ಕ್ಲಿನಿಕ್ ಲ್ಯಾಬ್‍ಗೆ ಕರ್ಕೊಂಡು ಹೋದ – ಡೆಂಟಿಸ್ಟ್‌ಗೆ ಚಾಕು ಇರಿದ ಲಿವ್ ಇನ್ ಪಾರ್ಟ್ನರ್

Public TV
2 Min Read
temtist

– 2 ವರ್ಷಗಳಿಂದ ಲಿವ್ ಇನ್ ರಿಲೇಷನ್‍ಶಿಪ್‍ನಲ್ಲಿದ್ರು

ತಿರುವನಂತಪುರಂ: ಲಿವ್ ಇನ್ ಪಾರ್ಟ್ನರ್ ನೊಬ್ಬ ದಂತವೈದ್ಯೆಗೆ ಚಾಕುವಿನಿಂದ ಇರಿದಿದ್ದು, ಪರಿಣಾಮ ಚಿಕಿತ್ಸೆ ಫಲಿಕಾರಿಯಾಗದೆ ಡೆಂಟಿಸ್ಟ್ ಮೃತಪಟ್ಟಿರುವ ಘಟನೆ ಕೇಳರದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ.

ಡಾ.ಸೋನಾ (30) ಮೃತ ಡೆಂಟಿಸ್ಟ್. ಸೆಪ್ಟೆಂಬರ್ 28 ರಂದು ಆರೋಪಿ ಮಹೇಶ್ (37) ಚಾಕುವಿನಿಂದ ಇರಿದಿದ್ದನು. ತೀವ್ರ ಗಾಯಗೊಂಡಿದ್ದ ಸೋನಾರನ್ನು ತ್ರಿಶೂರ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಿಧನರಾಗಿದ್ದಾರೆ. ಚಾಕುವಿನಿಂದ ಇರಿದ ನಂತರ ಆರೋಪಿ ಮಹೇಶ್ ಸ್ಥಳದಿಂದ ಪರಾರಿಯಾಗಿದ್ದಾನೆ.

love hand wedding valentine day together holding hand 38810 3580 medium

ಮೃತ ಸೋನಾ ಕಳೆದ ಒಂದೂವರೆ ವರ್ಷಗಳಿಂದ ತ್ರಿಶೂರ್‌ನ ಒಲ್ಲೂರು ಬಳಿಯ ಕುಟ್ಟ ನೆಲ್ಲೂರ್ ನಲ್ಲಿ ಡೆಂಟಲ್ ಕ್ಲಿನಿಕ್ ನಡೆಸುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಮಹೇಶ್ ಜೊತೆ ಲಿವ್ ಇನ್ ರಿಲೇಷನ್‍ಶಿಪ್‍ನಲ್ಲಿದ್ದರು. ಆರೋಪಿ ಮಹೇಶ್ ಕಟ್ಟಣ ನಿರ್ಮಾಣ ಕೆಲಸ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

MONEY 3

ಇತ್ತೀಚೆಗೆ ಇವರ ಮಧ್ಯೆ ಹಣಕಾಸಿನ ವಿಚಾರಕ್ಕೆ ಜಗಳ ನಡೆದಿತ್ತು. ಈ ವೇಳೆ ಮಹೇಶ್ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಸೋನಾ ಒಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಹೇಶ್ ನನ್ನ ಆದಾಯವನ್ನು ಕ್ಲಿನಿಕ್‍ನಿಂದ ಅಕ್ರಮವಾಗಿ ತೆಗೆದುಕೊಂಡಿದ್ದಾನೆ ಎಂದು ಸೋನಾ ದೂರಿನಲ್ಲಿ ಆರೋಪಿಸಿದ್ದರು ಎಂದು ತಿಳಿದುಬಂದಿದೆ.

love 1 1

ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ ಸೆಪ್ಟೆಂಬರ್ 28 ರಂದು ಮೃತ ಸೋನಾ ಮತ್ತು ಮಹೇಶ್ ಇಬ್ಬರು ಕ್ಲಿನಿಕ್‍ನಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಸೋನಾ ತಂದೆ ಜೋಸ್ ಕೂಡ ಇದ್ದರು. ಆದರೆ ಮಾತುಕತೆಯ ಸಮಯದಲ್ಲೇ ಆರೋಪಿ ಮಹೇಶ್ ಸೋನಾರನ್ನು ಕ್ಲಿನಿಕ್‍ನ ಲ್ಯಾಬ್‍ಗೆ ಒತ್ತಾಯಿಸಿ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಏಕಾಏಕಿ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

love 4

ಹಲ್ಲೆಯಿಂದ ಸೋನಾರ ಹೊಟ್ಟೆಗೆ ತೀವ್ರ ಗಾಯಗಳಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋನಾ ಭಾನುವಾರ ಸಾವನ್ನಪ್ಪಿದ್ದಾರೆ. ಆರೋಪಿ ಮಹೇಶ್ ಹಲ್ಲೆ ಮಾಡಿದ ತಾನು ತಪ್ಪೊಪ್ಪಿಕೊಳ್ಳಲು ಪೊಲೀಸ್ ಠಾಣೆಗೆ ಹೋಗುವುದಾಗಿ ಹತ್ತಿರದ ಅಂಗಡಿ ಮಾಲೀಕರಿಗೆ ತಿಳಿಸಿ ನಂತರ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Police Jeep 1 1 medium

ಸೋನಾಗೆ ಈಗಾಗಲೇ ಮದುವೆಯಾಗಿದ್ದು, ತನ್ನ ಪತಿಯಿಂದ ಬೇರೆಯಾಗಿದ್ದರು. ಒಂದು ಮಗು ಕೂಡ ಇತ್ತು. ಆರೋಪಿ ಮಹೇಶ್ ಇನ್ನೂ ಮದುವೆಯಾಗಿರಲಿಲ್ಲ. ಸದ್ಯಕ್ಕೆ ಪೊಲೀಸರು ಸೋನಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೇರೆ ಆಸ್ಪತ್ರೆಗೆ ರವಾನಿಸಿದ್ದು, ಆರೋಪಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *