ಕ್ರಿಮಿನಾಶಕ ಸೇವಿಸಿ ಚಿರನಿದ್ರೆಗೆ ಜಾರಿದ ಕಾನ್‍ಸ್ಟೇಬಲ್

Public TV
1 Min Read
Ballary crime

ಬಳ್ಳಾರಿ: ಪೊಲೀಸ್ ಒಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಸವನಗೌಡ (35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಳ್ಳಾರಿಯ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಕಾನ್‍ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೂಲತಃ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚಿಕ್ಕ ಅಂತಾಪುರ ಗ್ರಾಮದ ನಿವಾಸಿಯಾದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Police Jeep 1 2 medium

ಊರಿಗೆ ಹೋಗಿದ್ದ ಬಸವನಗೌಡ ರಾತ್ರಿ ಮಲಗುವ ವೇಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಬಳ್ಳಾರಿ ವಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಪಿಸಿ ಬಸವನಗೌಡರ ಮೃತದೇಹವಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದ್ದು, ನಿಖರವಾದ ಕಾರಣ ತಿಳಿದುಬಂದಿಲ್ಲ.

Share This Article
Leave a Comment

Leave a Reply

Your email address will not be published. Required fields are marked *