ಗಂಜಿ ಕಾಸಿನ ಆಸೆಗೆ ಹೇಳಿಕೆ ಕೊಟ್ಟ ಚೇತನ್ : ಹೆಬ್ಬಾರ್ ವ್ಯಂಗ್ಯ, ಬಂಧನಕ್ಕೆ ಆಗ್ರಹ

Public TV
1 Min Read
CHETAN HEBBAR

ಬೆಂಗಳೂರು: ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿದೆ. ಮೊದಲಿಗೆ ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಸಚಿವ ಶಿವರಾಂ ಹೆಬ್ಬಾರ್ ಟ್ವೀಟ್ ಮಾಡಿದ್ದಾರೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು. ಇದನ್ನೂ ಓದಿ: ನಟ ಚೇತನ್ ವಿರುದ್ಧ FIR ದಾಖಲು

ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಅಂತಾ ಸಚಿವ ಶಿವರಾಂ ಹೆಬ್ಬಾರ್ ಟ್ವೀಟ್ ಮಾಡಿದ್ದಾರೆ.

ಚೇತನ್ ಹೇಳಿದ್ದೇನು..?
ನಟ ಚೇತನ್ ಸಾಮಾಜಿಕ ಜಾಲತಾಣದಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. . ಬ್ರಾಹ್ಮಣ ಸಮುದಾಯ ವಿರುದ್ಧ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಬ್ರಾಹ್ಮಣರನ್ನು ಭಯೋತ್ಪಾದಕರು ಎಂದು ಚೇತನ್ ನೀಡಿರುವ ಹೇಳಿಕೆ ಭಾರೀ ವಿವಾದ ಸೃಷ್ಟಿಸಿತ್ತು. ಈ ಬೆನ್ನಲ್ಲೇ ನಟನ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು.

 

View this post on Instagram

 

A post shared by Chetan Ahimsa (@chetanahimsa)

Share This Article
Leave a Comment

Leave a Reply

Your email address will not be published. Required fields are marked *