Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೂಗಲ್ ಕ್ಷಮೆ ಕೋರಿದೆ, ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? – ಎಚ್‍ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೂಗಲ್ ಕ್ಷಮೆ ಕೋರಿದೆ, ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? – ಎಚ್‍ಡಿಕೆ ಕಿಡಿ

Bengaluru City

ಗೂಗಲ್ ಕ್ಷಮೆ ಕೋರಿದೆ, ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? – ಎಚ್‍ಡಿಕೆ ಕಿಡಿ

Public TV
Last updated: June 7, 2021 10:20 am
Public TV
Share
3 Min Read
Kumaraswamy
SHARE

ಬೆಂಗಳೂರು: ಗೂಗಲ್ ತನ್ನ ತಪ್ಪು ಒಪ್ಪಿಕೊಂಡಿದೆ. ಜಾಗತಿಕವಾಗಿ ಕ್ಷಮೆ ಕೋರಿದೆ. ಆದರೆ, ಸ್ವಾತಂತ್ರ್ಯ ನಂತರದಲ್ಲಿ ರಚನೆಯಾದ ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? ಕನ್ನಡಕ್ಕೆ ಆದ ಅನ್ಯಾಯ ಸರಿಪಡಿಸಲು ಎಷ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿವೆ ಎಂದು ಪ್ರಶ್ನಿಸಿ ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ಸೇವೆ, ಹಿಂದಿ ಹೇರಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡದ ವಿಚಾರದಲ್ಲಿನ ಅಜಾಗರೂಕತೆ, ಅಸೂಕ್ಷ್ಮತೆ, ಭಂಡತನವನ್ನು ನಾವು ಪ್ರಶ್ನೆ ಮಾಡಬೇಕಿತ್ತು, ಮಾಡಿದ್ದೇವೆ. ಆದರೆ, ಯಕಶ್ಚಿತ್‌ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ನಮ್ಮ ಹೋರಾಟಗಳನ್ನು ಕೇಂದ್ರೀಕರಿಸಿ ಏನು ಉಪಯೋಗ? ನಮ್ಮ ಹೋರಾಟ ಇರಬೇಕಾದ್ದು ಒಕ್ಕೂಟ ವ್ಯವಸ್ಥೆಯಲ್ಲಿನ ನಮ್ಮ ಹಕ್ಕುಗಳಿಗಾಗಿ. ನಮಗೆ ಸಿಗಬೇಕಾದ ನ್ಯಾಯದ ವಿಚಾರಕ್ಕಾಗಿ.
2/10

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 7, 2021

ಟ್ವೀಟ್‍ನಲ್ಲಿ ಏನಿದೆ?
ಕನ್ನಡಿಗರ ಭಾಷಾಭಿಮಾನವನ್ನು ಗೂಗಲ್, ಅಮೆಜಾನ್ ಕೆಣಕಿದ್ದವೋ, ಇಲ್ಲವೇ ಪಟ್ಟಭದ್ರರು ಕೆಣಕಿದ್ದರೋ.. ಆದರೆ, ಕನ್ನಡಿಗರು ಖಚಿತವಾಗಿ ಸಿಡಿಯುತ್ತಾರೆ ಎಂಬ ಉತ್ತರ ಕೆಣಕಿದವರಿಗೆ ಸಿಕ್ಕಿದೆ. ಆದರೆ, ಈ ಸಣ್ಣ ವಿಚಾರಗಳೇ ವೈಭವೀಕರಣಗೊಂಡು, ಚರ್ಚೆಯಾಗಬೇಕಾದ ಗಂಭೀರ ವಿಚಾರಗಳು ಮರೆಯಾಗದಿರಲಿ. ಕನ್ನಡ, ಕರ್ನಾಟಕಕ್ಕೆ ಸಿಗಬೇಕಾದ ನ್ಯಾಯ ದೊಡ್ಡದಿದೆ. ಇದನ್ನೂ ಓದಿ: ಗೂಗಲ್ ಸರ್ಚ್ ನಲ್ಲಿ ಕುವೆಂಪು ಫೋಟೋ ಬಂದಿದ್ದು ಹೇಗೆ? ಇಲ್ಲಿದೆ ಡೂಡಲ್ ಸೃಷ್ಟಿಕರ್ತನ ಕತೆ

ಕನ್ನಡದ ವಿಚಾರದಲ್ಲಿನ ಅಜಾಗರೂಕತೆ, ಅಸೂಕ್ಷ್ಮತೆ, ಭಂಡತನವನ್ನು ನಾವು ಪ್ರಶ್ನೆ ಮಾಡಬೇಕಿತ್ತು, ಮಾಡಿದ್ದೇವೆ. ಆದರೆ, ಯಕಶ್ಚಿತ್‌ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ನಮ್ಮ ಹೋರಾಟಗಳನ್ನು ಕೇಂದ್ರೀಕರಿಸಿ ಏನು ಉಪಯೋಗ? ನಮ್ಮ ಹೋರಾಟ ಇರಬೇಕಾದ್ದು ಒಕ್ಕೂಟ ವ್ಯವಸ್ಥೆಯಲ್ಲಿನ ನಮ್ಮ ಹಕ್ಕುಗಳಿಗಾಗಿ. ನಮಗೆ ಸಿಗಬೇಕಾದ ನ್ಯಾಯದ ವಿಚಾರಕ್ಕಾಗಿ.

Which is the ugliest language in india kannada page medium

ಗೂಗಲ್ ಆಲ್ಗಾರಿದಮ್‌ನ ಸಮಸ್ಯೆಯಿಂದಾಗಿ ಕನ್ನಡಕ್ಕೆ ಅಪಮಾನವಾಗಿರಬಹುದು. ಆದರೆ, ಗೂಗಲ್‌ ತನ್ನ ತಪ್ಪು ಒಪ್ಪಿಕೊಂಡಿದೆ. ಜಾಗತಿಕವಾಗಿ ಕ್ಷಮೆ ಕೋರಿದೆ. ಆದರೆ, ಸ್ವಾತಂತ್ರ್ಯ ನಂತರದಲ್ಲಿ ರಚನೆಯಾದ ಒಕ್ಕೂಟ ಸರ್ಕಾರಗಳು ಕನ್ನಡಕ್ಕೆ ಎಷ್ಟು ಮಾನ್ಯತೆ ನೀಡಿವೆ? ಕನ್ನಡಕ್ಕೆ ಆದ ಅನ್ಯಾಯ ಸರಿಪಡಿಸಲು ಎಷ್ಟು ಪ್ರಾಮಾಣಿಕವಾಗಿ ಪ್ರಯತ್ನಿಸಿವೆ?

ಕೇಂದ್ರ ಸರ್ಕಾರಗಳೆಲ್ಲವೂ ಅಪಮಾರ್ಗದಲ್ಲಿ ಹಿಂದಿಯನ್ನು ಹೇರಿಕೊಂಡೇ ಬಂದಿವೆ. ಕನ್ನಡವನ್ನು 3ನೇ ದರ್ಜೆ ಭಾಷೆಯಾಗಿ ಕಾಣುತ್ತಾ ಬಂದಿವೆ. ಇತ್ತೀಚಿನ ವರ್ಷಗಳಲ್ಲಂತೂ ಹಿಂದಿ ಹೇರಿಕೆಯ ಪ್ರಯತ್ನ ಅತ್ಯಂತ ಪ್ರಬಲವಾಗಿ ನಡೆಯುತ್ತಿದೆ. ‘ಒಂದು ದೇಶ ಒಂದು ಭಾಷೆ‘ ಪರಿಕಲ್ಪನೆ ಅಡಿಯಲ್ಲಿ ಹಿಂದಿಯನ್ನು ರಾಷ್ಟ್ರಭಾಷೆ ಮಾಡುವ ಪ್ರಯತ್ನಗಳಾಗುತ್ತಿವೆ. ಇದನ್ನೂ ಓದಿ: ಗೂಗಲ್ ತೆಕ್ಕೆಗೆ ಬೆಂಗಳೂರಿನ ‘ವೇರ್ ಈಸ್ ಮೈ ಟ್ರೈನ್’ ಆ್ಯಪ್ ಕಂಪನಿ

amazon kannada medium

ಕೇಂದ್ರ ಸರ್ಕಾರದ ನೌಕರಿ ಸಿಗಬೇಕಿದ್ದರೆ ಹಿಂದಿ ಭಾಷೆ ಬರಬೇಕೆಂಬ ಷರತ್ತುಗಳು, ಹಿಂದಿಯಲ್ಲೇ ಪರೀಕ್ಷೆ ಬರೆಯಬೇಕೆಂಬ ನಿಬಂಧನೆಗಳು, ತ್ರಿಭಾಷಾ ಸೂತ್ರವೆಂಬ ಕುಣಿಕೆಗಳು ಹಿಂದಿ ಹೇರಿಕೆಯ ಸ್ಪಷ್ಟ ಪ್ರಯತ್ನಗಳು. ಸ್ಥಳೀಯ ಭಾಷೆಗಳನ್ನು ಕೊಲ್ಲುವ ಅಜೆಂಡಾಗಳು. ನಮ್ಮಹೋರಾಟಗಳು ಇಂಥ ಮಾರಕ ಅಜೆಂಡಾಗಳ ವಿರುದ್ಧ ಇರಬೇಕು ಎಂಬುದು ನನ್ನ ಅಭಿಪ್ರಾಯ.

ಲೋಕಸಭೆಯಲ್ಲಿ ಕನ್ನಡದಲ್ಲಿ ಮಾತನಾಡಿದರೆ ಮಾನ್ಯತೆ ಸಿಗುವುದಿಲ್ಲ, ಗಂಭೀರವಾಗಿಯೂ ಆಲಿಸುವುದಿಲ್ಲ. ಕೇಂದ್ರದ ಪ್ರಕಟಣೆಗಳು ಸ್ಥಳೀಯ ಭಾಷೆಯಲ್ಲಿ ಸಿಗುವುದಿಲ್ಲ. ಕೇಂದ್ರದ ಸೇವೆಗಳು ಕನ್ನಡದಲ್ಲಿಲ್ಲ. ಅಧಿಕಾರಿಗಳು, ಸಿಬ್ಬಂದಿ ಕನ್ನಡದಲ್ಲಿ ಮಾತನಾಡುವುದಿಲ್ಲ. ವೆಬ್‌ಸೈಟ್‌ಗಳಲ್ಲಿ ಕನ್ನಡವಿಲ್ಲ. ಗ್ರಾಹಕ ಸೇವೆ ಕನ್ನಡದಲ್ಲಿ ಸಿಗುವುದಿಲ್ಲ.

kannada bbmp 2

ನಮ್ಮ ಜಿಎಸ್‌ಟಿ ಪಾಲು ನಮಗೆ ಸಿಗುವುದಿಲ್ಲ, ನೆರೆ–ಬರ ಪರಿಹಾರವಿಲ್ಲ, ಕನ್ನಡಿಗರು ಉಸಿರುಗಟ್ಟಿ ಸಾಯುತ್ತಿದ್ದರೂ ಆಮ್ಲಜನಕ ನೀಡುವುದಿಲ್ಲ, ಕಾಯಿಲೆಗೆ ಔಷಧ ನೀಡುವುದಿಲ್ಲ. ಕರ್ನಾಟಕದಿಂದ ಬರಬೇಕಾದ್ದನ್ನು ವಸೂಲಿ ಮಾಡದೇ ಬಿಡುವುದಿಲ್ಲ. ಇದೆಲ್ಲವೂ ಕನ್ನಡ, ಕನ್ನಡಿಗರ ಮೇಲಿನ ದರ್ಪವಲ್ಲದೇ ಮತ್ತೇನಲ್ಲ. ನಮ್ಮ ಹೋರಾಟ ಇದರ ವಿರುದ್ಧವೂ ಇರಬೇಕು. ಇದನ್ನೂ ಓದಿ: 11 ಸಾವಿರ ಕೋಟಿ ಜಿಎಸ್‍ಟಿ ಪರಿಹಾರ ಮೊತ್ತ ಬಿಡುಗಡೆ ಮಾಡಿ – ಬೊಮ್ಮಾಯಿ

