ಗೋಡೆ ಕುಸಿದು ಕಾರ್ಮಿಕ ಸಾವು- ಓರ್ವ ಗಂಭೀರ

Public TV
0 Min Read
kwr wall

ಕಾರವಾರ: ಮನೆ ದುರಸ್ತಿ ವೇಳೆ ಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಇನ್ನೋರ್ವ ಕಾರ್ಮಿಕನ ಸ್ಥಿತಿ ಗಂಭೀರವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸದಾಶಿವಘಡದ ವೈಶ್ಯವಾಡದಲ್ಲಿ ನಡೆದಿದೆ.

ಹುಚ್ಚಪ್ಪ(35) ಸ್ಥಳದಲ್ಲೇ ಸಾವು ಕಂಡ ಕಾರ್ಮಿಕನಾಗಿದ್ದು, ಗೋಡೆಯ ಅಡಿಯಲ್ಲಿ ಸಿಲುಕಿಕೊಂಡಿದ್ದ ಇನ್ನೋರ್ವ ಕಾರ್ಮಿಕನನ್ನು ಅಗ್ನಿಶಾಮ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

kwr wall 2 medium

ಇಂದು ಸದಾಶಿವಘಡದ ತುಳಸಿ ಬಾಯಿ ಅವರ ಮನೆಯ ದುರಸ್ತಿ ಕಾರ್ಯ ಮಾಡಲು ಕಾರ್ಮಿಕರು ತೆರಳಿದ್ದರು. ಈ ವೇಳೆ ಗೋಡೆ ಕೆಡವುವಾಗ ಘಟನೆ ನಡೆದಿದೆ. ಈ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *