ಹುಬ್ಬಳ್ಳಿ: ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತನಾಗಿ ಪೊಲೀಸರ ವಶದಲ್ಲಿದ್ದ ಕೊರೊನಾ ಸೊಂಕಿತ ಆರೋಪಿಯೊಬ್ಬ ಪರಾರಿಯಾದ ಘಟನೆ ನಡೆದಿದೆ.
ನಗರದ ಗೋಪನಕೊಪ್ಪದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿದ್ದ ಆರೋಪಿ ನಂದೀಶ ಅಲಿಯಾಸ್ ಬೆಂಕಿ ಪರಾರಿಯಾಗಿದ್ದಾನೆ. ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯ ಆರೋಪಿಗೆ ಕೋವಿಡ್ ಸೊಂಕು ದೃಡಪಟ್ಟ ಪರಿಣಾಮ ಹುಬ್ಬಳ್ಳಿಯ ಗೋಪನಕೊಪ್ಪದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ಇರಿಸಲಾಗಿತ್ತು. ಮೂತ್ರ ವಿಸರ್ಜನೆ ನೆಪದಲ್ಲಿ ಆರೋಪಿ ವಿದ್ಯಾರ್ಥಿ ನಿಲಯದಿಂದ ಪರಾರಿಯಾಗಿದ್ದಾನೆ ಎಂದು ಇದೀಗ ಪೊಲೀಸರೇ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಆರೋಪಿ ನಂದೀಶ ಪರಾರಿಯಾದ ಬಗ್ಗೆ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ರಾಮನಗೌಡ ಬಿರಾದಾರ ಅಶೋನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಅಲ್ಲದೆ ಪೊಲೀಸರಿಂದ ತಪ್ಪಿಸಿಕೊಂಡು ಹೋದ ಆರೋಪಿಯನ್ನು ಹುಡುಕುವ ಜವಾಬ್ದಾರಿ ಇದೀಗ ಅಶೋಕನಗರ ಠಾಣೆ ಪೊಲೀಸ್ ಸಿಬ್ಬಂದಿ ಮೇಲಿದೆ. ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾದ ಬಗ್ಗೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.