-ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?
-ದೇಗುಲ ರಕ್ಷಿಸಿದ ಮುಸ್ಲಿಂ ಯುವಕರಿಗೆ ಯತೀಂದ್ರ ಸಿದ್ದರಾಮಯ್ಯ ಧನ್ಯವಾದ
ಬೆಂಗಳೂರು: ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್ಗೆ ಹಿಂದೂ ಹಿರಿಯರೇ ಬುದ್ಧಿ ಹೇಳಬೇಕಲ್ವಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಹಿಂದು-ಮುಸ್ಲಿಮರು ಕೂಡಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ನನ್ನ ಹೇಳಿಕೆಯನ್ನು ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ. ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ? ಕಾವಲಭೈರಸಂದ್ರದಲ್ಲಿ ಗಲಭೆ ವರದಿ ಮಾಡಲು ಹೋಗಿರುವ ಮಾಧ್ಯಮ ಮಿತ್ರರ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ. ಪೊಲೀಸರು ತಕ್ಷಣ ಆರೋಪಿಗಳನ್ನು ಬಂಧಿಸಿ, ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸಿದ್ದರಾಮಯ್ಯನವರು ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
- Advertisement 2
ಹಿಂದು-ಮುಸ್ಲಿಮರು ಕೂಡಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ನನ್ನ ಹೇಳಿಕೆಯನ್ನು ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ.
ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ?
ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?
— Siddaramaiah (@siddaramaiah) August 12, 2020
- Advertisement 3
ಸಿದ್ದರಾಮಯ್ಯ ಹೇಳಿದ್ದೇನು?: ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಂ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ. ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್ಗೆ ತಿಳಿಸಿದ್ದೇನೆ ಎಂದಿದ್ದಾರೆ.
- Advertisement 4
ಕಾವಲಭೈರಸಂದ್ರದಲ್ಲಿ
ಗಲಭೆ ವರದಿ ಮಾಡಲು ಹೋಗಿರುವ ಮಾಧ್ಯಮ ಮಿತ್ರರ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ.
ಪೊಲೀಸರು ತಕ್ಷಣ ಆರೋಪಿಗಳನ್ನು ಬಂಧಿಸಿ, ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು.#Kavalbyrasandra
— Siddaramaiah (@siddaramaiah) August 12, 2020
ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ. ಇಂತಹ ಕೋಮು ಗಲಭೆಗಳಲ್ಲಿ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ ಎಂದಿದ್ದರು. ಇದನ್ನೂ ಓದಿ: ಮತಾಂಧ ಮುಸ್ಲಿಮರಿಗೆ ಡಿಕೆಶಿ ಬೆಂಬಲ ಇದೆ ಅನ್ನಿಸುತ್ತೆ: ಸಚಿವ ಕೆ.ಎಸ್.ಈಶ್ವರಪ್ಪ
ಯಾರು ಈ ನವೀನ್?: ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತ ಈ ನವೀನ್. ಫೇಸ್ಬುಕ್ ಪೋಸ್ಟ್ ನಲ್ಲಿ ಒಂದು ಸಮುದಾಯದ ಬಗ್ಗೆ ನವೀನ್ ಅವಹೇಳನಕಾರಿಯಾಗಿ ಬರೆದುಕೊಂಡಿದ್ದರಿಂದ ಉದ್ರಿಕ್ತಗೊಂಡ ಗುಂಪು ಕಾವಲಬೈರಸಂದ್ರದಲ್ಲಿರುವ ಶಾಸಕರ ಮನೆಯ ಮೇಲೆ ದಾಳಿ ನಡೆಸಿತ್ತು. ಇದೀಗ ಸಿದ್ದರಾಮಯ್ಯ ಗಲಭೆಗೆ ಪ್ರಚೋದನೆ ನೀಡಿದ್ದು ನವೀನ್ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ. ಇದನ್ನೂ ಓದಿ: ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಬೇಕು: ಹೆಚ್ಡಿಕೆ
ಯತೀಂದ್ರ ಸಿದ್ದರಾಮಯ್ಯ ಟ್ವೀಟ್: ಒಂದು ಗುಂಪು ಉದ್ರಿಕ್ತರಾಗಿ ಗಲಭೆ ಮಾಡಿದರೆ, ಮತ್ತೊಂದು ಮುಸ್ಲಿಂ ಯುವಕರ ಗುಂಪು ಮಾನವ ಸರಪಳಿ ನಿರ್ಮಿಸಿ ದೇಗುಲವನ್ನು ಗಲಭೆಕೋರರಿಂದ ರಕ್ಷಿಸಿದೆ. ಇಂತಹ ವಿವೇಚನೆಯನ್ನು ಮಾನವೀಯತೆಯನ್ನು ಮೆರೆದ ಯುವಕರಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ.