Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೋವಿಡ್ 3ನೇ ಅಲೆ ಎದುರಿಸಲು ಸಕಲ ಸಿದ್ಧತೆ: ಶಶಿಕಲಾ ಜೊಲ್ಲೆ

Public TV
Last updated: June 21, 2021 4:08 pm
Public TV
Share
4 Min Read
Shashikala Jolle 5
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಕೋವಿಡ್ 3 ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯಲ್ಲಿ ಸುಮಾರು 50 ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ. ಅವರಿಗೆ ಬಾಲ ಸೇವಾ ಯೋಜನೆಯ ಮೂಲಕ ಪ್ರತಿ ತಿಂಗಳು ಮಗುವಿಗೆ 3,500 ರೂ. ನೀಡುವುದು, ಅಲ್ಲದೆ ಉಚಿತ ಶಿಕ್ಷಣ ನೀಡುವುದು, 21 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

Shashikala Jolle 6 medium

ತಂದೆ ತಾಯಿಗಳನ್ನು ಮಕ್ಕಳನ್ನು ನೋಡಿಕೊಳ್ಳಲು ಸಂಬಂಧಿಗಳು ಶಕ್ತರಿಲ್ಲದಿದ್ದರೆ ಇಲಾಖೆ ಮೂಲಕ ದತ್ತು ಸ್ವೀಕಾರ ಕ್ರಮ ಕೈಗೊಳ್ಳಲಾಗುವುದು. ಯಾರಾದರೂ ದಾನಿಗಳು ಅವರ ಜೀವನಕ್ಕೆ ಉಜ್ವಲ ಭವಿಷ್ಯ ರೂಪಿಸಲು ಮುಂದೆ ಬಂದರೆ ಅಂತ ಮಕ್ಕಳ ಭವಿಷ್ಯ ರೂಪಿಸಲು ಇಲಾಖೆ ಕೊಂಡಿಯಾಗಿ ಕೆಲಸ ಮಾಡಲಿದೆ. ಮೂರನೇ ಅಲೆ ನಿಯಂತ್ರಿಸಲು ಮಹಿಳಾ ಮತ್ತು ಮಕ್ಕಳ ಇಲಾಖೆ, ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ದಿ ಮತ್ತು ಪೊಲೀಸ್ ಇಲಾಖೆ ಮಕ್ಕಳನ್ನು ಗುರುತಿಸುವ ಕೆಲಸವನ್ನು ಮಾಡಲಾಗುತ್ತಿದೆ. ಮಕ್ಕಳಿಗೆ ಸೋಂಕು ದೃಢ ಪಟ್ಟರೆ ಕೊವಿಡ್ ಕೇರ್ ಸೆಂಟರ್ ಗೆ ಮಗುವಿನೊಂದಿಗೆ ತಾಯಿಯೂ ಇರಲು ಅವಕಾಶ ಮಾಡಲಾಗಿದೆ. ಯುವತಿಯರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗುವುದು. ಅಂಗವಿಕಲರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

Shashikala Jolle 4 medium

ಬೆಂಗಳೂರಲ್ಲಿ ಪ್ರತ್ಯೇಕ ಮಕ್ಕಳ ಕೋವಿಡ್ ಆಸ್ಪತ್ರೆಗೆ ಚಿಂತನೆ:
ಬೆಂಗಳೂರು ನಗರ ಜಿಲ್ಲೆಯಲ್ಲಿ ಸಾಕಷ್ಟು ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಅದರ ಹೊರತಾಗಿ ಮಕ್ಕಳಿಗಾಗಿಯೇ ಪ್ರತ್ಯೇಕ ಕೋವಿಡ್ ಆಸ್ಪತ್ರೆ ತೆರೆಯಲು ಸಲಹೆ ಬಂದಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು. ಈಗಾಗಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ 1,419 ಬೆಡ್ ಗಳನ್ನು ಗುರುತಿಸಲಾಗಿದೆ. 141 ವೆಂಟಿಲೇಟರ್ ಉಳ್ಳ ಐಸಿಯು ಬೆಡ್ ಗಳು, 116 ಐಸಿಯು ರಹಿತ ಬೆಡ್ ಗಳು, 430 ಹೆಚ್‍ಡಿಯು ಬೆಡ್ ಗಳು, 712 ಸಾಮಾನ್ಯ ಬೆಡ್ ಗಳನ್ನು ವ್ಯವಸ್ಥೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಬೆಡ್ ಬೇಡಿಕೆ ಇದೆ. ಮಕ್ಕಳಿಗೆ ಪ್ರತ್ಯೇಕವಾದ ಮಾಸ್ಕ್, ವೆಂಟಿಲೇಟರ್, ಬೆಡ್, ಔಷಧ, ಮಾತ್ರೆ ಬೇಕಾಗುತ್ತದೆ ಅದರ ಸಿದ್ದತೆಯೂ ನಡೆಯುತ್ತಿದೆ ಎಂದರು.

Shashikala Jolle 3 medium

ಜಿಲ್ಲೆಯಲ್ಲಿ ಪ್ರತಿ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಮಕ್ಕಳ ತಜ್ಞರನ್ನು ಗುರುತಿಲಾಗಿದೆ. ಕಳೆದ ಒಂದು ವರ್ಷದಲ್ಲಿ ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ 51 ಮಕ್ಕಳು ನಿಧನ ಹೊಂದಿದ್ದಾರೆ. ರಾಜ್ಯದಲ್ಲಿ ಇದುವರೆಗೂ 0-9 ವಯಸ್ಸಿನ 67,687 ಮತ್ತು 09-18 ವಯಸ್ಸಿನ 1,70,565 ಮಕ್ಕಳು ಒಟ್ಟು 0-18 ವಯಸ್ಸಿನ 2,38,252 ಮಕ್ಕಳು ಸೋಂಕಿಗೆ ತುತ್ತಾಗಿವೆ. ಜಿಲ್ಲೆಯಲ್ಲಿ ಒಂದು ವರ್ಷದಲ್ಲಿ 2 ಮಕ್ಕಳು ತಂದೆ ತಾಯಿ ಕಳೆದುಕೊಂಡು ಅನಾಥರಾಗಿದ್ದಾರೆ. ಅವರಿಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಮೂಲಕ ಸಹಾಯಧನ ನೀಡಲಾಗುವುದು ಎಂದು ಸಚಿವರು ಹೇಳಿದರು.

Shashikala Jolle 2 1 medium

ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಮುಂಚೂಣಿ ಕಾರ್ಯಕರ್ತೆಯರಾಗಿ ಕೆಲಸ ಮಾಡುತ್ತಿದ್ದಾರೆ. ಕೊವಿಡ್ ನಿಂದ ನಿಧನ ಹೊಂದಿದರೆ ಅವರಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಬೆಂಗಳೂರು ನಗರದಲ್ಲಿ 3 ಅಗನವಾಡಿ ಕಾರ್ಯಕರ್ತೆಯರು ನಿಧನ ಹೊಂದಿದ್ದಾರೆ. ಅವರಲ್ಲಿ ಇಬ್ಬರಿಗೆ ಪರಿಹಾರ ನೀಡಲಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 2,587 ಅಂಗನವಾಡಿ ಕೇಂದ್ರಗಳಿವೆ. 4,564 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿದ್ದಾರೆ. ಅವರಲ್ಲಿ ಶೇ.90 ರಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೋವಿಡ್ ಮೊದಲ ಲಸಿಕೆ ಪಡೆದಿದ್ದಾರೆ. ಶೇ.49 ರಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. ಅಂಗನವಾಡಿ ಬಂದ್ ಇರುವುದರಿಂದ ಪ್ರತಿ 15 ದಿನಕ್ಕೊಮ್ಮೆ ಮಕ್ಕಳಿಗೆ ಆಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ. ಜೊತೆಗೆ ಅವರ ಆರೋಗ್ಯದ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಶಶಿಕಲಾ ಜೊಲ್ಲೆ

