ಗಲಭೆಯ ಬೆಂಕಿಯಲ್ಲಿ ಬಿಜೆಪಿ ಸರ್ಕಾರ ರೊಟ್ಟಿ ಬಡಿಯುತ್ತಿದೆ: ಸಿದ್ದರಾಮಯ್ಯ

Public TV
1 Min Read
CM SIDDU

-ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ?
-ಬಾದಾಮಿ ಕ್ಷೇತ್ರದ ಜನರಲ್ಲಿ ಕ್ಷಮೆ ಕೇಳಿದ ಮಾಜಿ ಸಿಎಂ

ಬೆಂಗಳೂರು: ಉತ್ತರ ಕರ್ನಾಟಕದ ಜನ ಪ್ರವಾಹದ ಸಂಕಷ್ಟದಲ್ಲಿ ಸಿಲುಕಿದ್ರೆ, ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರೊಟ್ಟಿ ಬಡಿಯುತ್ತಾ ಕುಳಿತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ. ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ. ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ. ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ.

ASHOK SIDDU

ಗೃಹಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ. ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ? ಸಿಎಂ ಯಡಿಯೂರಪ್ಪನವರೇ ಮೊದಲು ಇವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ ಎಂದು ಆಗ್ರಹಿಸಿದ್ದಾರೆ.

r ashok 3

ಕ್ಷೇತ್ರದ ಜನರಲ್ಲಿ ಕ್ಷಮೆ: ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *