Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖೋಡೆ ಉದ್ಯಮ ಸಮೂಹದಿಂದ ಕೋವಿಡ್-19 ವಿರುದ್ಧದ ಹೋರಾಟಕ್ಕೆ ‘ವೈರಾನಾರ್ಮ್’ ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಖೋಡೆ ಉದ್ಯಮ ಸಮೂಹದಿಂದ ಕೋವಿಡ್-19 ವಿರುದ್ಧದ ಹೋರಾಟಕ್ಕೆ ‘ವೈರಾನಾರ್ಮ್’ ಬಿಡುಗಡೆ

Bengaluru City

ಖೋಡೆ ಉದ್ಯಮ ಸಮೂಹದಿಂದ ಕೋವಿಡ್-19 ವಿರುದ್ಧದ ಹೋರಾಟಕ್ಕೆ ‘ವೈರಾನಾರ್ಮ್’ ಬಿಡುಗಡೆ

Public TV
Last updated: May 15, 2021 6:53 pm
Public TV
Share
4 Min Read
Khoday Group ViraNorm1
SHARE

ಬೆಂಗಳೂರು: ಬೆಂಗಳೂರು ಮೂಲದ ಖೋಡೆ ಉದ್ಯಮ ಸಮೂಹವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಸರ್ಗ ಸಹಜ ಗಿಡಮೂಲಿಕೆಗಳನ್ನು ಬಳಸಿ ಅಭಿವೃದ್ಧಿಪಡಿಸಿದ ಆಯುರ್ವೇದ ಔಷಧಿ ‘ವೈರಾನಾರ್ಮ್’ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ, ಖೋಡೆ ಸಮೂಹವು ಪರ್ಯಾಯ ಔಷಧ ಉದ್ಯಮ ಕ್ಷೇತ್ರವನ್ನು ಪ್ರವೇಶಿಸಿದೆ.

ಕ್ಯಾಪ್ಯೂಲ್ ರೂಪದಲ್ಲಿ ಲಭ್ಯವಿರುವ ‘ವೈರಾನಾರ್ಮ್’ ಅನ್ನು ಅಥೆರಾ ಡಾಬರ್ ರೀಸರ್ಚ್ ಫೌಂಡೇಷನ್ (ಡಿ.ಆರ್.ಎಫ್.) ಲೈಫ್ ಸೈನ್ಸಸ್ ನ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಜಾಗತಿಕ ಮಾನದಂಡಗಳಿಗೆ ಅನುಗುಣವಾಗಿ ಸುದೀರ್ಘಾವಧಿಯ 3ನೇ ಹಂತದ ಕ್ಲಿನಿಕಲ್ ಟ್ರಯಲ್ (ಚಿಕಿತ್ಸಾ ಪ್ರಯೋಗ)ಗೆ ಒಳಪಡಿಸಿದ ವಿಶಿಷ್ಟ ಆಯುರ್ವೇದ ಕ್ಯಾಪ್ಸೂಲ್ ಇದಾಗಿದೆ.

ಕ್ಲಿನಿಕಲ್ ಟ್ರಯಲ್ ಗಳಲ್ಲಿ ಪರಿಣಾಮಕಾರಿ ಎಂದು ದೃಢಪಟ್ಟಿರುವ ‘ವೈರಾನಾರ್ಮ್’ ಅನ್ನು ಅಪೇಕ್ಷಿತ ಫಲಿತಾಂಶ ಪರೀಕ್ಷೆ ಹಾಗೂ ಸುರಕ್ಷತಾ ಅಧ್ಯಯನಗಳಿಗೆ ಒಳಪಡಿಸಲಾಗಿದೆ. ಇದು ದೇಹದಲ್ಲಿ ವೈರಾಣುಗಳ ಸಂಖ್ಯೆ ಹೆಚ್ಚುವುದನ್ನು ತಡೆಯುತ್ತದೆ. ಆದ್ದರಿಂದ, ರೋಗಲಕ್ಷಣವಿಲ್ಲದ ಹಾಗೂ ರೋಗಲಕ್ಷಣದೊಂದಿಗೆ ಅಲ್ಪ ಪ್ರಮಾಣದಿಂದ ಸಾಧಾರಣ ಪ್ರಮಾಣದವರೆಗಿನ ಕೋವಿಡ್ ಸೋಂಕಿತರಿಗೆ ಇದನ್ನು ಈಗಾಗಲೇ ನೀಡುತ್ತಿರುವ ಚಿಕಿತ್ಸೆಯ ಜೊತೆಗೆ ಹೆಚ್ಚುವರಿಯಾಗಿ ನೀಡಬಹುದು. ಅಲ್ಪ ಪ್ರಮಾಣದ ಸೋಂಕಿನ ಪ್ರಮಾಣವು ಸಾಧಾರಣ ಹಂತಕ್ಕೆ ಹೋಗದಂತೆ ತಡೆಯಲು ಇದು ಸಹಕಾರಿಯಾಗಿದೆ.

