Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕೋವಿಡ್ 3ನೇ ಅಲೆ ಸಂಭವ – ಮಕ್ಕಳ ಸಂರಕ್ಷಣೆ, ಚಿಕಿತ್ಸೆಗೆ ಸಂಬಂಧಿಸಿದಂತೆ ಸಚಿವೆ ಶಶಿಕಲಾ ಜೊಲ್ಲೆ ಸಭೆ

Public TV
Last updated: June 15, 2021 10:49 pm
Public TV
Share
3 Min Read
shashikala jolle 3 1
SHARE

ತುಮಕೂರು: ಕೋವಿಡ್ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಮತ್ತು ಚಿಕಿತ್ಸೆ ನೀಡಲು ಸಕಲ ರೀತಿಯಲ್ಲಿಯೂ ಸಜ್ಜಾಗುವ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಸಿದರು.

shashikala jolle 1 1 medium

ಕೋವಿಡ್ ಮೂರನೇ ಅಲೆ ಎದುರಾದಲ್ಲಿ ಮಕ್ಕಳಿಗೆ ಸಮರ್ಪಕವಾಗಿ ಚಿಕಿತ್ಸೆ ಒದಗಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಸಜ್ಜಾಗಿರಬೇಕು ಎಂದು ನಿರ್ದೇಶಿಸಿದರು. ಕೋವಿಡ್ ಮೂರನೇ ಅಲೆಗೆ ಹೆಚ್ಚಿನ ಮಕ್ಕಳು ಬಾಧಿತರಾಗುವ ನಿರೀಕ್ಷೆಯಿದ್ದು, ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‍ಗಳ ವ್ಯವಸ್ಥೆ, ಆಮ್ಲಜನಕ, ವೆಂಟಿಲೇಟರ್ ಸೇರಿದಂತೆ ಅಗತ್ಯ ಸಿದ್ಧತೆ ಕೈಗೊಳ್ಳುವುದರೊಂದಿಗೆ ಶಿಶುತಜ್ಞ ವೈದ್ಯರನ್ನು ನೇಮಕ ಮಾಡಿಕೊಂಡು ವೈದ್ಯಕೀಯ ಸೌಲಭ್ಯ ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

Shashikala Jolle 4 medium

ಅನಾಥ ಮಕ್ಕಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ: ಜಿಲ್ಲೆಯಲ್ಲಿ ಕೋವಿಡ್‍ನಿಂದ ಪೋಷಕಕರಿಬ್ಬರನ್ನು ಕಳೆದುಕೊಂಡು ಅನಾಥವಾಗುವ ಅಥವಾ ಒಬ್ಬರು ಪೋಷಕರನ್ನು ಕಳೆದುಕೊಂಡು ಏಕ ಪೋಷಕತ್ವದಲ್ಲಿರುವ ಮಕ್ಕಳಿಗೆ ಪಾಲನಾ ಸಂಸ್ಥೆಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಅಂತಹ ಮಕ್ಕಳಿಗಾಗಿ ಸರ್ಕಾರದಿಂದ ಜಾರಿಗೊಳಿಸಿರುವ ಬಾಲ ಸೇವಾ ಯೋಜನೆ, ಮಾಸಾಶನ, ಉಚಿತ ಶೈಕ್ಷಣಿಕ ಸೌಲಭ್ಯ ಸೇರಿದಂತೆ ಉನ್ನತ ಶೈಕ್ಷಣಿಕ ದೃಷ್ಟಿಯಿಂದ ಲ್ಯಾಪ್‍ಟಾಪ್ ವಿತರಣೆ ಹಾಗೂ ಇತರೆ ಎಲ್ಲಾ ಸೌಲಭ್ಯಗಳನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಯಾವುದೇ ಮಕ್ಕಳು ಅನ್ಯಾಯಕ್ಕೆ ಒಳಗಾಗಬಾರದು ಎಂದು ಸೂಚಿಸಿದರು.

