Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಸರ್ಕಾರಕ್ಕೆ ಬಿಲ್- ರಾಜ್ಯದ ಶಾಸಕರ ಕೊರೊನಾ ‘ಬಿಲ್’ವಿದ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಸರ್ಕಾರಕ್ಕೆ ಬಿಲ್- ರಾಜ್ಯದ ಶಾಸಕರ ಕೊರೊನಾ ‘ಬಿಲ್’ವಿದ್ಯೆ

Bengaluru City

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ಸರ್ಕಾರಕ್ಕೆ ಬಿಲ್- ರಾಜ್ಯದ ಶಾಸಕರ ಕೊರೊನಾ ‘ಬಿಲ್’ವಿದ್ಯೆ

Public TV
Last updated: October 10, 2020 4:59 pm
Public TV
Share
4 Min Read
CORONA VIRUS MLA
SHARE

ಬೆಂಗಳೂರು: ಕೊರೊನಾ ಸೋಂಕಿನ ನಿಯಂತ್ರಣಕ್ಕೆ ತರಲು ಸರ್ಕಾರ ಹೆಣಗಾಡುತ್ತಿದೆ. ಇದರ ನಡುವೆಯೇ ಆರ್ಥಿಕ ಸಂಕಷ್ಟ ಸುಧಾರಣೆ ಮಾಡಲು ಸಾಲವನ್ನು ಪಡೆಯಲು ಮುಂದಾಗಿದೆ. ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ಕೋವಿಡ್ ಆರ್ಥಿಕ ಹೊರೆ ಎದುರಾಗಿದ್ದು, ಕೋವಿಡ್ ಸೋಂಕಿಗೆ ತುತ್ತಾಗಿ ಗುಣಮುಖರಾಗಿರುವ ಜನಪ್ರತಿನಿಧಿಗಳ ಮತ್ತು ಕುಟುಂಬಸ್ಥರ ಆಸ್ಪತ್ರೆ ಬಿಲ್ ವೆಚ್ಚದ ಹೊರೆಯೂ ಸರ್ಕಾರ ಮೇಲೆ ಬಿದ್ದಿದೆ.

covid 19

ಕೊರೊನಾ ಸೋಂಕಿಗೆ ತುತ್ತಾಗಿರುವ ರಾಜ್ಯದ ಹಲವು ಜನ ಪ್ರತಿನಿಧಿಗಳು, ಅವರ ಕುಟುಂಬಸ್ಥರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಈ ವೇಳೆ ಚಿಕಿತ್ಸೆ ಪಡೆದ ಆಸ್ಪತ್ರೆಯ ವೆಚ್ಚದ ಬಿಲ್ ಮರುಪಾವತಿಗೆ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳು ಮತ್ತು ಕುಟುಂಬಸ್ಥರ ಕೋವಿಡ್ ಬಿಲ್ ಲಕ್ಷ ಲಕ್ಷ ಆಗಿದ್ದು, ಆಸ್ಪತ್ರೆ ವೆಚ್ಚದ ಬಿಲ್ ಗಳನ್ನು ವಿಧಾನಸಭೆ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಈ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಅದರ ಮಾಹಿತಿ ಇಂತಿದೆ.

CORONA VIRUS ANIL BENAKE copy

1) ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕರ ಅನಿಲ್ ಬೆನಕೆ ಅವರು ಸರ್ಕಾರಕ್ಕೆ ತಮ್ಮ ಹಾಗೂ ಕುಟುಂಬ ಚಿಕಿತ್ಸೆ ಪಡೆದ 8,55,856 ರೂ.ಗಳ ಬಿಲ್ ಅನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಇದರಲ್ಲಿ ಅನಿಲ್ ಬೆನಕೆ ಅವರ ಚಿಕಿತ್ಸಾ ವೆಚ್ಚ 1,92,000 ರೂ., ಅವರ ಪತ್ನಿ ಮನಿಷಾ ಎಸ್ 1,35,500 ರೂ., ಬೆನಕೆ ಅವರ ಪುತ್ರಿಯರಾದ ಅಂಜಲಿ ಅನಿಲ್ ಬೆನಕೆ ಮತ್ತು ಲೀಲಾ ಅನಿಲ್ ಬೆನಕೆ ಅವರ ಚಿಕಿತ್ಸಾ ವೆಚ್ಚ ತಲಾ 1,35,500 ರೂ., ಅನಿಲ್ ಬೆನಕೆ ಅವರ ತಂದೆ ಶೆಟ್ಟುಪ್ಪಾ ಸುಬ್ಬರಾವ್ ಬೆನಕೆ ಮತ್ತು ತಾಯಿ ಪಾರ್ವತಿ ಕಟ್ಟುಪ್ಪಾ ಬೆನಕೆ ಅವರ ಚಿಕಿತ್ಸಾ ವೆಚ್ಚ ಕ್ರಮವಾಗಿ 1,27,824 ರೂ., 1,29,532 ರೂ. ಸೇರಿದೆ.

CORONA VIRUS RAGHAVENDRA HITNAL copy

2)ಕೊಪ್ಪಳ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು 2,36,021 ರೂ. ಮೊತ್ತದ ಬಿಲ್‍ಅನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ರಾಘವೇಂದ್ರ ಹಿಟ್ನಾಳ್ ಅವರದ್ದು 1,01,141 ರೂ,. ಶಾಸಕರ ಮಗ ಸುದರ್ಶನ ಮತ್ತು ಪುತ್ರಿ ವಿಜಯಶ್ರೀ ಅವರ ಚಿಕಿತ್ಸಾ ವೆಚ್ಚ ಕ್ರಮವಾಗಿ 73,301 ರೂ., 61,579 ರೂ. ಸೇರಿದೆ.

CORONA VIRUS AIHOLE copy

3)ರಾಯಭಾಗ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅವರು 3,07,113 ರೂ., ಮೊತ್ತದ ಬಿಲ್‍ಅನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಶಾಸಕರ ಚಿಕಿತ್ಸಾ ವೆಚ್ಚ 1,52,959 ರೂ., ಶಾಸಕರ ಪತ್ನಿ ಸುಶೀಲಾ ಡಿ.ಐಹೊಳೆ ಅವರ ಚಿಕಿತ್ಸಾ ವೆಚ್ಚ 1,54,154 ರೂ. ಸೇರಿದೆ.

4)ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಅವರ ಚಿಕಿತ್ಸಾ ವೆಚ್ಚ 2,29,654 ರೂ. ಮೊತ್ತದ ಬಿಲ್‍ಅನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ.

CORONA VIRUS POORNIMA copy

5)ಕಲಘಟ್ಟಗಿ ಬಿಜೆಪಿ ಶಾಸಕ ಸಿಎಂ ನಿಂಬಣ್ಣನವರ್ ಅವರು 2,91,045 ರೂ. ಮೊತ್ತದ ಆಸ್ಪತ್ರೆಯ ಚಿಕಿತ್ಸಾ ಬಿಲ್‍ಅನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ.

6)ಭದ್ರಾವತಿ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ವರ್ ಮತ್ತು ಕುಟುಂಬದ ಚಿಕಿತ್ಸಾ ವೆಚ್ಚ 5,11,172 ರೂ. ಮೊತ್ತದ ಬಿಲ್‍ಅನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಇದರಲ್ಲಿ ಅವರ ಚಿಕಿತ್ಸಾ ವೆಚ್ಚ 2,99,336 ರೂ., ಪತ್ನಿ ಕಾವ್ಯ ಕೊನೆರಿರಾ ಅವರ ಚಿಕಿತ್ಸಾ ವೆಚ್ಚ 2,12,376 ರೂ. ಸೇರಿದೆ.

CORONA VIRUS BK SANGAMESH

7)ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಅವರು ತಮ್ಮ ಚಿಕಿತ್ಸೆಯ 1,07,112 ರೂ. ಮೊತ್ತದ ಆಸ್ಪತ್ರೆಯ ಬಿಲ್‍ಅನ್ನು ಮರುಪಾವತಿ ಮಾಡುವಂತೆ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ.

8)ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರ ಪತ್ನಿ ಗೀತಾ ಜೆಆರ್ ಅವರ ಒಟ್ಟು 2,24,279 ರೂ. ಮೊತ್ತದ ಆಸ್ಪತ್ರೆಯ ಚಿಕಿತ್ಸಾ ವೆಚ್ಚದ ಬಿಲ್‍ಅನ್ನು ಮರುಪಾವತಿ ಮಾಡುವಂತೆ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ.

CORONA VIRUS CM NIMBHANNA copy

9)ಗುರುಮಿಠ್ಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ್ ಅವರು ಒಟ್ಟು 5,52,242 ರೂ. ಮೊತ್ತದ ಬಿಲ್‍ಅನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಶಾಸಕರ ಚಿಕಿತ್ಸೆ 3,29,359 ರೂ. ಮತ್ತು ಶಾಸಕ ಪತ್ನಿ ಕಾಂತಮ್ಮ ಅವರ ಚಿಕಿತ್ಸೆಯ 2,22,883 ರೂ. ಸೇರಿದೆ.

10)ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರು ಒಟ್ಟು 2,29,247 ರೂ. ಮೊತ್ತದ ಬಿಲ್‍ಅನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ.

CORONA VIRUS MLA NAGANAGOWDA

ನಿಯಮಗಳ ಅನ್ವಯ ಶಾಸಕರು ಹಾಗೂ ಅವರ ಕುಟುಂಬಸ್ಥರು ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದರೇ ಸರ್ಕಾರ ಆ ಚಿಕಿತ್ಸಾ ಮೊತ್ತವನ್ನು ಮರುಪಾವತಿ ಮಾಡಲು ಅವಕಾಶವಿದೆ. ಆದರೆ ಕೊರೊನಾ ಸೋಂಕಿನ ವಿಚಾರದಲ್ಲಿ ಸರ್ಕಾರ ಕೆಲ ನಿಯಮಗಳನ್ನು ಮಾಡಿದ್ದು, ಸೋಂಕಿಗೆ ತುತ್ತಾದ ವ್ಯಕ್ತಿಗೆ ಚಿಕಿತ್ಸೆ ಬೆಂಗಳೂರು ನಗರದಲ್ಲಿ ಬಿಬಿಎಂಪಿ ಹಾಗೂ ಜಿಲ್ಲೆಗಳಲ್ಲಿ ಜಿಲ್ಲಾಡಳಿತ ಗಮನಿಸಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೇ ಮಾತ್ರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಈ ಮೊತ್ತವನ್ನು ಸರ್ಕಾರವೇ ಬರಿಸುತ್ತದೆ. ಆದರೆ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಸೂಚನೆ ನೀಡಿದರೆ ಉಚಿತ ಚಿಕಿತ್ಸೆಯನ್ನು ನೀಡುತ್ತದೆ. ಈ ನಿಯಮಗಳ ಅನ್ವಯ ಜನಪ್ರತಿನಿಧಿಗಳು ಸ್ವತಃ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದರಿಂದ ಸರ್ಕಾರವನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಿಲ್ ಮೊತ್ತವನ್ನು ಮರುಪಾವತಿ ಮಾಡುವಂತೆ ಸೂಚಿಸುವುದು ಎಷ್ಟು ಸರಿ ಎಂಬುವುದು ಪ್ರಶ್ನೆಯಾಗಿದೆ.

CORONA VIRUS Rajegowda

ಸದ್ಯ ಶಾಸಕರಾದ ದುರ್ಯೋಧನ ಐಹೊಳೆ, ಟಿ.ಡಿ.ರಾಜೇಗೌಡ, ರಾಘವೇಂದ್ರ ಹಿಟ್ನಾಳ್, ಸುರೇಶ್‍ಗೌಡ, ಸಿ.ಎಂ. ನಿಂಬಣ್ಣನವರ್, ನಾಗನಗೌಡ ಕಂದಕೂರ್, ಕೆ.ಪೂರ್ಣಿಮಾ ಶ್ರೀನಿವಾಸ್, ಬೆಳ್ಳಿ ಪ್ರಕಾಶ್, ಅನಿಲ್ ಬೆನಕೆ, ಬಿ.ಕೆ.ಸಂಗಮೇಶ್ವರ್ ರ ಕೋವಿಡ್ ಚಿಕಿತ್ಸಾ ಬಿಲ್ ಗಳನ್ನು ಕೊರೊನಾ ಚಿಕಿತ್ಸಾ ವೆಚ್ಚದ ಮರುಪಾವತಿಗಾಗಿ ವಿಧಾನಸಭೆ ಸಚಿವಾಲಯದ ಮುಂದೆ ಅರ್ಜಿ ಸಲ್ಲಿಸಲಾಗಿದೆ. ಒಟ್ಟು 35,44,281 ರೂಪಾಯಿ ಚಿಕಿತ್ಸಾ ವೆಚ್ಚದ ಮೊತ್ತವನ್ನು ಮರುಪಾವತಿಸುವಂತೆ ಮನವಿ ಮಾಡಲಾಗಿದೆ. 10 ಶಾಸಕರು ಸಲ್ಲಿಸಿರುವ ಚಿಕಿತ್ಸಾ ವೆಚ್ಚದ ಬಿಲ್‍ನ್ನು ವಿಧಾನಸಭೆ ಸಚಿವಾಲಯವೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆ ನಿರ್ದೇಶನಾಲಯಕ್ಕೆ ಕಳುಹಿಸಿದೆ.

TAGGED:bjpcongressCorona VirusCovid 19Government hospitaljdsKarnataka Governmentprivate hospitalPublic TVಕರ್ನಾಟಕ ಸರ್ಕಾರಕಾಂಗ್ರೆಸ್ಕೊರೊನಾ ವೈರಸ್ಕೋವಿಡ್ 19ಖಾಸಗಿ ಆಸ್ಪತ್ರೆಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಸರ್ಕಾರಿ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
7 minutes ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
25 minutes ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
32 minutes ago
Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
1 hour ago
Tejasvi Surya
Bengaluru City

ನಾರಿಶಕ್ತಿಗೆ ವಿಪಕ್ಷಗಳ ವಿರೋಧ – ಇದರ ಪರಿಣಾಮ ಪ.ಬಂಗಾಳ ಚುನಾವಣೆಯಲ್ಲೇ ಗೊತ್ತಾಗಲಿದೆ: ತೇಜಸ್ವಿ ಸೂರ್ಯ ಭವಿಷ್ಯ

Public TV
By Public TV
1 hour ago
Patahi Airport
Latest

ಬಿಹಾರದಲ್ಲಿ ಮತ್ತೊಂದು ಏರ್‌ಪೋರ್ಟ್‌ ನಿರ್ಮಾಣ – ಶೀಘ್ರದಲ್ಲೇ ವಿಮಾನ ಸೇವೆ ಆರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?