ಕ್ಯಾಬಿನೆಟ್ ಸಭೆ ಬಳಿಕ ಸಿಎಂ ದೆಹಲಿ ಪ್ರವಾಸ

Public TV
1 Min Read
yeddyurappa1 1

ಬೆಂಗಳೂರು: ನಾಳೆಯ ಕ್ಯಾಬಿನೆಟ್ ಸಭೆ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿ, ಸಂಪುಟ ಸರ್ಜರಿಯ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

bsy 3

ಸಿಎಂ ಪ್ರವಾಸ ಹಿನ್ನೆಲೆ ಮಧ್ಯಾಹ್ನ 12.30ಕ್ಕೆ ನಿಗದಿಯಾಗಿದ್ದ ಸಂಪುಟ ಸಭೆ 10.30ಕ್ಕೆ ಆರಂಭವಾಗಲಿದೆ. ನಾಳೆಯ ಕ್ಯಾಬಿನೆಟ್ ಸಭೆಗೆ ಎಲ್ಲ ಸಚಿವರು ಕಡ್ಡಾಯವಾಗಿ ಹಾಜರಿರಬೇಕೆಂದು ಸಿಎಂ ಸೂಚಿಸುವ ಮೂಲಕ ಕೆಲವರಿಗೆ ಇದೇ ಕಡೆಯ ಸಂಪುಟ ಸಭೆ ಆಗುವ ಬಗ್ಗೆ ಹೇಳುವ ಸಾಧ್ಯತೆಗಳಿವೆ.

BSY 2

ಬಿಹಾರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರವೇ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ನೀಡಲಾಗುವುದು ಎಂಬ ಸಂದೇಶವನ್ನು ಹೈಕಮಾಂಡ್ ರಾಜ್ಯ ನಾಯಕರಿಗೆ ಸಂದೇಶ ರವಾನಿಸಿತ್ತು. ಇದೀಗ ಸರ್ಕಾರ ರಚನೆ ಬೆನ್ನಲ್ಲೇ ಸಿಎಂ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

BSY

ಸಂಪುಟ ಸರ್ಜರಿಗೆ ಹೈಕಮಾಂಡ್ ಒಪ್ಪಿಗೆ ನೀಡಿದ್ರೆ ಶುಕ್ರವಾರವೇ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿವೆ. ಹಾಲಿ ಮೂರ್ನಾಲ್ಕು ಸಚಿವರಿಗೆ ಕೊಕ್ ನೀಡಲಾಗುತ್ತಿದೆ ಎನ್ನಲಾಗುತ್ತಿದ್ದು, ಮಂತ್ರಿಗಳ ಹೃದಯ ಬಡಿತ ಹೆಚ್ಚಾದಂತೆ ಆಗಿದೆ.

Share This Article
Leave a Comment

Leave a Reply

Your email address will not be published. Required fields are marked *