shashikala jolle 2 1 medium

ಮಕ್ಕಳ ಭವಿಷ್ಯ ರೂಪಿಸಲು ಕೊಂಡಿ: ಅನಾಥರಾಗುವ ಮಕ್ಕಳ ಭವಿಷ್ಯ ರೂಪಿಸಲು ದತ್ತು ನಿಯಮ, ಕಾನೂನು ಅನುಸಾರ ಯಾರಾದರೂ ದಾನಿಗಳು, ಸಂಘ-ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು ಅವರ ಶಿಕ್ಷಣ ಮತ್ತು ಉದ್ಯೋಗಕ್ಕೆ ಅವಕಾಶ ಕಲ್ಪಿಸಿ ಭವಿಷ್ಯ ರೂಪಿಸಲು ಮುಂದೆ ಬಂದಲ್ಲಿ ಇಲಾಖೆಯು ಕೊಂಡಿಯಾಗಿ ಕಾರ್ಯನಿರ್ವಹಿಸಿ ದತ್ತು ನಿಯಮ ಪ್ರಕಾರ ಅವರಿಗೆ ಸರ್ಕಾರದಿಂದ ಸಹಕಾರ ಕಲ್ಪಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್‍ಗೆ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ ಎಂಟ್ರಿ

ಹೆಚ್ಚು ಅರಿವು ಮೂಡಿಸಿ: ಮೊದಲನೇ ಅಲೆ ಹಾಗೂ ಎರಡನೇ ಅಲೆಯಲ್ಲಿಯೂ ಮಕ್ಕಳು ಕೋವಿಡ್ ಬಾಧಿತರಾಗಿದ್ದು, ಮೂರನೆ ಅಲೆಯ ಕೋವಿಡ್ ನಿಂದ ಮಕ್ಕಳನ್ನು ಮುಕ್ತಗೊಳಿಸಲು ಪೋಷಕರಿಗೆ ಹೆಚ್ಚು ಅರಿವು ಮೂಡಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದರು.

shashikala jolle medium

ಆತಂಕ ದೂರ ಮಾಡಿ: ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಬೆಂಗಳೂರಿಗೆ ಸಮೀಪವಿರುವ ತುಮಕೂರು ಜಿಲ್ಲೆಯು ಎರಡನೇ ಅಲೆಯಲ್ಲಿ ಅತಂತ್ರ ಸ್ಥಿತಿಗೆ ತಲುಪಿತ್ತು. ಆದರೆ, ಜಿಲ್ಲಾಡಳಿತದ ಕ್ರಮದಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದಿದ್ದು ಆತಂಕ ದೂರವಾಗಿದೆ. ಅಂತೆಯೇ ಮುಂದಿನ ದಿನಗಳಲ್ಲಿ ಮಕ್ಕಳನ್ನು ಬಾಧಿಸುವ ನಿರೀಕ್ಷೆಯಲ್ಲಿರುವ ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ಪೋಷಕರಿಗೆ ಹೆಚ್ಚು ಅರಿವು ಮೂಡಿಸಬೇಕು. ಮನೆಯಲ್ಲಿಯೇ ಚಿಕಿತ್ಸೆ ನೀಡುವುದಕ್ಕಿಂತ ಕೋವಿಡ್ ಕೇರ್ ಸೆಂಟರ್ ನಲ್ಲಿ ಆರೈಕೆಗೆ ಹೆಚ್ಚು ಆದ್ಯತೆ ಕೊಡಬೇಕು. ಜಿಲ್ಲಾವಾರು ಬದಲು ಜನಸಂಖ್ಯೆಗೆ ಅನುಗುಣವಾಗಿ ಲಸಿಕೆಯನ್ನು ಸರ್ಕಾರದಿಂದ ಪೂರೈಕೆ ಮಾಡಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ವೈದ್ಯರಂತೆ ಕರ್ತವ್ಯ ನಿರ್ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

FotoJet 1 32

ಮಕ್ಕಳ ಸಂರಕ್ಷಣೆ ಕ್ರಮ: ಸಭೆಯಲ್ಲಿದ್ದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಂಭಾವ್ಯ ಮೂರನೇ ಅಲೆಯಿಂದ ಮಕ್ಕಳ ಸಂರಕ್ಷಣೆಗಾಗಿ ಎಲ್ಲಾ ರೀತಿಯಲ್ಲಿಯೂ ಕ್ರಮ ವಹಿಸಲಾಗಿದೆ. ಚಿಕಿತ್ಸಾ ವ್ಯವಸ್ಥೆಯನ್ನೂ ಸಹ ಎಲ್ಲ ರೀತಿಯಲ್ಲಿಯೂ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

Shashikala Jolle A

ಹತ್ತು ಸಾವಿರ ಮಕ್ಕಳಿಗೆ ಕೋವಿಡ್: ಮೊದಲನೇ ಅಲೆಯ 2020-21ನೇ ಸಾಲಿನಲ್ಲಿ 2,382 ಮಕ್ಕಳಿಗೆ, ಅದಾದ ಬಳಿಕ 2021ರ ಏಪ್ರಿಲ್ ನವರೆಗೆ 2,386 ಹಾಗೂ 2021ರ ಮೇ ವರೆಗೆ 5,273 ಸೇರಿ ಒಟ್ಟು ಎರಡನೇ ಅಲೆಯಲ್ಲಿ 7,659 ಹಾಗೂ ಕೋವಿಡ್ ಪ್ರಾರಂಭವಾದಾಗಿನಿಂದ ಈವರೆಗೆ ಒಟ್ಟು 10,041 ಮಕ್ಕಳಿಗೆ ಕೋವಿಡ್ ದೃಢವಾಗಿದೆ. ಆದರೆ, ಯಾವುದೇ ಮಗು ಸಾವನ್ನಪ್ಪಿಲ್ಲ. ಬಹುತೇಕ ಎಲ್ಲಾ ಮಕ್ಕಳು ಚೇತರಿಸಿಕೊಂಡಿದ್ದಾರೆ. ಹಾಗೇ ಯಾವುದೇ ಮಗುವಿನಲ್ಲೂ ಬ್ಲಾಕ್ ಫಂಗಸ್ ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗೇಂದ್ರಪ್ಪ ಮಾಹಿತಿ ಒದಗಿಸಿದರು. ಇದನ್ನೂ ಓದಿ:  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಶಶಿಕಲಾ ಜೊಲ್ಲೆ

TAGGED:childrenmeetingPublic TVShashikala Jolletumkuruಕೋವಿಡ್ 19ತುಮಕೂರುಪಬ್ಲಿಕ್ ಟಿವಿ covid 19ಮಕ್ಕಳುಶಶಿಕಲಾ ಜೊಲ್ಲೆಸಭೆ
Share This Article
Facebook Whatsapp Whatsapp Telegram

Cinema Updates

rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

01 12
Big Bulletin

ಬಿಗ್‌ ಬುಲೆಟಿನ್‌ 27 July 2025 ಭಾಗ-1

Public TV
By Public TV
7 hours ago
02 14
Big Bulletin

ಬಿಗ್‌ ಬುಲೆಟಿನ್‌ 27 July 2025 ಭಾಗ-2

Public TV
By Public TV
7 hours ago
IND vs ENG 4th test Ben Stokes offers a draw India denies and continues to bat
Cricket

ಬೆನ್‌ ಸ್ಟೋಕ್ಸ್‌ ಡ್ರಾ ಆಫರ್‌ ರಿಜೆಕ್ಟ್‌ – ಬ್ಯಾಟಿಂಗ್‌ ಮುಂದುವರಿಸಿ ಚಮಕ್‌ ಕೊಟ್ಟ ಜಡೇಜಾ, ಸುಂದರ್‌

Public TV
By Public TV
8 hours ago
Mallikarjun Kharge 3
Districts

ಕಷ್ಟ ಪಟ್ಟಿದ್ದು ನಾನು, ಕೃಷ್ಣ ಸಿಎಂ ಆದ್ರು – ಮುಖ್ಯಮಂತ್ರಿ ಸ್ಥಾನ ಸಿಗದಿದ್ದಕ್ಕೆ ಖರ್ಗೆ ಬಹಿರಂಗ ಬೇಸರ

Public TV
By Public TV
8 hours ago
Ravindra Jadeja Washington Sundar
Cricket

ಜಡೇಜಾ, ಸುಂದರ್‌ ಅಜೇಯ ಶತಕ – ಡ್ರಾದಲ್ಲಿ ಟೆಸ್ಟ್‌ ಅಂತ್ಯ

Public TV
By Public TV
8 hours ago
Chikkamagaluru Elephant Attack
Chikkamagaluru

ಚಿಕ್ಕಮಗಳೂರು | ಆನೆ ದಾಳಿಗೆ ವೃದ್ಧ ಬಲಿ – 4 ದಿನಗಳ ಅಂತರದಲ್ಲಿ ಇಬ್ಬರು ಸಾವು

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?