ರಾಜಕೀಯದಲ್ಲಿನ ಹಿಂದಿ ಪಾರಮ್ಯವನ್ನು ಕಣ್ಣಾರೆ ಕಂಡವನು ನಾನು. ಕನ್ನಡಿಗ ಎಚ್ ಡಿ ದೇವೇಗೌಡರು 11 ತಿಂಗಳು ಪ್ರಧಾನ ಮಂತ್ರಿಯಾಗಿದ್ದರು. ಭಾಷೆಯ ವಿಚಾರದಲ್ಲಿ ಅವರೆಷ್ಟು ನೋವು ಅನುಭವಿಸಬೇಕಾಯಿತು ಎಂಬುದು ಈಗ ಗುಟ್ಟಾಗಿ ಏನೂ ಉಳಿದಿಲ್ಲ. ಹಿಂದಿಯೇತರರು ದೇಶದ ಅತ್ಯುನ್ನತ ಸ್ಥಾನ ವಹಿಸಿಕೊಳ್ಳುವುದನ್ನು ಹಿಂದಿ ಲಾಭಿ ಎಂದೂ ಸಹಿಸುವುದಿಲ್ಲ.

nirmala sitharaman gst meeting

ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿಚಾರದಲ್ಲಿ ಮಾಧ್ಯಮಗಳು ಇನ್ನಷ್ಟು ಕ್ರಿಯಾಶೀಲವಾಗಿ ವರ್ತಿಸಬೇಕಾಗಿದೆ. ಹಲವು ಮಾಧ್ಯಮಗಳು ಆ ಕೆಲಸ ಮಾಡುತ್ತಿವೆ. ಜನರಲ್ಲಿನ ಭಾಷಾಭಿಮಾನವನ್ನು ಕಾಲಕಾಲಕ್ಕೆ ಬಡಿದೆಬ್ಬಿಸಬೇಕಾದ ಜವಾಬ್ದಾರಿ ಮಾಧ್ಯಮಗಳದ್ದು. ಕನ್ನಡಕ್ಕಾಗುತ್ತಿರುವ ಅನ್ಯಾಯದ ವಿರುದ್ಧದ ಹೋರಾಟದಲ್ಲಿ ಮಾಧ್ಯಮದ ಪಾಲ್ಗೊಳ್ಳುವಿಗೆ ಪ್ರಧಾನ.

ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೂ ತಬ್ಬಲಿ ಮಕ್ಕಳಂತೆ ಬಾಳುವುದಿದೆಯಲ್ಲ ಅದು ಅಪಾಯಕಾರಿ. ಕನ್ನಡಿಗರು ತಬ್ಬಲಿಗಳಲ್ಲ. ರಾಜ್ಯ ಕಟ್ಟಿದವರು, ರಾಜ್ಯ ಆಳಿದವರು, ರಾಜ್ಯ ವಿಸ್ತರಿಸಿದವರು. ಅದು ನಮ್ಮ ಐತಿಹಾಸಿಕ ಗುಣ. ಕನ್ನಡಿಗರಾದ ನಮಗೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ನಮ್ಮ ಐತಿಹಾಸಿಕ, ಚಾರಿತ್ರಿಕ ಗುಣ ಜಾಗೃತವಾಗಬೇಕಾದ ಪರಿಸ್ಥಿತಿ ಬಂದಿದೆ.

TAGGED:amazongooglehindikannada newsKumaraswamylanguageಕನ್ನಡಕುಮಾರಸ್ವಾಮಿಗೂಗಲ್ಹಿಂದಿ ಹೇರಿಕೆ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
3 hours ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
3 hours ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
3 hours ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
4 hours ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
4 hours ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?