Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ಬಿಕ್ಕಟ್ಟಿನ ನಡುವೆಯೂ ಹೊಸ ಆಶಾಕಿರಣ- ಬ್ರಿಟನ್ ಸರ್ಕಾರದಿಂದ ರಾಜ್ಯದ 1,000 ನರ್ಸುಗಳಿಗೆ ಉದ್ಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ಬಿಕ್ಕಟ್ಟಿನ ನಡುವೆಯೂ ಹೊಸ ಆಶಾಕಿರಣ- ಬ್ರಿಟನ್ ಸರ್ಕಾರದಿಂದ ರಾಜ್ಯದ 1,000 ನರ್ಸುಗಳಿಗೆ ಉದ್ಯೋಗ

Bengaluru City

ಕೋವಿಡ್ ಬಿಕ್ಕಟ್ಟಿನ ನಡುವೆಯೂ ಹೊಸ ಆಶಾಕಿರಣ- ಬ್ರಿಟನ್ ಸರ್ಕಾರದಿಂದ ರಾಜ್ಯದ 1,000 ನರ್ಸುಗಳಿಗೆ ಉದ್ಯೋಗ

Public TV
Last updated: December 31, 2020 7:57 pm
Public TV
Share
3 Min Read
dcm ashwath narayan 2
SHARE

– ವಾರ್ಷಿಕ 20 ಲಕ್ಷ ರೂ. ಪ್ಯಾಕೇಜ್, ಕೌಶಲ್ಯಾಭಿವೃದ್ಧಿ ನಿಗಮದ ಜತೆ ಇಂಗ್ಲೆಂಡ್ ಒಪ್ಪಂದ

ಬೆಂಗಳೂರು: ಇಡೀ ರಾಜ್ಯವು ಕೊರೊನ ಹೊಸ ಅಲೆಯ ಆತಂಕದಲ್ಲಿದ್ದರೆ ಕೌಶಲ್ಯಾವೃದ್ಧಿ ಖಾತೆ ಮಂತ್ರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದಾರೆ.

ಸದ್ಯಕ್ಕೆ ನಮ್ಮ ರಾಜ್ಯದ ನರ್ಸುಗಳಿಗೆ ವಿದೇಶಗಳಲ್ಲಿ ಅಪಾರ ಬೇಡಿಕೆ ಇದ್ದು, ಯುರೋಪ್ ಸೇರಿದಂತೆ ಅನೇಕ ದೇಶಗಳ ಆಸ್ಪತ್ರೆಗಳು ಅವರಿಗೆ ಉದ್ಯೋಗಾವಕಾಶ ನೀಡಲು ಮುಂದೆ ಬಂದಿವೆ. ಈ ನಿಟ್ಟಿನಲ್ಲಿ ಮೊದಲಿಗೆ ಬ್ರಿಟನ್ ಸರ್ಕಾರ 1,000 ಮಂದಿ ನರ್ಸುಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟು ಮಂದಿ ಶುಶ್ರೂಶಕಿಯರನ್ನು ಆ ದೇಶಕ್ಕೆ ಕಳಿಸಲಾಗುತ್ತಿದೆ ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು. ಬೆಂಗಳೂರಿನಲ್ಲಿ ಗುರುವಾರ ಈ ಬಗ್ಗೆ ಸಂಪೂರ್ಣ ವಿವರಗಳನ್ನು ಉಪಮುಖ್ಯಮಂತ್ರಿಗಳು ನೀಡಿದರು.

nurse image 137792 6733437

* ಬ್ರಿಟನ್‍ಗೆ ಕಳಿಸಲಾಗುತ್ತಿರುವ ಶುಶ್ರೂಶಕಿಯರಿಗೆ ಸಂವಹನ ಕಲೆ ಸೇರಿದಂತೆ ಅವರ ವೃತ್ತಿಗೆ ಸಂಬಂಧಿಸಿದ ಎಲ್ಲ ರೀತಿಯ ಕುಶಲ ತರಬೇತಿಯನ್ನು ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮ (ಕೆವಿಟಿಎಸ್‍ಡಿಸಿ) ವತಿಯಿಂದ ನೀಡಲಾಗುತ್ತದೆ. ಬ್ರಿಟನ್ ಸರ್ಕಾರ ಈ ನರ್ಸುಗಳಿಗೆ ವಾರ್ಷಿಕ ತಲಾ 20 ಲಕ್ಷ ರೂ. ಪ್ಯಾಕೇಜ್ ನಿಗದಿ ಮಾಡಿದೆ.

