲೈ 19ರವರೆಗೆ ಅನ್‍ಲಾಕ್ ಘೋಷಣೆ ಮಾಡಿದ್ದಾಗಲೂ ಕೋವಿಡ್ ನಿಯಮ ಪಾಲಿಸಿಲ್ಲ ಎಂದರೆ ಮತ್ತೆ ಬಿಗಿಕ್ರಮದ ಎಚ್ಚರಿಕೆ ನೀಡಿದ್ದರು. ಈಗ ರಾಜ್ಯದಲ್ಲಿ ಮತ್ತೆ ಸೋಂಕು ಏರಿಕೆ ಆಗ್ತಿರುವ ಹಿನ್ನೆಲೆಯಲ್ಲಿ ಸಿಎಂ ಮಾತು ಮಹತ್ವ ಪಡೆದಿದೆ.
c 7 7 2021 3 medium
ಬುಧವಾರ ರಾಜ್ಯದಲ್ಲಿ 2,743 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 75 ಮಂದಿ ಸಾವನ್ನಪ್ಪಿದ್ದಾರೆ. 3,081 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 39,603 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.1.64 ಮತ್ತು ಮರಣ ಪ್ರಮಾಣ ಶೇ.2.73ರಷ್ಟು ದಾಖಲಾಗಿದೆ. ಇದುವರೆಗೆ ರಾಜ್ಯದಲ್ಲಿ 35,601 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 28,62,338ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಮದ್ಯದಂಗಡಿ ಮುಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಜೋಡಿ
c 7 7 2021 2 medium
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?:
ಬುಧವಾರದ ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 2, ಬಳ್ಳಾರಿ 22, ಬೆಳಗಾವಿ 120, ಬೆಂಗಳೂರು ಗ್ರಾಮಾಂತರ 70, ಬೆಂಗಳೂರು ನಗರ 611, ಬೀದರ್ 6, ಚಾಮರಾಜನಗರ 47, ಚಿಕ್ಕಬಳ್ಳಾಪುರ 28, ಚಿಕ್ಕಮಗಳೂರು 151, ಚಿತ್ರದುರ್ಗ 29, ದಕ್ಷಿಣ ಕನ್ನಡ 304, ದಾವಣಗೆರೆ 46, ಧಾರವಾಡ 20, ಗದಗ 6, ಹಾಸನ 220, ಹಾವೇರಿ 15, ಕಲಬುರಗಿ 14, ಕೊಡಗು 148, ಕೋಲಾರ 73, ಕೊಪ್ಪಳ 15, ಮಂಡ್ಯ 95, ಮೈಸೂರು 248, ರಾಯಚೂರು 7, ರಾಮನಗರ 34, ಶಿವಮೊಗ್ಗ 149, ತುಮಕೂರು 112, ಉಡುಪಿ 101, ಉತ್ತರ ಕನ್ನಡ 40, ವಿಜಯಪುರ 3 ಮತ್ತು ಯಾದಗಿರಿಯಲ್ಲಿ 7 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದನ್ನೂ ಓದಿ: ಅಮಿತ್ ಶಾಗೆ ಸಹಕಾರ, ಶೋಭಾ ಕರಂದ್ಲಾಜೆಗೆ ಕೃಷಿ – ಯಾರಿಗೆ ಯಾವ ಖಾತೆ?

Share This Article
Leave a Comment

Leave a Reply

Your email address will not be published. Required fields are marked *