Shashikala Jolle 1 1 medium

ಜಿಲ್ಲೆಯಲ್ಲಿ 22,871 ಗರ್ಭಿಣಿಯರು, 19,131 ಬಾಣಂತಿಯರು, 97 ಕಿಶೋರಿಯರು ಇದ್ದಾರೆ. ಜಿಲ್ಲೆಯಲ್ಲಿ 124 ಮಕ್ಕಳು ತೀವ್ರ ಅಪೌಷ್ಡಿಕತೆಯಿಂದ ಬಳಲುತ್ತಿದ್ದಾರೆ. 9,761 ಮಕ್ಕಳು ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಜಿಲ್ಲೆಯಲ್ಲಿ 39 ಪೋಕ್ಸೊ ಪ್ರಕರಣಗಳು ನಡೆದಿದ್ದು, 37 ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 168 ಬಾಲ್ಯ ವಿವಾಹಗಳಾಗಿದ್ದು, 122 ಬಾಲ್ಯ ವಿವಾಹ ತಡೆಯಲಾಗಿದೆ. 28 ಬಾಲ್ಯ ವಿವಾಹ ಪ್ರಕರಣಗಳಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಈ ಬಾರಿಯ ಲಾಕ್‍ಡೌನ್ ಅವಧಿ ಏಪ್ರಿಲ್ ನಿಂದ ಇಲ್ಲಿಯವರೆಗೆ 3 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದು, 2 ಬಾಲ್ಯ ವಿವಾಹ ತಡೆ ಹಿಡಿಯಲಾಗಿದೆ. ಒಂದು ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಇನ್ನು ಹೊರಗಡೆಯಿಂದ ಬೆಂಗಳೂರಿಗೆ ವಲಸೆ ಬಂದಿರುವ 513 ಮಕ್ಕಳಿಗೆ ಆಹಾರ ವಿತರಣೆ ಮಾಡಲಾಗಿದೆ ಎಂದು ಸಚಿವರು ವಿವರಣೆ ನೀಡಿದರು. ಇದನ್ನೂ ಓದಿ: ಕೋವಿಡ್ 3ನೇ ಅಲೆ ಸಂಭವ – ಮಕ್ಕಳ ಸಂರಕ್ಷಣೆ, ಚಿಕಿತ್ಸೆಗೆ ಸಂಬಂಧಿಸಿದಂತೆ ಸಚಿವೆ ಶಶಿಕಲಾ ಜೊಲ್ಲೆ ಸಭೆ

Shashikala Jolle 4 medium

ಇದೇ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 30 ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲಾಗಿದೆ. ಅದು ಯಶಸ್ವಿಯಾದರೆ ಮುಂದಿನ ತೀರ್ಮಾನ ಸಿಎಂ, ಪಿಎಂ ತೆಗೆದುಕೊಳ್ಳುತ್ತಾರೆ. ಶಾಲೆ ತೆರೆಯುವ ಬಗ್ಗೆ ಶಿಕ್ಷಣ ಸಚಿವರ ಜೊತೆ ಚರ್ಚಿಸಲಾಗುವುದು. ತಜ್ಞರ ವರದಿಯಲ್ಲಿ ಅಧಿಕೃತವಾಗಿ ಏನು ವರದಿ ನೀಡಿದ್ದಾರೆ ಎನ್ನುವುದು ನಮ್ಮ ಇಲಾಖೆಗೆ ಇನ್ನೂ ಮಾಹಿತಿ ಬಂದಿಲ್ಲ. ಸಿಎಂ ನೋಡಿ ನಮ್ಮ ಇಲಾಖೆಗೆ ಕಳುಹಿಸಿಕೊಡುತ್ತಾರೆ. ಇನ್ನು ಮಕ್ಕಳಿಗೆ ಮೊಟ್ಟೆ ಕೊರತೆಯಾಗುತ್ತಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಾರುಕಟ್ಟೆಯಲ್ಲಿ ಮೊಟ್ಟೆ ದರ ಹೆಚ್ಚಳವಾಗಿದ್ದು ಸಮಸ್ಯೆಯಾಗಿತ್ತು. ಅದನ್ನು ಗ್ರಾಮ ಪಂಚಾಯತಿಯಿಂದ ಮೊಟ್ಟೆ ವಿತರಣೆಗೆ ಸೂಚನೆ ನೀಡಲಾಗಿದೆ. ಪಂಚಾಯತಿಯಲ್ಲಿ ಹಣದ ಕೊರತೆಯ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸೋಂಕಿನಿಂದ ಪೋಷಕರ ಕಳೆದುಕೊಂಡ ಮಗುವಿನ ಮನೆಗೆ ಶಶಿಕಲಾ ಜೊಲ್ಲೆ ಭೇಟಿ

TAGGED:Asha workerchildrenCorona VirusCovid 19covid Third WavekarnatakaPublic TVShashikal Jolleಆಶಾ ವರ್ಕರ್ಕರ್ನಾಟಕಕೊರೊನಾ ವೈರಸ್ಕೋವಿಡ್ ಮೂರನೇ ಅಲೆಪಬ್ಲಿಕ್ ಟಿವಿಮಕ್ಕಳುಶಶಿಕಲಾ ಜೊಲ್ಲೆ
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
8 hours ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
8 hours ago
01 10
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-1

Public TV
By Public TV
8 hours ago
02 11
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-2

Public TV
By Public TV
8 hours ago
03 8
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-3

Public TV
By Public TV
8 hours ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?