Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ ನೀಡಲು ಕೇಂದ್ರೀಕೃತ ವ್ಯವಸ್ಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ ನೀಡಲು ಕೇಂದ್ರೀಕೃತ ವ್ಯವಸ್ಥೆ

Bengaluru City

ಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ ನೀಡಲು ಕೇಂದ್ರೀಕೃತ ವ್ಯವಸ್ಥೆ

Public TV
Last updated: July 28, 2020 8:45 pm
Public TV
Share
3 Min Read
Sudhakar 2
SHARE

– ತಜ್ಞರು, ಅಧಿಕಾರಿಗಳೊಂದಿಗೆ ಸಚಿವ ಡಾ.ಕೆ.ಸುಧಾಕರ್ ಸಭೆ

ಬೆಂಗಳೂರು: ಕೋವಿಡ್ ಪಾಸಿಟಿವ್ ಆದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಬೇಕೆ. ಮನೆ ಆರೈಕೆಗೆ ಒಳಪಡಬೇಕೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗಬೇಕೆ ಎಂದು ಕೂಡಲೇ ನಿರ್ಧರಿಸಲು ಸಾಧ್ಯವಾಗುವಂತಹ ತಂತ್ರಜ್ಞಾನ ಆಧಾರಿತ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸಲು ನಿರ್ಧರಿಸಲಾಗಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಮಂಗಳವಾರ ನಡೆಸಿದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.

CORONA 10

ಕೋವಿಡ್‍ಗೆ ಸಂಬಂಧಿಸಿದಂತೆ ಸರ್ಕಾರ ಬಳಸುತ್ತಿರುವ ಎಲ್ಲ ಆ್ಯಪ್, ತಂತ್ರಜ್ಞಾನಗಳನ್ನು ಒಟ್ಟು ಮಾಡಿ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸುವುದರಿಂದ ಕೋವಿಡ್ ರೋಗಿಯು ಎಲ್ಲಿ ದಾಖಲಾಗಬೇಕು ಅಥವಾ ಯಾವ ರೀತಿಯ ಚಿಕಿತ್ಸೆಗೆ ಒಳಪಡಬೇಕು ಎಂಬುದನ್ನು ತಕ್ಷಣ ತೀರ್ಮಾನಿಸಬಹುದು. ಇದರಿಂದಾಗಿ ಚಿಕಿತ್ಸೆ ಪಡೆಯುವಲ್ಲಿನ ಗೊಂದಲ ನಿವಾರಣೆಯಾಗಲಿದೆ ಎಂದು ಸಚಿವರು ಸಭೆಗೆ ಸೂಚಿಸಿದರು.

ಸದ್ಯಕ್ಕೆ ಆಪ್ತಮಿತ್ರ ಸೇರಿದಂತೆ ಹಲವು ಆ್ಯಪ್‍ಗಳು ಬಳಕೆಯಲ್ಲಿವೆ. ರಾಜ್ಯದಲ್ಲಿ ಕೋವಿಡ್ ಅಂಕಿ ಅಂಶವನ್ನು ನೀಡುವ ಡ್ಯಾಶ್ ಬೋರ್ಡ್ ಕೂಡ ಇದೆ. ಆದರೆ ಡ್ಯಾಶ್ ಬೋರ್ಡ್ ನಲ್ಲಿ ರಿಯಲ್ ಟೈಮ್‍ನಲ್ಲಿ ಮಾಹಿತಿ ದೊರೆಯುವಂತಾಗಬೇಕು. ಯಾವ ಆಸ್ಪತೆಯಲ್ಲಿ ಎಷ್ಟು ಹಾಸಿಗೆ ಖಾಲಿ ಇದೆ. ಪ್ರತಿ ಆಸ್ಪತ್ರೆಯಲ್ಲಿರುವ ಕೋವಿಡ್ ಮತ್ತು ನಾನ್ ಕೋವಿಡ್ ರೋಗಿಗಳೆಷ್ಟು ಎಂಬುದು ಡ್ಯಾಶ್ ಬೋರ್ಡಿನಲ್ಲಿ ತಿಳಿಯುವಂತಾಗಬೇಕು. ಕೋವಿಡ್ ಖಚಿತಪಟ್ಟ ನಂತರ ವ್ಯಕ್ತಿಯು ದೂರವಾಣಿ ಕರೆ ಮಾಡಿದ ಕೂಡಲೇ ಆಸ್ಪತ್ರೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗುವಂತೆ ಸಹಾಯ ದೊರೆಯಬೇಕು. ಇಂತಹ ಕೇಂದ್ರೀಕೃತ ವ್ಯವಸ್ಥೆಯನ್ನು ರಾಜ್ಯದಲ್ಲಿ ತರಬೇಕು ಎಂದು ಸೂಚಿಸಿದರು.

covid 19 quarantine 3d red virus cells white background coronavirus disease 2019 pandemic protection concept illustration concept covid 19 141767 148

ಹೊಸದೆಹಲಿ ಮತ್ತು ಮಧ್ಯ ಪ್ರದೇಶದಲ್ಲಿ ‘ಸ್ಟೆಪ್ 1’ ಎಂಬ ಸಂಸ್ಥೆ ಯಶಸ್ವಿಯಾಗಿ ಸೇವೆ ನೀಡುತ್ತಿದೆ. ಈ ಸಂಸ್ಥೆ ತನ್ನದೇ ಆದ ವೈದ್ಯ, ನರ್ಸ್ ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ಹೊಂದಿದ್ದು, ಕೋವಿಡ್ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭ್ಯವಾಗುವಂತೆ ಮಾಡುತ್ತಿದೆ. ಈ ಸಂಸ್ಥೆಯಿಂದ ಮಾಹಿತಿ ಪಡೆದುಕೊಂಡು ಆ ಮಾದರಿಯನ್ನು ಕೂಡ ರಾಜ್ಯದಲ್ಲಿ ಅನುಷ್ಠಾನಕ್ಕೆ ತರಬಹುದು ಎಂದು ಸಚಿವ ಡಾ.ಕೆ.ಸುಧಾಕರ್ ಸೂಚಿಸಿದರು.

ನಂತರ ಮಾತನಾಡಿದ ಐಟಿಬಿಟಿ ಇಲಾಖೆಯ ಕಾರ್ಯದರ್ಶಿ ಅಜಯ್ ಸೇಠ್, ಕೇಂದ್ರೀಕೃತ ವ್ಯವಸ್ಥೆಯನ್ನು ಕಲ್ಪಿಸಲು ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸಭೆಯಲ್ಲಿ ಪಾಲ್ಗೊಂಡಿದ್ದರು.

CORONA VIRUS 1

ಇತರೆ ಅಂಶಗಳು:
ಕೊರೊನಾ ರೋಗಿಯ ರೋಗದ ಗಂಭೀರತೆಯನ್ನು ನಿರ್ಧರಿಸಿ ಆತನನ್ನು ಕೋವಿಡ್ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಲಕ್ಷಣ ರಹಿತ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಬಾರದು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ಸಭೆಗೆ ವಿವರಿಸಿದರು.

ಕೊರೊನಾ ರೋಗಿಯ ರೋಗದ ಗಂಭೀರತೆಯನ್ನು ಅರಿತು ಅವರನ್ನು ಕೋವಿಡ್ ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ದಾಖಲಿಸಲಾಗುವುದು. ರೋಗಿಯನ್ನು ಗೂಗಲ್ ಮ್ಯಾಪ್ ಸಹಾಯದಿಂದಲೇ ಪತ್ತೆ ಮಾಡಿ ಅವರಿರುವಲ್ಲಿಗೆ ವೈದ್ಯರನ್ನು ಕಳುಹಿಸಿ ರೋಗದ ಗಂಭೀರತೆಯನ್ನು ಪರೀಕ್ಷಿಸಲಾಗುವುದು. ನಂತರ ವೈದ್ಯರು ಅವರನ್ನು ಆಸ್ಪತ್ರೆ ಅಥವಾ ಆರೈಕೆ ಕೇಂದ್ರಕ್ಕೆ ದಾಖಲಿಸುವ ಕುರಿತು ನಿರ್ಧರಿಸುತ್ತಾರೆ. ಹೊಸ ಕೇಂದ್ರೀಕೃತ ವ್ಯವಸ್ಥೆಯು ಇದನ್ನು ಒಳಗೊಳ್ಳಲಿದೆ ಎಂದು ಅಧಿಕಾರಿಗಳು ವಿವರಿಸಿದರು.

ರಾಜ್ಯದಲ್ಲಿ ಇಂದು 5,536 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಬೆಂಗಳೂರಿನಲ್ಲಿ 1,898 ಪ್ರಕರಣಗಳು ಪತ್ತೆಯಾಗಿವೆ. ಇಂದು ರಾಜ್ಯದಲ್ಲಿ 37,720 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಈವರೆಗೂ ಒಟ್ಟು 12,42,771 ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 2,819 ಜನ ಗುಣಮುಖರಾಗಿದ್ದು ಬೆಂಗಳೂರಿನಲ್ಲಿ 572 ಜನ ಗುಣಮುಖ ಹೊಂದಿದ್ದಾರೆ. pic.twitter.com/EwW92ELcbC

— Dr Sudhakar K (@DrSudhakar_) July 28, 2020

ಬೇರೆ ಜಿಲ್ಲೆಗಳಲ್ಲಿ ಕೊರೊನಾ ಪರೀಕ್ಷೆ ಸಂಖ್ಯೆ ಹೆಚ್ಚಿದೆ. ಆದರೆ ಬೆಂಗಳೂರಿನಲ್ಲಿ ಪರೀಕ್ಷೆ ಸಂಖ್ಯೆ ಕಡಿಮೆಯಾಗುತ್ತಿದೆ. ಪರೀಕ್ಷೆ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದರು.

ನಿಯಮಗಳ ಕಟ್ಟನಿಟ್ಟು ಪಾಲನೆಗೆ ಸೂಚನೆ:
ಈ ಸಭೆಗೂ ಮುನ್ನ ಖಾಸಗಿ ವೈದ್ಯಕೀಯ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಚಿವ ಡಾ.ಕೆ.ಸುಧಾಕರ್ ಸಭೆ ನಡೆಸಿದರು. ಪ್ರತಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಮೀಸಲಿಡುವ ಸಂಬಂಧ ಇರುವ ನಿಯಮಗಳನ್ನು ಪಾಲಿಸಬೇಕು. ಲಕ್ಷಣ ರಹಿತ ರೋಗಿಗಳನ್ನು (ಎ ಸಿಂಪ್ಟಮ್ಯಾಟಿಕ್) ಆಸ್ಪತ್ರೆಗೆ ಸೇರಿಸದಿರಲು ಕ್ರಮ ವಹಿಸಬೇಕು ಎಂದು ಸಚಿವರು ಸೂಚಿಸಿದರು.

TAGGED:bengaluruCoronaCovid Care CenterdrhospitalmeetingPublic TVSudhakarTheatmentಆಸ್ಪತ್ರೆಕೊರೊನಾಕೋವಿಡ್ ಆರೈಕೆ ಕೇಂದ್ರಚಿಕಿತ್ಸೆಡಾಪಬ್ಲಿಕ್ ಟಿವಿಬೆಂಗಳೂರುಸಭೆಸುಧಾಕರ್
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
3 seconds ago
PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
31 minutes ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
41 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
57 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
59 minutes ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?