Khoday Group ViraNorm

ನ್ಯೂಟ್ರೋಫಿಲ್- ಲಿಂಫೋಸೈಟ್ ಅನುಪಾತ (ಎನ್.ಎಲ್.ಆರ್.) ಎಂಬುದು ಕೋವಿಡ್ ಬಾಧಿತರ ಸೋಂಕು ಉಲ್ಬಣವನ್ನು ತೋರಿಸುವ ಜೈವಿಕ ಸೂಚಕವಾಗಿದೆ. ಇದು ಅತ್ಯಂತ ಉಪಯುಕ್ತವಾದ, ತ್ವರಿತವಾದ ಹಾಗೂ ದುಬಾರಿಯಲ್ಲದ ವಿಧಾನವೂ ಆಗಿದೆ. ಎನ್.ಎಲ್.ಆರ್. ಅನುಪಾತ ಕಡಿಮೆಯಿದ್ದರೆ ಉರಿಯೂತ ಕಡಿಮೆ ಮಟ್ಟದಲ್ಲಿದೆ ಹಾಗೂ ಅಧಿಕ ಸೈಟೋಟಾಕ್ಸಿಕ್ ಟಿ ಜೀವಕೋಶ ಪ್ರತಿರೋಧಕತೆ ಎಂಬುದನ್ನು ಸೂಚಿಸುತ್ತದೆ. ಹೀಗೆಂದರೆ ವೈರಾಣುಗಳ ಸಂಖ್ಯೆ ಕಡಿಮೆ ಎಂದೂ ಹಾಗೆಯೇ ಚೇತರಿಕೆಗೆ ಪೂರಕ ಎಂಬುದು

ಮನುಷ್ಯನ ದೇಹವು ಕಾಯಿಲೆಯ ವಿರುದ್ಧ ಎರಡು ಬಗೆಯ ಪ್ರತಿರೋಧಗಳನ್ನು ತೋರುತ್ತದೆ. ಮೊದಲನೆಯದು, ‘ಪ್ರತಿಜೈವಿಕ ಮಧ್ಯವರ್ತಿ ಪ್ರತಿರೋಧ’ವಾದರೆ, ಎರಡನೆಯದು, ‘ಜೀವಕೋಶ ಮಧ್ಯವರ್ತಿ ಪ್ರತಿರೋಧ’ವಾಗಿದೆ. ಸಾಮಾನ್ಯ ವಿಧಾನಗಳ ಮೂಲಕ ಮಾಪನ ಮಾಡಲಾಗದ ‘ಜೀವಕೋಶ ಮಧ್ಯವರ್ತಿ ಪ್ರತಿರೋಧ’ವು ವೈರಾಣುಗಳ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈಗ ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ‘ವೈರಾನಾರ್ಮ್’ ಔಷಧಿಯು ವ್ಯಕ್ತಿಯ ‘ಜೀವಕೋಶ ಮಧ್ಯವರ್ತಿ ಪ್ರತಿರೋಧ’ವನ್ನು ಹೆಚ್ಚಿಸುವ ಮೂಲಕ ಬೇಗನೇ ಚೇತರಿಸಿಕೊಳ್ಳಲು ಹಾಗೂ ಸೋಂಕು ಹರಡುವುದನ್ನು ತಡೆಯಲು ಸಹಕರಿಸುತ್ತದೆ. ಇದು, ಕೋವಿಡ್ ಬಾಧಿತರ ಪ್ರಮುಖ ರೋಗಲಕ್ಷಣವಾದ ಕೆಮ್ಮಿನ ತೀವ್ರತೆ, ಅದರ ಅವಧಿ ಹಾಗೂ ದೀರ್ಘಶ್ವಾಸದ ಕೊರತೆಯನ್ನು ತಗ್ಗಿಸುತ್ತದೆ ಎಂಬುದು ಕ್ಲಿನಿಯಲ್ ಟ್ರಯಲ್ ಗಳಲ್ಲಿ ದೃಢಪಟ್ಟಿದೆ. ಈ ಔಷಧಿಗೆ ಬಳಸುವ ಗಿಡಮೂಲಿಕೆ ಅಂಶಗಳು ವೈರಾಣುವು ಮೂಗಿನಲ್ಲಾಗಲೀ ಅಥವಾ ಗಂಟಲಿನಲ್ಲಾಗಲೀ ಜೀವಕೋಶದೊಂದಿಗೆ ಬೆಸೆದುಕೊಳ್ಳುವುದಕ್ಕೆ ಅವಕಾಶ ನೀಡದಿರುವ ಮೂಲಕ ರಕ್ಷಣೆ ನೀಡುತ್ತವೆ.

CORONA VIRUS 2

“ಕಡಿಮೆಯಾಗುವ ಎನ್.ಎಲ್.ಆರ್. ಅನುಪಾತವು ಕೋಶ ಮಟ್ಟದ ಉರಿಯೂತವನ್ನು ಹಾಗೂ ಕೋಶ ಮಧ್ಯವರ್ತಿ ಪ್ರತಿರೋಧದ ಹೆಚ್ಚಳವನ್ನು ಖಾತರಿಪಡಿಸುತ್ತದೆ. ಎನ್.ಎಲ್. ಅನುಪಾತವನ್ನು ಕಡಿಮೆಗೊಳಿಸುತ್ತದೆ ಎಂಬುದನ್ನು ಕ್ಲಿನಿಕಲ್ ಟ್ರಯಲ್ ನಲ್ಲಿ ಕ್ರಮಬದ್ಧವಾಗಿ ಸಾಬೀತುಪಡಿಸಿರುವ ಪರ್ಯಾಯ ಔಷಧಿ ಇದೊಂದೇ ಆಗಿದೆ. ರೋಗ ಪ್ರತಿರೋಧದ ಮೂಲಭೂತ ತತ್ತ್ವಗಳನ್ನು ಆಧರಿಸಿ ‘ವೈರಾನಾರ್ಮ್’ ಅಭಿವೃದ್ಧಿಪಡಿಸಿರುವುದರಿಂದ ವೈರಸ್ ನ ರೂಪಾಂತರಗಳಿಗೂ ಇದು ಪರಿಣಾಮಕಾರಿಯಾಗಿರುತ್ತದೆ” ಎನ್ನುತ್ತಾರೆ ಈ ಔಷಧಿಯನ್ನು ಸೂತ್ರೀಕರಿಸಿದ ಡಾ.ಕೆ.ಜಿ.ಪದ್ಮನಾಭನ್.

ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್ ಬಾಧಿತ ಗರ್ಭಿಣಿಯರಿಗೆ ಹಾಗೂ ಮಗುವಿಗೆ ಜನ್ಮ ನೀಡಿದ ತಾಯಂದಿರ ಮೇಲೆ ‘ವೈರಾನಾರ್ಮ್’ ಬೀರುವ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲು ಅನುಮತಿ ನೀಡಿದೆ ಎಂದು ಅಲ್ತಿಯಾ ಡಾಬರ್ ಸಂಶೋಧನಾ ಫೌಂಡೇಷನ್ ಲೈಫ್ ಸೈನ್ಸಸ್ ನ ಡಾ. ಮನು ಜಗ್ಗಿ ಒತ್ತಿ ಹೇಳುತ್ತಾರೆ.

corona virus 1

ರಾಷ್ಟ್ರೀಯ ಆಸ್ಪತ್ರೆಗಳ ಮೌಲ್ಯಾಂಕನ ಮಂಡಳಿಯ  ಮಾನ್ಯತೆ ಹೊಂದಿದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಸಿ.ಟಿ.ಆರ್.ಐ. (ಕ್ಲಿನಿಕಲ್ ಟ್ರಯಲ್ಸ್ ರಿಜಿಸ್ಟ್ರಿ- ಇಂಡಿಯಾ) ಅನುಮೋದನೆ ಪಡೆದು ಈ ಕ್ಲಿನಿಕಲ್ ಟ್ರಯಲ್ ನಡೆಸಲಾಗಿದೆ. ಇದಕ್ಕಾಗಿ 250 ಕೋವಿಡ್ ಸೋಂಕು ಬಾಧಿತರನ್ನು ಆಯ್ಕೆ ಮಾಡಿ 6 ತಿಂಗಳ ಕಾಲ ಪರೀಕ್ಷೆಗಳನ್ನು ನಡೆಸಲಾಯಿತು. ಸಿ.ಟಿ.ಆರ್.ಐ. ಮಾರ್ಗದರ್ಶಿ ಸೂತ್ರದ ಪ್ರಕಾರ, ಇವರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿತ್ತು. ಇದರಲ್ಲಿ, ಒಂದು ಗುಂಪಿನ 125 ಜನರಿಗೆ ‘ವೈರಾನಾರ್ಮ್’ ಕೊಡಲಾಗುತ್ತಿತ್ತು. ಇನ್ನೊಂದು ಗುಂಪಿನ 125 ಜನರಿಗೆ ‘ವೈರಾನಾರ್ಮ್’ ಕೊಡುತ್ತಿರಲಿಲ್ಲ. ‘ವೈರಾನಾರ್ಮ್’ ಕೊಡದವರಿಗಿಂತ ಅದನ್ನು ಕೊಟ್ಟವರಲ್ಲಿ ಚೇತರಿಕೆಯು ಉತ್ತಮವಾಗಿರುವುದು ವಿವರವಾದ ವಿಶ್ಲೇಷಣೆಗಳಿಂದ ದೃಢಪಟ್ಟಿದೆ.

ಗಮನ ಸೆಳೆದ ಮತ್ತೊಂದು ಅಂಶವೆಂದರೆ, ಇದು ಕಿರಿಯ ವಯಸ್ಕರು (40ಕ್ಕಿಂತ ಕಡಿಮೆ ವರ್ಷ) ಹಾಗೂ ಹಿರಿಯ ವಯಸ್ಕರು (60ಕ್ಕಿಂತ ಹೆಚ್ಚು ವರ್ಷ), ಎರಡೂ ವಯೋಮಾನದವರಲ್ಲಿ, ‘ಟಿ’ ಜೀವಕೋಶಗಳ ಪ್ರತಿರೋಧವನ್ನು ಉತ್ತೇಜಿಸುವ ಜೊತೆಗೆ ಜೀವಕೋಶೀಯ ಉರಿಯೂತವನ್ನು ಕಡಿಮೆಗೊಳಿಸುತ್ತದೆ ಎಂಬುದು ಕಂಡುಬಂದಿದೆ. ಕೋವಿಡ್ 2ನೇ ಅಲೆಯು ಹಿರಿಯ ವಯಸ್ಸಿನವರ ಜೊತೆಗೆ ಕಿರಿಯ ವಯಸ್ಸಿನವರನ್ನೂ ಬಾಧಿಸುತ್ತಿರುವ ಈ ಸನ್ನಿವೇಶದಲ್ಲಿ ಇದು ಹೆಚ್ಚು ಗಮನ ಸೆಳೆಯುವ ಸಂಗತಿಯಾಗಿದೆ.

corona

ಜೀವಕೋಶ ಪ್ರತಿರೋಧದಲ್ಲಿ ಆಗುವ ಹೆಚ್ಚಳವು ದೀರ್ಘಾವಧಿ ಚೇತರಿಕೆಯಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಅಲ್ಲದೇ, ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಗಳಂತಹ ಸಹವರ್ತಿ ರೋಗಗಳಿಂದ ಬಾಧಿತರಾದವರಿಗೂ ‘ವೈರಾನಾರ್ಮ್’ ಸುರಕ್ಷಿತವಾಗಿದೆ.

ಖೋಡೆ ಉದ್ಯಮ ಸಮೂಹದ ಉಪಾಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಸ್ವಾಮಿ ಖೋಡೆ ಅವರು ಈ ಉತ್ಪನ್ನ ಬಿಡುಗಡೆಯಾಗುತ್ತಿರುವುದಕ್ಕೆ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. “ನಮ್ಮ ಕುಟುಂಬದ ಹಿರಿಯರ ಆಶೀರ್ವಾದ ಹಾಗೂ ದೂರದರ್ಶಿತ್ವದ ಬಲದಿಂದ ಈ ಉತ್ಪನ್ನ ರೂಪಿಸುವಲ್ಲಿ ನಾನು ಶಕ್ತಿ ಮೀರಿ ತೊಡಗಿಸಿಕೊಂಡಿದ್ದೇನೆ. ಕ್ಲಿನಿಕಲ್ ಟ್ರಯಲ್ ನಲ್ಲಿ ‘ವೈರಾನಾರ್ಮ್’ ಪರಿಣಾಮಕಾರಿ ಎಂದು ದೃಢಪಟ್ಟಿದ್ದು, ಅದರ ಹಿಂದಿನ ತಾಂತ್ರಿಕ ವಿವರಗಳನ್ನು ಜನರ ಮುಂದಿಡಲು ಸಂತೋಷವಾಗುತ್ತಿದೆ” ಎಂದು ಅವರು ಹೇಳುತ್ತಾರೆ.

ವೈಜ್ಞಾನಿಕ ತತ್ತ್ವಾಧಾರಿಕ ನೈಸರ್ಗಿಕ ಅಂಶಗಳಿಂದ ಕೂಡಿರುವ ‘ವೈರಾನಾರ್ಮ್’, ಕಾಯಿಲೆಗಳಿಗೆ ಪ್ರತಿರೋಧ ಹೆಚ್ಚಿಸುವ ಮೂಲಕ ಯಾವುದೇ ಅಡ್ಡಪರಿಣಾಮಗಳಿಲ್ಲದೆ ಗುಣಮುಖವಾಗಲು ಸಹಕರಿಸುತ್ತದೆ’ ಎಂದೂ ಸ್ವಾಮಿ ಹೇಳುತ್ತಾರೆ.

‘ವೈರಾನಾರ್ಮ್’ ರಾಜ್ಯ/ದೇಶದೆಲ್ಲೆಡೆ ಮಾರುಕಟ್ಟೆಯಲ್ಲಿ ಲಭ್ಯವಿದೆ. ಇದರ ಬೆಲೆ 60 ಕ್ಯಾಪ್ಸೂಲ್ ಗಳ ಬಾಟಲಿಗೆ ರೂ 2,100 ಇದೆ.

TAGGED:CoronaCorona VirusCovid 19kannada newsKhoday GroupViranNormಕನ್ನಡ ನ್ಯೂಸ್ಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಖೋಡೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

CPI video of fighting for arrest of Davangere riot accused goes viral
Crime

ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ ಲೇಡಿ ಸಿಪಿಐ ವಿಡಿಯೋ ವೈರಲ್‌

Public TV
By Public TV
2 minutes ago
Body of boy who went missing 3 days ago found in Bengaluru water board sump 2
Bengaluru City

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ

Public TV
By Public TV
16 minutes ago
Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
9 hours ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
9 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
9 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?