ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ- ಕತ್ತು, ಹೊಟ್ಟೆಗೆ ಚಾಕು ಇರಿದು ನಾಲ್ವರ ಕೊಲೆ

Public TV
1 Min Read
gundlupet police station

ಚಾಮರಾಜನಗರ: ವೈಯಕ್ತಿಕ ದ್ವೇಷಕ್ಕೆ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಜಾಕೀರ್ ಹುಸೇನ್ ನಗರದಲ್ಲಿ ಕೊಲೆ ನಡೆದಿದೆ.

ಜಾಕೀರ್ ಹುಸೇನ್ ನಿವಾಸಿಗಳಾದ ಜಕಾವುಲ್ಲಾ, ಇದ್ರೀಶ್, ಪೈಜಲ್ ಹಾಗೂ ಮತ್ತೋರ್ವ ಕೊಲೆಯಾದ ದುರ್ದೈವಿಗಳು. ಮೃತರು ಪಟ್ಟಣದ ಪುರಸಭೆ ಸದಸ್ಯ ನೂರುಲ್ಲಾ ಗುಂಪಿನವರಾಗಿದ್ದರು. ಎರಡು ಕುಟುಂಬಗಳ ನಡುವಿನ ಕಲಹದಿಂದಾಗಿ ಕೊಲೆ ನಡೆದಿದೆ ಎನ್ನಲಾಗಿದೆ.

Police Jeep 1

ರಂಜಾನ್ ಮುಗಿದ ಬಳಿಕ ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ ನಡೆದ ಗಲಾಟೆಯಲ್ಲಿ ಅಸ್ಲಾಂ, ಜಮೀರ್ ಸಂಗಡಿಗರು ಜಕಾವುಲ್ಲಾ, ಇದ್ರೀಶ್, ಪೈಜಲ್ ಮೇಲೆ ದಾಳಿ ಮಾಡಿ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲಿ ಮೃತಪಟ್ಟರೆ, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೈದ ದುಷ್ಕರ್ಮಿಗಳು ತಲೆ ಮರೆಸಿಕೊಂಡಿದ್ದಾರೆ. ಕೊಲೆ ನಡೆದಿದ್ದು ಯಾಕೆ? ಯಾರೆಲ್ಲ ಭಾಗಿಯಾಗಿದ್ದರು ಎನ್ನುವ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ರಾತ್ರಿ ಸ್ಥಳದಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು.

Police jeep

ಮೂಲಗಳ ಪ್ರಕಾರ ಪಟ್ಟಣದ ಪುರಸಭೆ ಸದಸ್ಯ ನೂರುಲ್ಲಾ ಗುಂಪಿನ ಮತ್ತು ಮತ್ತೊಂದು ಗುಂಪಿನ ನಡುವೆ ಹಿಂದೆಯೂ ಘರ್ಷಣೆ ನಡೆದಿತ್ತು. ಆಗ ಕೆಲ ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಎರಡು ಗುಂಪುಗಳ ನಡುವೆ ವೈಷಮ್ಯ ಜೋರಾಗಿಯೇ ವಿತ್ತು. ಇದೇ ವಿಚಾರವಾಗಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡು ಮತ್ತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *