Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರೋಗ್ಯ , ಕ್ಷೇಮ ಕೇಂದ್ರ ನಿರ್ಮಾಣದಲ್ಲಿ ಕರ್ನಾಟಕ ಮುಂಚೂಣಿ: ಡಾ.ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆರೋಗ್ಯ , ಕ್ಷೇಮ ಕೇಂದ್ರ ನಿರ್ಮಾಣದಲ್ಲಿ ಕರ್ನಾಟಕ ಮುಂಚೂಣಿ: ಡಾ.ಕೆ.ಸುಧಾಕರ್

Bengaluru City

ಆರೋಗ್ಯ , ಕ್ಷೇಮ ಕೇಂದ್ರ ನಿರ್ಮಾಣದಲ್ಲಿ ಕರ್ನಾಟಕ ಮುಂಚೂಣಿ: ಡಾ.ಕೆ.ಸುಧಾಕರ್

Public TV
Last updated: May 18, 2021 6:12 pm
Public TV
Share
3 Min Read
K Sudhakar
SHARE

ಬೆಂಗಳೂರು: ಗ್ರಾಮೀಣ ಪ್ರದೇಶಗಳ ಜನರಿಗೆ ಪ್ರಾಥಮಿಕ ಹಂತದ ಆರೋಗ್ಯ ಸೇವೆ ನೀಡುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈ ಯೋಜನೆಯ ಅನುಷ್ಠಾನದಲ್ಲಿ ಉತ್ತಮ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

sudhakar 4

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಂಡ ಈ ಯೋಜನೆಯಲ್ಲಿ, 2020-21 ನೇ ಸಾಲಿನಲ್ಲಿ ಕರ್ನಾಟಕ ಉತ್ತಮ ರಾಜ್ಯ ಎಂದೆನಿಸಿಕೊಂಡಿದೆ. ಉಪಕೇಂದ್ರಗಳ ವಿಭಾಗದಲ್ಲಿ 2,263 ಎಚ್‍ಡಬ್ಲ್ಯುಸಿ ಆರಂಭಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ಮಾರ್ಚ್ 31ರವರೆಗೆ, 3,300 ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ನಿಗದಿತ ಗುರಿಗಿಂತ 146% ರಷ್ಟು ಸಾಧನೆಯಾಗಿದೆ.

Karnataka emerges as the best state in the country in implementation of Health and Wellness Centres (HWCs) under Ayushman Bharat Program. I appreciate all the officers and staff of Health and Family Welfare Department on this outstanding achievement. @PMOIndia @CMofKarnataka pic.twitter.com/OGJ5uQJCcD

— Dr Sudhakar K (@mla_sudhakar) May 18, 2021

2,096 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, 2,168 ಪೂರ್ಣವಾಗಿದೆ. ಅಂದರೆ ನಿಗದಿತ ಗುರಿಗಿಂತ 103% ರಷ್ಟು ಸಾಧನೆಯಾಗಿದೆ. 294 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, 364 ಕೇಂದ್ರ ರೂಪಿಸಲಾಗಿದೆ. ನಿಗದಿತ ಗುರಿಗಿಂತ 124% ರಷ್ಟು ಸಾಧನೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ 4,653 ಎಚ್‍ಡಬ್ಲ್ಯುಸಿ ಸ್ಥಾಪಿಸುವ ಗುರಿಯನ್ನು ಕೇಂದ್ರ ಸರ್ಕಾರ ನೀಡಿದ್ದು, ಗುರಿಯನ್ನು ಮೀರಿ 5,832 ಕೇಂದ್ರಗಳನ್ನು ಆರಂಭಿಸಲಾಗಿದೆ. ಅಂದರೆ, ಒಟ್ಟಾರೆಯಾಗಿ 125% ರಷ್ಟು ಸಾಧನೆಯನ್ನು ರಾಜ್ಯ ಸರ್ಕಾರ ಮಾಡಿದೆ.

