ಚಂಡೀಗಢ: ಪಂಜಾಬ್ ರಾಜ್ಯದ ಕ್ರಿಕೆಟರ್ ಮತ್ತು ಐಪಿಎಲ್ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕಾಗಿ ಆಡುತ್ತಿರುವ ಬ್ಯಾಟ್ಸ್ ಮ್ಯಾನ್ ಮನ್ದೀಪ್ ಸಿಂಗ್ ಅವರ ತಂದೆ ಸರ್ದಾರ್ ಹರ್ದೇವ್ ಸಿಂಗ್ ಅವರು ಇಂದು ವಿಧಿವಶರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಸರ್ದಾರ್ ಹರ್ದೇವ್ ಸಿಂಗ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಇತ್ತೀಚೆಗೆ ಅವರ ಆರೋಗ್ಯದ ಸ್ಥಿತಿ ತೀರ ಗಂಭೀರವಾದ ಕಾರಣ ಅವರನ್ನು ಚಂಡೀಗಢದ ಫೋರ್ಟಿಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಹರ್ದೇವ್ ಸಿಂಗ್ ಅವರು ನಿವೃತ್ತ ಜಿಲ್ಲಾ ಕ್ರೀಡಾ ಅಧಿಕಾರಿಯಾಗಿದ್ದರು. ಮಗ ಮನ್ದೀಪ್ ಸಿಂಗ್ ಅವರು ಪ್ರಸ್ತುತ ಐಪಿಎಲ್ ಆಡಲು ಯುಎಇಗೆ ಹೋಗಿದ್ದಾರೆ. ಅವರು ಈ ಬಾರಿಯ ಐಪಿಎಲ್ನಲ್ಲಿ ಕೆಎಲ್ ರಾಹುಲ್ ನೇತೃತ್ವದ ತನ್ನ ರಾಜ್ಯ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ಗಾಗಿ ಆಡುತ್ತಿದ್ದಾರೆ. ಸದ್ಯ ಅವರು ಈ ಆವೃತ್ತಿಯಲ್ಲಿ ಕೇವಲ ಒಂದು ಬಾರಿ ಮಾತ್ರ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಂಡಿದ್ದಾರೆ.