* ಈ ಉದ್ದೇಶಕ್ಕಾಗಿ ಅರ್ಹ ಹಾಗೂ ನುರಿತ ಶುಶ್ರೂಶಕಿಯರನ್ನು ನೇಮಕಾತಿ ಮಾಡಿಕೊಳ್ಳಲು ಆ ದೇಶದ ಹೆಲ್ತ್ ಎಜ್ಯೂಕೇಶನ್ ಇಂಗ್ಲೆಂಡ್ (ಎಚ್‍ಇಇ), ನ್ಯಾಷನಲ್ ಹೆಲ್ತ್ ಸರ್ವೀಸಸ್ (ಎನ್‍ಎಚ್‍ಎಸ್) ಸಂಸ್ಥೆಗಳ ಜತೆ ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆ ಒಪ್ಪಂದ ಮಾಡಿಕೊಂಡಿದೆ.

hospital bed

* ವಿದೇಶದಲ್ಲಿ ಉದ್ಯೋಗ ಕೊಡಿಸುವ ಸಲುವಾಗಿ ಸರ್ಕಾರವೇ ಅಂತಾರಾಷ್ಟ್ರೀಯ ವಲಸೆ ಕೇಂದ್ರ ಸ್ಥಾಪಿಸಿದೆ. ಇದರ ಮೂಲಕ ಇಷ್ಟೂ ಶುಶ್ರೂಶಕಿಯರನ್ನು ಕಳಿಸಲಾಗುತ್ತಿದ್ದು, ಅವರ ಜತೆ ನಿರಂತರವಾಗಿ ಈ ಕೇಂದ್ರವು ಸಂಪರ್ಕದಲ್ಲಿರುತ್ತದೆ ಹಾಗೂ ಅವರ ಕುಂದುಕೊರತೆಗಳ ಬಗ್ಗೆ ನಿಗಾ ಇರಿಸುತ್ತದೆ. ಯಾವುದೇ ಸಮಸ್ಯೆ ಅಥವಾ ದೂರು ಇದ್ದರೆ ಬ್ರಿಟನ್‍ನಿಂದಲೇ ಇಲ್ಲಿಗೆ ತಿಳಿಸಬಹುದು. ಕೂಡಲೇ ಅವರಿಗೆ ಸೂಕ್ತ ಸಹಕಾರ ಒದಗಿಸಲಾಗುವುದು.

* ಸದ್ಯಕ್ಕೆ ರಾಜ್ಯದಲ್ಲಿ ಕುಶಲತೆಯುಳ್ಳ ಮಾನವ ಸಂಪನ್ಮೂಲ ವಿಪುಲವಾಗಿದ್ದು, ಇಂಥ ನಿರುದ್ಯೋಗಿ ಯುವಜನರಿಗೆ ಜಾಗತಿಕ ಮಟ್ಟದಲ್ಲಿ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಈ ವಲಸೆ ಕೇಂದ್ರವನ್ನು ಸ್ಥಾಪಿಸಲಾಗಿದೆ.

hospital bed
ಸಾಂದರ್ಭಿಕ ಚಿತ್ರ

* ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯು ವಿದೇಶಗಳಿಗೆ ಉದ್ಯೋಗಕ್ಕಾಗಿ ತೆರಳುವ ಯುವಜನರಿಗೆ ಸೂಕ್ತ ಮಾರ್ಗದರ್ಶನ, ತಾಂತ್ರಿಕ ಬೆಂಬಲ ಹಾಗೂ ಪೂರಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪಬ್ಲಿಕ್ ಅಫೇಯರ್ಸ್ ಸೆಂಟರ್ ಜಗೆ ಒಡಂಬಡಿಕೆ ಮಾಡಿಕೊಂಡಿದೆ.

* ಶುಶ್ರೂಶಕಿಯರ ಜತೆಗೆ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮವು (ಕೆವಿಟಿಎಸ್‍ಡಿಸಿ) ಕುವೈತ್‍ನ ಅರೆ ಸರಕಾರಿ ಸಂಸ್ಥೆಯಾದ ಅಲ್-ದುರಾ ಮ್ಯಾನ್‍ಪವರ್ ಸಪ್ಲೈ (Al-Durra Manpower Supply) ಜತೆ ಇನ್ನೊಂದು ಒಪ್ಪಂದವನ್ನು ಮಾಡಿಕೊಂಡಿದೆ. ಇದರ ಪ್ರಕಾರ ಕುವೈತ್‍ನಲ್ಲಿ ರಾಜ್ಯದ ಅನುಭವಿ ವಾಹನ ಚಾಲಕರು, ಹೌಸ್ ಬಾಯ್ಸ್ ಹಾಗೂ ಅಡುಗೆ ಮಾಡುವವರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