ಬಹುತೇಕ ಮಕ್ಕಳಲ್ಲಿ ಕೊರೊನಾ ಸೋಂಕು ಸೌಮ್ಯ ಅಥವಾ ಕಡಿಮೆ ಲಕ್ಷಣದ್ದಾಗಿರುತ್ತದೆ. ಕೊರೊನಾ ಸೋಂಕಿಗೆ ಒಳಗಾಗಿರುವ ಪೋಷಕರು ತಮ್ಮ ಮಕ್ಕಳ ಬಗ್ಗೆ ವಿಶೇಷ ಜಾಗ್ರತೆ, ಕಾಳಜಿ ವಹಿಸುವುದು ಅತ್ಯವಶ್ಯಕ.

ಮಕ್ಕಳನ್ನು ಕೊರೊನಾ ಸೋಂಕಿನಿಂದ ರಕ್ಷಿಸೋಣ. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ. pic.twitter.com/VXpjlW9BYo

— Dr Sudhakar K (@mla_sudhakar) May 18, 2021

ಜನಸಮುದಾಯಕ್ಕೆ ಸ್ಥಳೀಯ ಮಟ್ಟದಲ್ಲಿ ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಾಥಮಿಕ ಆರೋಗ್ಯ ಸೇವೆಯನ್ನು ಬಲಪಡಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಎಲ್ಲ ಆರೋಗ್ಯ ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಸೇವೆ ನೀಡುತ್ತಿರುವ 11,595 ಕೇಂದ್ರಗಳನ್ನು ಎಚ್‍ಡಬ್ಲ್ಯುಸಿ ಆಗಿ ಮೇಲ್ದರ್ಜೆಗೇರಿಸುವ ಗುರಿ ಇದೆ.

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಆರಂಭವಾಗಿರುವ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಹದಿಹರೆಯದವರಿಗೆ ಆಪ್ತ ಸಮಾಲೋಚನೆ, ಸಾರ್ವಜನಿಕರಿಗೆ ಯೋಗ ಶಿಕ್ಷಣ ಶಿಬಿರಗಳು, ಅರ್ಹ ದಂಪತಿಗೆ ತಾತ್ಕಾಲಿಕ ಹಾಗೂ ಶಾಶ್ವತ ಗರ್ಭ ನಿರೋಧಕ ವಿಧಾನಗಳ ಸೇವೆ, ಕಣ್ಣು, ಮೂಗು, ಗಂಟಲು ಮತ್ತು ಬಾಯಿ ಸಂಬಂಧಿ ರೋಗಗಳಿಗೆ ತಪಾಸಣೆ, ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಅಗತ್ಯವಿದ್ದರೆ ಮೇಲ್ದರ್ಜೆಯ ಆಸ್ಪತ್ರೆಗಳಿಗೆ ಕಳುಹಿಸಿಕೊಡುವ ಸೌಲಭ್ಯಗಳಿವೆ.

????ಇದರ ಚಿಕಿತ್ಸೆಗೆ ಎಂಎಂಸಿ,ಮೈಸೂರು, ಸಿಮ್ಸ್, ಶಿವಮೊಗ್ಗ, ಜಿಮ್ಸ್,ಕಲಬುರ್ಗಿ, ಕಿಮ್ಸ್ ಹುಬ್ಬಳ್ಳಿ, ಕೆಎಂಸಿ, ಮಣಿಪಾಲ, ವೆನ್ಲಾಕ್ ಆಸ್ಪತ್ರೆ, ಮಂಗಳೂರು ಇವುಗಳನ್ನು ಪ್ರಾದೇಶಿಕ ಕೇಂದ್ರಗಳಾಗಿ ಗುರುತಿಸಲಾಗಿದೆ.

????ಸಾರ್ವಜನಿಕರು ಇದರ ಬಗ್ಗೆ ಆತಂಕ ಪಡದೆ, ಕೊರೊನಾದಿಂದ ಗುಣಮುಖರಾದ ನಂತರ ಮುನ್ನೆಚ್ಚರಿಕೆ ವಹಿಸಬೇಕೆಂದು ಕೋರುತ್ತೇನೆ.

4/4 pic.twitter.com/sO2QVLXoJz

— Dr Sudhakar K (@mla_sudhakar) May 17, 2021

ಈ ಸಾಧನೆ ಕುರಿತು ಸಂತಸ ವ್ಯಕ್ತಪಡಿಸಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ಇಡೀ ದೇಶದಲ್ಲಿಯೇ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದೆ. ಗ್ರಾಮೀಣ ಪ್ರದೇಶಗಳಲ್ಲಿರುವ ಜನರು ದೂರದ ನಗರ ಪ್ರದೇಶಗಳಿಗೆ ಸಂಚರಿಸಿ ಆರೋಗ್ಯ ಸೇವೆ ಪಡೆಯುವ ಹೊರೆಯನ್ನು ತಪ್ಪಿಸಿ, ಸುಲಭವಾಗಿ ತಮ್ಮ ಮನೆಯ ಸಮೀಪದಲ್ಲೇ ಆರೋಗ್ಯ ಸೇವೆ ಪಡೆಯಬೇಕೆನ್ನುವುದು ನಮ್ಮ ಸರ್ಕಾರದ ಗುರಿ. ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು ಈ ನಿಟ್ಟಿನಲ್ಲಿ ಬಹಳ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಸಾಧನೆಗಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಈಗ ಆರೋಗ್ಯ ಕ್ಷೇತ್ರ ಕೋವಿಡ್ ನಿವಾರಿಸುವ ಕಡೆ ಹೆಚ್ಚು ಗಮನನೀಡಿದೆ. ಕೋವಿಡ್ ನಿಂದ ಆರ್ಥಿಕ ಸಂಕಷ್ಟವೂ ಉಂಟಾಗಿದೆ. ಇಷ್ಟಿದ್ದರೂ ರಾಜ್ಯದಲ್ಲಿ ಇತರೆ ಆರೋಗ್ಯ ಸೇವೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಯಾವುದೇ ಹಿನ್ನೆಡೆಯಾಗದಂತೆ ಎಚ್ಚರ ವಹಿಸಲಾಗಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

TAGGED:Dr Sudhakar Kpublictvಆಯುಷ್ಮಾನ್ ಭಾರತ್ಉತ್ತಮ ಆರೋಗ್ಯಬೆಂಗಳೂರು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump Strait Of Hormuz
Latest

ಹಾರ್ಮುಜ್‌ ಜಲಸಂಧಿಯಲ್ಲಿ ಟೋಲ್‌ – ಇರಾನ್‌ನೊಂದಿಗೆ ಜಂಟಿ ಉದ್ಯಮ ಬಯಸಿದ ಟ್ರಂಪ್‌

Public TV
By Public TV
18 minutes ago
Gujarat Titans 1
Cricket

ಗೆಲ್ಲುವ ಪಂದ್ಯ ಕೈಚೆಲ್ಲಿದ ಡೆಲ್ಲಿ – ಗುಜರಾತ್‌ಗೆ 1 ರನ್‌ ರೋಚಕ ಜಯ 

Public TV
By Public TV
22 minutes ago
krs party worker arrest
Latest

ಗೃಹಸಚಿವರನ್ನು ಪ್ರಶ್ನೆ ಮಾಡಿದ ಕೆಆರ್‌ಎಸ್ ಪಕ್ಷದ ‌ಮುಖಂಡ ಬಂಧನ

Public TV
By Public TV
1 hour ago
Bhutnal Lake
Bengaluru City

ಪ್ರವಾಸಕ್ಕೆ ಹೋಗಿದ್ದ ಬೆಂಗ್ಳೂರಿನ ಮೂವರು ಕೆರೆಯಲ್ಲಿ ಮುಳುಗಿ ಸಾವು

Public TV
By Public TV
1 hour ago
Strait of Hormuz Ships
Latest

ಒಂದು ಬ್ಯಾರಲ್‌ ತೈಲಕ್ಕೆ 1 ಡಾಲರ್‌ ತೆರಿಗೆ – ಕ್ರಿಪ್ಟೋ ಕರೆನ್ಸಿಯಲ್ಲಿ ಟ್ಯಾಕ್ಸ್‌ ಪಾವತಿಗೆ ಇರಾನ್‌ ಡಿಮ್ಯಾಂಡ್‌

Public TV
By Public TV
2 hours ago
Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?