Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ಮೂರನೇ ಅಲೆ, ರಾಜ್ಯದಲ್ಲೇ ಮೊದಲು ಹಾವೇರಿಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Haveri | ಕೋವಿಡ್ ಮೂರನೇ ಅಲೆ, ರಾಜ್ಯದಲ್ಲೇ ಮೊದಲು ಹಾವೇರಿಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ: ಬೊಮ್ಮಾಯಿ

Haveri

ಕೋವಿಡ್ ಮೂರನೇ ಅಲೆ, ರಾಜ್ಯದಲ್ಲೇ ಮೊದಲು ಹಾವೇರಿಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ: ಬೊಮ್ಮಾಯಿ

Public TV
Last updated: June 24, 2021 8:26 pm
Public TV
Share
2 Min Read
hvr bommai
SHARE

ಹಾವೇರಿ: ಕೊರೊನಾ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಬೇಕೆಂಬ ಉದ್ದೇಶದಿಂದ ರಾಜ್ಯದಲ್ಲೇ ಮೊದಲ ಬಾರಿಗೆ ಜಿಲ್ಲೆಯಲ್ಲಿ 16 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆಗೆ ಗೃಹ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಚಾಲನೆ ನೀಡಿದರು.

ನಗರದ ನಾಗೇಂದ್ರನಮಟ್ಟಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಮಕ್ಕಳ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು, ತಪಾಸಣೆಗೆ ಒಳಗಾದ ಎಲ್ಲ ಮಕ್ಕಳ ಆರೋಗ್ಯ ಮಾಹಿತಿ ಸಂಗ್ರಹಿಸಲಾಗುವುದು. ಮೂರನೇ ಅಲೆಯ ಪರಿಣಾಮ ಕ್ಷೀಣಿಸುವವರೆಗೂ ಅವರಿಗೆ ಅಗತ್ಯ ವೈದ್ಯಕೀಯ ಉಪಚಾರದ ನಿರ್ವಹಣೆ ಮೂಲಕ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದರು.

hvr bommai 2 2 medium

ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳ ತಜ್ಞರು ಪಾಲ್ಗೊಂಡು ತಪಾಸಣೆ ನಡೆಸಲಿದ್ದಾರೆ. ಜೂನ್ 25 ರಿಂದ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯ ಆರಂಭಗೊಳ್ಳಲಿದೆ. ಜುಲೈ 30ರೊಳಗೆ ಜಿಲ್ಲೆಯ 16 ವರ್ಷದೊಳಗಿನ 2.75 ಲಕ್ಷ ಮಕ್ಕಳ ಆರೋಗ್ಯ ತಪಾಸಣೆ ಪೂರ್ಣಗೊಳಿಸಲಾಗುವುದು. ಮಕ್ಕಳೊಂದಿಗೆ ಶಿಕ್ಷಕರು ಹಾಗೂ ಮಕ್ಕಳ ಪಾಲಕರಿಗೂ ಆರೋಗ್ಯ ತಪಾಸಣೆ ಹಾಗೂ ಕೋವಿಡ್ ವ್ಯಾಕ್ಸಿನ್ ಹಾಕಲು ಕ್ರಮ ವಹಿಸಲಾಗಿದೆ. ಮಕ್ಕಳ ಆರೋಗ್ಯದ ರಕ್ಷಣೆ ಮಾಡಲು ಈ ಶಿಬಿರವನ್ನು ಆರಂಭಿಸಲಾಗಿದೆ ಎಂದು ಹೇಳಿದರು.

hvr bommai 2 1 medium

ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಲು ಇನ್ನೂ ನಿರ್ಧಾರವಾಗಿಲ್ಲ. ಹೀಗಾಗಿ ಲಸಿಕೆ ನೀಡುವವರೆಗೂ ಅವರ ಆರೋಗ್ಯದ ಕಾಳಜಿ ಪ್ರಮುಖವಾಗಿದೆ. ಪ್ರತಿಯೊಂದು ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ಅವರ ದಾಖಲೆಗಳನ್ನು ನಿರ್ವಹಿಸಲಾಗುವುದು. ಮುಂದಿನ ಮೂರು ತಿಂಗಳವರೆಗೆ ಅವರಿಗೆ ಪೌಷ್ಠಿಕ ಆಹಾರ, ಔಷಧಗಳನ್ನು ಒದಗಿಸುವುದರ ಮೂಲಕ ಆರೋಗ್ಯ ಸದೃಢರನ್ನಾಗಿಸಿ, ಕೋವಿಡ್‍ನಿಂದ ರಕ್ಷಿಸುವ ಕೆಲಸ ಮಾಡಲಾಗುವುದು. ತಪಾಸಣೆಯ ಸಂದರ್ಭದಲ್ಲಿ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳಿಗೆ ಪೌಷ್ಠಿಕ ಆಹಾರ ಕಿಟ್, ಪ್ರೋಟೀನ್ ಸೇರಿದಂತೆ ರೋಗನಿರೋಧ ಶಕ್ತಿ ಹೆಚ್ಚಿಸುವ ಪೂರಕ ಸಾಮಗ್ರಿಗಳನ್ನು ನೀಡಲಾಗುವುದು ಎಂದು ಹೇಳಿದರು.

