ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮ ಪಂಚಾಯತಿ ಮಾಜಿ ಅದ್ಯಕ್ಷ ಪಿ.ಪಿ.ಬೋಪಣ್ಣ ಜೈಲಿನಿಂದ ನಾಮಪತ್ರ ಸಲ್ಲಿಸಿದ್ದಾರೆ. ಕೊಡಗಿನ ರಾಜಕೀಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈ ವಿದ್ಯಮಾನ ನಡೆದಿದೆ. ಎರಡು ಅವಧಿಗೆ 10 ವರ್ಷ ಪಾಲಿಬೆಟ್ಟ ಗ್ರಾಮ ಪಂಚಾಯತಿ ಅದ್ಯಕ್ಷರಾಗಿ ಬೋಪಣ್ಣ ಸೇವೆ ಸಲ್ಲಿಸಿದ್ರು.
ಈ ಬಾರಿ ಚುನಾವಣೆಗೆ ನಿಲುವ ಎಲ್ಲಾ ತಯಾರಿಸುತ್ತಿರುವ ಹಿನ್ನೆಲೆಯಲ್ಲಿ ದೌರ್ಜನ್ಯ ಪ್ರಕರಣದಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದರು. ಅದರೂ ಪಂಚಾಯತಿ ಚುನಾವಣೆಗೆ ನಿಲ್ಲಬೇಕು ನಾಮಪತ್ರ ಸಲ್ಲಿಕೆ ಮಾಡಲು ಅಸಾಧ್ಯವಾಗಿತ್ತು. ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಕವನ್ ಅವರ ಮೂಲಕ ಜಾಮೀನು ಪಡೆಯಲು ಅಂತಿಮ ಕ್ಷಣದವರೆಗೂ ಪ್ರಯತ್ನ ನಡೆಸಿದರು. ಜಾಮೀನು ಸಿಗದ ಹಿನ್ನೆಲೆ ನ್ಯಾಯಾಲಯದ ಒಪ್ಪಿಗೆ ಪಡೆದು ಜೈಲಿನಿಂದಲೇ ಬೋಪಣ್ಣ ಸೂಚಕರ ಸಹಾಯದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಜಿಲ್ಲಾ ಪಂಚಾಯತಿ ಸದಸ್ಯ ಧರ್ಮಜ ಉತ್ತಪ್ಪ ನಾಮಪತ್ರ ಸಲ್ಲಿಕೆ ಮಾಡುವ ಅಗತ್ಯವಾದ ಎಲ್ಲಾ ವ್ಯವಸ್ಥೆ ಮಾಡಿದ್ರು. ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿರಾಜಪೇಟೆ ಶಾಸಕ ಕೆ ಜಿ ಬೋಪಯ್ಯ ಮಾತಾನಾಡಿ, ಅಭಿವೃದ್ಧಿಗೆ ಕೆಲಸ ಮಾಡಿರುವ ಬೋಪಣ್ಣ ಅವರು ರಾಷ್ಟ್ರ ಮಟ್ಟದಲ್ಲಿ ಪಂಚಾಯತಿ ಗೆ ಪ್ರಶಸ್ತಿ ಬರಲು ಶ್ರಮಿಸಿದ್ದರು ಎಂದು ಹೇಳಿದ್ದಾರೆ.