Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರದಿಂದ ಪ್ಯಾಕೇಜ್ ಘೋಷಣೆ- ಸಿಎಂಗೆ ಬಸವರಾಜ ಹೊರಟ್ಟಿ ಅಭಿನಂದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರದಿಂದ ಪ್ಯಾಕೇಜ್ ಘೋಷಣೆ- ಸಿಎಂಗೆ ಬಸವರಾಜ ಹೊರಟ್ಟಿ ಅಭಿನಂದನೆ

Corona

ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ಸರ್ಕಾರದಿಂದ ಪ್ಯಾಕೇಜ್ ಘೋಷಣೆ- ಸಿಎಂಗೆ ಬಸವರಾಜ ಹೊರಟ್ಟಿ ಅಭಿನಂದನೆ

Public TV
Last updated: June 5, 2021 3:13 pm
Public TV
Share
2 Min Read
CM AND BASAVARJ HORATTI
SHARE

ಹುಬ್ಬಳ್ಳಿ: ಜಾಗತಿಕ ಮಹಾಮಾರಿ ಕೋವಿಡ್‍ದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಪ್ಯಾಕೇಜ್ ಒದಗಿಸುವಂತೆ ಕಳೆದ ವರ್ಷದಿಂದ ಹಲವಾರು ಬಾರಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸುತ್ತಿದ್ದು ತಮ್ಮ ಮನವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಸಂತಸ ವ್ಯಕ್ತಪಡಿಸಿದರು.

vlcsnap 2018 12 27 14h28m10s748

ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ತಮ್ಮನ್ನು ಭೇಟಿ ಮಾಡಿದ ಬಿ.ಎಸ್.ಯಡಿಯೂರಪ್ಪನವರಿಗೆ ಅಭಿನಂದನೆ ಸಲ್ಲಿಸಿದ ಬಸವರಾಜ ಹೊರಟ್ಟಿಯವರು ಕಳೆದ ಬಾರಿಯ ಕೋವಿಡ್ ಸಂದರ್ಭದಿಂದ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ವಿಶೇಷ ಪ್ಯಾಕೇಜ್ ನೀಡಿ ಅವರಿಗೆ ಸರ್ಕಾರ ಸೂಕ್ತ ಸಹಾಯ ಕಲ್ಪಿಸುವಂತೆ ಹಲವು ಬಾರಿ ಒತ್ತಾಯಿಸಿದ್ದನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದರು.

YEDIYURAPPA PRESSMIT
ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪನವರು, ಮಾನ್ಯ ಸಭಾಪತಿಗಳು ತಮಗೆ ಸಲಹೆ ರೂಪದಲ್ಲಿ ನೀಡಲಾದ ಹಲವಾರು ಬೇಡಿಕೆಗಳನ್ನು ಈಡೇರಿಸಲಾಗಿದೆ. ಸಭಾಪತಿಗಳು ಸೂಚಿಸಿದಂತೆ ಎಲ್ಲಾ ಶಿಕ್ಷಕರನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಲಾಗಿದೆ ಹಾಗೂ ಅವರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ತೀವ್ರ ಸಂಕಷ್ಟದಲ್ಲಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರುಗಳಿಗೆ ಸಹಾಯಧನ ನೀಡಬೇಕೆಂದು ತಾವೇ ಮೊದಲ ಬಾರಿಗೆ ನನ್ನನ್ನು ಹಲವಾರು ಬಾರಿ ಖುದ್ದಾಗಿ ಹಾಗೂ ಪತ್ರದ ಮೂಲಕ ಒತ್ತಾಯಿಸಿದ್ದು ತಮ್ಮ ಒತ್ತಾಸೆಯಂತೆ ಕೂಡಲೇ ಸ್ಪಂದಿಸಿ ರೂ. 5 ಸಾವಿರ ಪರಿಹಾರಧನ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ:ಶಿಕ್ಷಣ ಸಚಿವರಿಗೆ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ : ಪದವೀಧರ ಶಿಕ್ಷಕರಿಗೆ ಮುಂಬಡ್ತಿ ಕೊಡಲು ಒತ್ತಾಯ

dcm ashwathnarayan

ಸಭಾಪತಿಗಳು ಈಗಾಗಲೇ ಸೂಚಿಸಿರುವಂತೆ ಎಲ್ಲ ಶಿಕ್ಷಕರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೇ ಸಭಾಪತಿಗಳ ಸಲಹೆಯಂತೆ ಬ್ಲ್ಯಾಕ್ ಫಂಗಸ್‍ದಿಂದ ಬಳಲುತ್ತಿರುವ ರೋಗಿಗಳಿಗೆ ಸರ್ಕರದಿಂದಲೇ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಮುಂಬರುವ ಕೋವಿಡ್ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳಿಗಾಗುವ ತೊಂದರೆಗಳ ಕುರಿತು ತಜ್ಞರ ಸಮಿತಿ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ಯಾಕೇಜ್ ಘೋಷಿಸಬೇಕು ಹಾಗೂ ಕೋವಿಡ್ ಕರ್ತವ್ಯದ ಸಂದರ್ಭದಲ್ಲಿ ಮರಣ ಹೊಂದಿದ ಶಿಕ್ಷಕರ ಕುಟುಂಬಕ್ಕೆ ಸರ್ಕಾರಿ ನೌಕರಿ ನೀಡಬೇಕೆಂದು ಹಾಗೂ ಸೂಕ್ತ ಪರಿಹಾರ ಘೋಷಿಸುವಂತೆ ಸಲಹೆ ಮಾಡಿದರು. ಅವುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿಗಳು ಭರವಸೆ ನೀಡಿದರು.

SURESHKUMAR 1

ಈಗ ಘೋಷಿಸಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ನೀಡಿರುವ ಪ್ಯಾಕೇಜ್‍ನ್ನು ಸ್ವಾಗತಿಸಲಾಗುವೆಂದು ಮುಖ್ಯಮಂತ್ರಿಗಳಿಗೆ ತಿಳಿಸಿದ ಬಸವರಾಜ ಹೊರಟ್ಟಿ ಇಷ್ಟೇ ಪ್ಯಾಕೇಜ್ ಸಾಲದು ಇನ್ನೂ ಹೆಚ್ಚಿನ ಸಹಾಯಧನ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಿದರು. ರಾಜ್ಯದಲ್ಲಿರುವ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರುಗಳಿಗೆ ಅಗತ್ಯ ಪ್ಯಾಕೇಜ್ ಹಾಗೂ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುವಂತೆ ಮುಖ್ಯಮಂತ್ರಿಗಳೂ ಸೇರಿದಂತೆ ಉಪಮುಖ್ಯಗಳಾದ ಡಾ. ಅಶ್ವತ್ಥನಾಯಾರಾಣ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರಿಗೂ ಹಲವು ಬಾರಿ ಪತ್ರ ಬರೆದು ಈ ಹಿಂದೆ ಕೋರಿದ್ದಾಗಿ ಮುಖ್ಯಮಂತ್ರಿಗಳಿಗೆ ಬಸವರಾಜ ಹೊರಟ್ಟಿ ಅವರು ತಿಳಿಸಿದರು.

TAGGED:basavaraj horattiCoronaCovid 19PackagePublic TVteachersYediyurappaಕೊರೊನಾಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬಸವರಾಜ ಹೊರಟ್ಟಿಬ್ಯ್ಲಾಕ್ ಫಂಗಸ್ಯಡಿಯೂರಪ್ಪಶಿಕ್ಷಕರು
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

US Iran War 500 million dollar superyacht Nord linked to Putin aide Alexey Mordashov sails through Hormuz amid blockade 1
Latest

ದಿಗ್ಬಂಧನದ ಮಧ್ಯೆ ಹಾರ್ಮೂಜ್‌ ದಾಟಿತು 4,700 ಕೋಟಿ ರೂ. ಮೌಲ್ಯದ ಸೂಪರ್‌ಯಾಚ್‌!

Public TV
By Public TV
1 minute ago
Turmeric Powder
Bengaluru City

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ – ಸರ್ಕಾರದಿಂದಲೇ ಅಧಿಕೃತ ಟೆಸ್ಟ್‌ಗೆ ಆದೇಶ

Public TV
By Public TV
5 minutes ago
daily horoscope dina bhavishya
Astrology

ದಿನ ಭವಿಷ್ಯ 28-04-2026

Public TV
By Public TV
20 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 28-04-2026

Public TV
By Public TV
21 minutes ago
adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
8 hours ago
01 21
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?