ಗಲಭೆ ನಿಯಂತ್ರಿಸಲು ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ: ಡಿಕೆಶಿ

Public TV
2 Min Read
BASAVARAJ DKSHI

– ನಮ್ಮ ಪಾಲಿಕೆ ಸದಸ್ಯರನ್ನು ಹೆದರಿಸೋ ಕೆಲಸ ನಡೀತಿದೆ
– ಅಖಂಡ ಮೇಲೆ ಬಿಜೆಪಿ ಒತ್ತಡ ಹಾಕ್ತಿದೆ

ಬೆಂಗಳೂರು: ಸಿಲಿಕಾನ್ ಸಿಟಿಯ ಡಿ.ಜೆ ಹಳ್ಳಿ ಹಾಗೂ ಕೆ.ಜೆ ಹಳ್ಳಿಯಲ್ಲಿ ನಡೆದ ಗಲಭೆ ನಿಯಂತ್ರಣ ಮಾಡುವಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

DK SHIVAKUMAr 2

ನಗರದ ಕಾಂಗ್ರೆಸ್ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಬಿಜೆಪಿ ವಿರುದ್ಧ ಕೆಂಡಾಮಂಡಲರಾದರು. ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ಶೃಂಗೇರಿ ಘಟನೆ ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ. ಕಾವಲ್ ಬೈರಸಂದ್ರದಲ್ಲೂ ಏನ್ಮಾಡ್ತಿದ್ದಾರೆ. ಗೃಹ ಸಚಿವರ ಪ್ರತಿಯೊಂದು ಹೇಳಿಕೆಯನ್ನೂ ಗಮನಿಸುತ್ತಿದ್ದೇವೆ ಎಂದರು.

ನಮ್ಮ ಪಾಲಿಕೆ ಸದಸ್ಯರಿಗೆ ನೋಟಿಸ್ ಕೊಟ್ಟು ಹೆದರಿಸುವ ಕೆಲಸ ನಡೆಯುತ್ತಿದೆ. ಇದಕ್ಕೆಲ್ಲ ನಾವು ಹೆದರೋದಿಲ್ಲ. ನಮ್ಮ ಶಾಸಕರ ಬೆಂಬಲಕ್ಕೆ ನಾವಿದ್ದೇವೆ. ನಮ್ಮವರನ್ನು ಹೆದರಿಸಿ ಕೇಸ್ ಮುಚ್ಚೋಕೆ ನಾವು ಬಿಡಲ್ಲ ಎಂದು ಎಚ್ಚರಿಕೆ ನೀಡಿದರು.

DK SHIVAKUMAR 1

ಗಲಭೆಗೆ ಕಾಂಗ್ರೆಸ್ಸಿನಲ್ಲಿನ ಆಂತರಿಕ ಭಿನ್ನಾಭಿಪ್ರಾಯವೇ ಗಲಭೆಗೆ ಕಾರಣ ಎಂಬ ಬೊಮ್ಮಾಯಿ ಹೇಳಿಕೆಗೆ ಕಿಡಿಕಾರಿದ ಡಿಕೆಶಿ, ಆ ಮಾತು ಹೇಳಲು ಬೊಮ್ಮಾಯಿ ಯಾರು?, ಅಥಾರಿಟೀನಾ?, ಸಬ್ ಇನ್ಸ್‍ಪೆಕ್ಟರಾ? ಅಥವಾ ಆಯೋಗನಾ?. ನಮ್ಮ ಕಾರ್ಪೊರೇಟರ್ ಗಳಿಗೆ ನೋಟಿಸ್ ಕೊಟ್ಟು ಬ್ಲಾಕ್ ಮೇಲ್ ಮಾಡ್ತಿದ್ದಾರೆ. ಏನ್ ನಡೀತಿದೆ ಇಲ್ಲಿ?, ನಾವೇನು ಸುಮ್ನೆ ಕೂತಿದ್ದೀವಾ?, ಅವರ ಕಾರ್ಯಕರ್ತ ಟ್ವೀಟ್ ಮಾಡಿದ್ದೇ ಗಲಭೆಗೆ ಕಾರಣ ಎಂದು ಆರೋಪಿಸಿದರು. ಇದನ್ನೂ ಓದಿ: ಮುಂದಿನ ದಿನದಲ್ಲಿ ಕೆಂಪು ಕೋಟೆಯಲ್ಲಿ ನಾವು ಭಾಷಣ ಮಾಡ್ತೇವೆ: ಡಿಕೆಶಿ 

DKSHI

ಗಲಭೆ ನಿಯಂತ್ರಣ ಮಾಡಲು ಹೋಮ್ ಮಿನಿಸ್ಟರ್ ಕಂಪ್ಲೀಟ್ ವಿಫಲರಾಗಿದ್ದಾರೆ. ಮೂರು ಗಂಟೆ ಅವಧಿಯಲ್ಲಿ ಗಲಭೆ ನಿಯಂತ್ರಿಸಲಿಲ್ಲ. ಗಲಾಟೆ ಮಾಡಲು ಬಿಟ್ಬಿಟ್ಟು ಈಗ ಜಾತಿ ಬಣ್ಣ ಬಳಿಯುತ್ತಿದ್ದಾರೆ. ಅಖಂಡ ನಮ್ಮ ಶಾಸಕ. ನಮ್ಮ ಶಾಸಕ ನ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ. ನಮ್ಮ ಶಾಸಕನ ಮನೆ ಮೇಲಿನ ದಾಳಿಯನ್ನ ನಾವು ಕಟುವಾಗಿ ಖಂಡಿಸಿದ್ದೇವೆ. ಗಲಭೆಕೋರರ ವಿರುದ್ಧ ಕಠಿಣ ಕ್ರಮ ತಗೊಳ್ಳಿ. ಇದಕ್ಕೆ ನಮ್ಮ ಬೆಂಬಲವೂ ಇದೆ. ಅದು ಬಿಟ್ಟು ಕಾಂಗ್ರೆಸ್ಸಿನಲ್ಲಿ ಒಳ ಜಗಳ ಇದೆ ಅಂತ ಹೇಳಲು ಬೊಮ್ಮಾಯಿ ಯಾರು ಎಂದು ಪ್ರಶ್ನೆ ಮಾಡಿದರು.

DK

ಕಾಂಗ್ರೆಸ್ಸಿನಲ್ಲಿ ಭಿನ್ನಾಭಿಪ್ರಾಯವಿಲ್ಲ. ಬಿಜೆಪಿಯೊಳಗೆ ಸಾಕಷ್ಟು ಆಂತರಿಕ ಕಚ್ಚಾಟ ಇದೆ. ಬಿಜೆಪಿಯವರ ಒಳ ತಂತ್ರದಿಂದಲೇ ಗಲಭೆ ನಡೆದಿದೆ. ನಮ್ಮವರು ಘಟನೆ ಬಗ್ಗೆ ಆಂತರಿಕ ತನಿಖೆ ಮಾಡುತ್ತಿದ್ದೇವೆ. ಆದರೆ ಬಿಜೆಪಿಯವರು ನಮ್ಮ ಕಾರ್ಪೊರೇಟರ್ ಗಳು, ಪೊಲೀಸರಿಂದ ಹೆದರಿಸ್ತಿದ್ದಾರೆ ಎಂದು ಡಿಕೆಶಿ ಗಂಭೀರ ಆರೋಪ ಮಾಡಿದರು.

CONGRESS 1

ಇದೇ ಹೇಳಿಕೆ ಕೊಡಬೇಕು ಅಂತ ಬಿಜೆಪಿಯು ಅಖಂಡ ಶ್ರೀನಿವಾಸ ಮೂರ್ತಿ ಮೇಲೆ ಒತ್ತಡ ಹಾಕುತ್ತಿದೆ. ಅದೆಲ್ಲ ನಮಗೆ ಗೊತ್ತಿದೆ. ನಾವು ಇದನ್ನು ಸಹಿಸಲ್ಲ. ಏನೇನ್ ನಡೀತಿದೆ ಅಂತ ನಮಗೆ ಗೊತ್ತಿದೆ. ಇವರು ಅಧಿಕಾರಕ್ಕೆ ಬಂದಾಗಲೆಲ್ಲ ಕೋಮು ಗಲಭೆ ನಡೆಯುತ್ತೆ. ಈ ಸರ್ಕಾರದಲ್ಲಿ ಒಬ್ಬ ಸಚಿವ, ಶಾಸಕನನ್ನು ನಿಯಂತ್ರಿಸಲು ಅವರಿಂದಲೇ ಸಾಧ್ಯವಾಗ್ತಿಲ್ಲ ಎಂದು ಡಿಕೆಶಿ ಸಿಡಿಮಿಡಿಗೊಂಡರು.

ಇದೇ ವೇಳೆ ಶೃಂಗೇರಿ ಘಟನೆ ವಿಚಾರ ಸಂಬಂಧ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ, ಶೃಂಗೇರಿಯಲ್ಲಿ ನಡೆದ ಘಟನೆಗೆ ಬಿಜೆಪಿ, ಭಜರಂಗ ದಳವೇ ಮೂಲ. ಇದನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ. ಬಿಜೆಪಿಯವರು ಈ ಸತ್ಯವನ್ನು ಮುಚ್ಚಿ ಹಾಕಲು ಪ್ರಯತ್ನ ಪಡುತ್ತಿದ್ದಾರೆ ಎಂದು ಗರಂ ಆದರು.

Share This Article
Leave a Comment

Leave a Reply

Your email address will not be published. Required fields are marked *