Ashwath Narayan

* ಕೆವಿಟಿಎಸ್‍ಡಿಸಿ ಮತ್ತು ಕೆನಡಾ ಸರಕಾರದ ನಡುವೆ ಹೊಸ ಒಪ್ಪಂದ ಮಾತುಕತೆ ಪ್ರಗತಿಯಲ್ಲಿದ್ದು, ಅದರ ಪ್ರಕಾರ ಐಟಿ, ವಿಡಿಯೋ ಗೇಮ್ ಮತ್ತು ಎಐ (ಆರ್ಟಿಫಿಶಿಯಲ್ ಇಂಟಲಿಜೆನ್ಸ್) ವಲಯಕ್ಕೆ ಸಂಬಂಧಿಸಿದ ಅರ್ಹ ಅಭ್ಯರ್ಥಿಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು. ಕ್ಯುಬೆಕ್‍ನ ಮಾಂಟ್ರಿಯಲ್‍ಗೆ ಉದ್ಯೋಗ ಮತ್ತು ವಲಸೆಗೆ ಅನುಕೂಲವಾಗುವಂತೆ ಇಲಾಖೆಯು ಈ ಒಪ್ಪಂದ ಮಾಡಿಕೊಳ್ಳುವ ಕಾರ್ಯದಲ್ಲಿ ಹೆಜ್ಜೆ ಇಟ್ಟಿದೆ.

* ಕೆವಿಟಿಎಸ್‍ಡಿಸಿ ಮೂಲಕ ವಿದೇಶದಲ್ಲಿ ಸೂಕ್ತ ವಿದೇಶಿ ಉದ್ಯೋಗದಾತರನ್ನು ಗುರುತಿಸುವ, ಸಂಪರ್ಕವನ್ನು ಸ್ಥಾಪಿಸಲು ಮತ್ತು ಕರ್ನಾಟಕ ರಾಜ್ಯದಿಂದ ಸುರಕ್ಷಿತ ವಲಸೆ ಕಾರ್ಯ ವಿಧಾನವನ್ನು ಉತ್ತೇಜಿಸಲು ವಿವಿಧ ದೇಶಗಳಲ್ಲಿನ ಕನ್ನಡ ಸಂಘಗಳ ಜತೆ ಸಂಪರ್ಕದಲ್ಲಿದೆ.

TAGGED:DCM Ashwath NarayanenglandGovernment of BritainkarnatakanursePublic TVಇಂಗ್ಲೆಂಡ್ಕರ್ನಾಟಕಡಿಸಿಎಂ ಅಶ್ವಥ್ ನಾರಾಯಣ್ನರ್ಸ್ಪಬ್ಲಿಕ್ ಟಿವಿಬ್ರಿಟನ್ ಸರ್ಕಾರ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

Raichuru Accident 1
Districts

ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ

Public TV
By Public TV
2 minutes ago
karnataka High Court
Bengaluru City

SSLCಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ: ಹೈಕೋರ್ಟ್

Public TV
By Public TV
10 minutes ago
Akshaya Tritiya 1
Bengaluru City

ಯುದ್ಧದ ಭೀತಿಯ ಮಧ್ಯೆ ಅಕ್ಷಯ ತೃತೀಯ – ಈ ಬಾರಿ ಚಿನ್ನ ಖರೀದಿಗೆ ಸೂಕ್ತನಾ?

Public TV
By Public TV
26 minutes ago
virat kohli anushka sharma
Cricket

IPLನಲ್ಲಿ ಕೇವಲ 1 ರನ್‌ನಿಂದ 66ನೇ ಅರ್ಧಶತಕ ಮಿಸ್‌ ಮಾಡಿಕೊಂಡ ಕೊಹ್ಲಿ – ಪತ್ನಿ ಅನುಷ್ಕಾ ರಿಯಾಕ್ಷನ್‌ ಹೇಗಿತ್ತು?

Public TV
By Public TV
49 minutes ago
Strait of Hormuz India Flagged Fuel Tanker
Latest

ಒಮನ್‌ ಭಾಗದ ಹಾರ್ಮುಜ್‌ ಜಲಸಂಧಿ ಮೂಲಕ ಹಡಗುಗಳ ಮುಕ್ತ ಪ್ರಯಾಣಕ್ಕೆ ಅನುಮತಿ ನೀಡುತ್ತಾ ಇರಾನ್?

Public TV
By Public TV
2 hours ago
Vinay Kulkarni 3
Bengaluru City

ಯೋಗೇಶ್‌ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿ ದೋಷಿ – ಇಂದು ಶಿಕ್ಷೆ ಪ್ರಮಾಣ ಪ್ರಕಟ, ಎಲ್ಲರ ಚಿತ್ತ ಕೋರ್ಟ್‌ನತ್ತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?