hvr bommai 2 3 medium

ಜಿಲ್ಲೆಯ ಪ್ರತಿ ತಾಲೂಕಿನಲ್ಲಿ 30 ರಿಂದ 50 ಸಾವಿರ ಮಕ್ಕಳಿವೆ. ಅವರನ್ನು ತಪಾಸಣೆ ಮಾಡಿ, ಬಯೋಡಾಟಾ, ಆರೋಗ್ಯ ಸಮಸ್ಯೆಗಳ ಕುರಿತಂತೆ ಮಾಹಿತಿ ಸಂಗ್ರಹಿಸಿ ಮುಂದಿನ ನಾಲ್ಕೈದು ತಿಂಗಳು ಮಾನಿಟರ್ ಮಾಡಲಾಗುವುದು. ಶಿಕ್ಷಕರು, ಪಾಲಕರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ದಣಿವರಿಯದೆ ಕೆಲಸ ಮಾಡಿ, ಈ ಕಾರ್ಯಕ್ರಮವನ್ನು ಯಶಸ್ವಿ ಮಾಡಬೇಕು ಎಂದು ಕರೆ ನೀಡಿದರು.

ಶಾಸಕ ಹಾಗೂ ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡದ ಆಯೋಗದ ಅಧ್ಯಕ್ಷ ನೆಹರು ಓಲೇಕಾರ ಮಾತನಾಡಿ, ರಾಜ್ಯದಲ್ಲೇ ಪ್ರಥಮವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಕಾಳಜಿ ವಹಿಸಿ ಕೋವಿಡ್ ಮೂರನೇ ಅಲೆಯ ಪ್ರಭಾವದಿಂದ ಮಕ್ಕಳನ್ನು ರಕ್ಷಿಸಲು ಆರೋಗ್ಯ ತಪಾಸಣೆ ಮಾಡಿಸುತ್ತಿದ್ದಾರೆ. ಮಕ್ಕಳಿಗೆ ಸಣ್ಣ ಜ್ವರ, ಶೀತ ಬಂದರೂ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಸೇರಿಸಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳಿಗೆ ಮಕ್ಕಳನ್ನು ತಪಾಸಣೆಗೆ ಕರೆದುಕೊಂಡು ಹೋಗಬೇಡಿ. ಮುಂದಿನ ಮೂರು ತಿಂಗಳವರೆಗೆ ಮಕ್ಕಳಿಗೆ ಯಾವುದೇ ಆರೋಗ್ಯ ಸಮಸ್ಯೆ ಇದ್ದರೆ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ. ಬೇರೆಯವರ ಮನೆಗೆ ಮಕ್ಕಳನ್ನು ಕಳುಹಿಸಬೇಡಿ. ಶಿಕ್ಷಕರ ಬಳಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ, ಚಿಕಿತ್ಸೆಗೆ ನೆರವು ಪಡೆಯಿರಿ ಎಂದು ಮನವಿ ಮಾಡಿಕೊಂಡರು.

WhatsApp Image 2021 06 24 at 7.17.25 PM medium

ಮಕ್ಕಳ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಪೌಷ್ಠಿಕ ಆಹಾರದ ಕಿಟ್, ಅಕ್ಷರ ದಾಸೋಹದಡಿ ಆಹಾರದ ಕಿಟ್, ಅಂಗವಾಡಿ ಮಕ್ಕಳಿಗೆ ಔಷಧಿ ಕಿಟ್, ಕಡಿಮೆ ತೂಕದ ಮಕ್ಕಳಿಗೆ ಪೂರಕ ಪೌಷ್ಠಿಕ ಪ್ರೋಟಿನ್ ಕಿಟ್‍ಗಳನ್ನು ಗೃಹ ಸಚಿವರು ಹಾಗೂ ಶಾಸಕರು ವಿತರಿಸಿದರು.

TAGGED:3rd wave3ನೇ ಅಲೆBasavaraj BommaichildrenCoronavirushaverihealth checkupಆರೋಗ್ಯ ತಪಾಸಣೆಕೊರೊನಾ ವೈರಸ್ಬಸವರಾಜ್ ಬೊಮ್ಮಾಯಿಮಕ್ಕಳುಹಾವೇರಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
7 minutes ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
8 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
9 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
9 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
9 hours ago
daily horoscope dina bhavishya
Astrology

ದಿನ ಭವಿಷ್ಯ 10-03-2026

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?