ಚಲನಚಿತ್ರ ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿ ನಿಧನ

Public TV
0 Min Read
Boodal Krishnamurthy

ಬೆಂಗಳೂರು: ಚಲನಚಿತ್ರ ನಿರ್ದೇಶಕ, ನಟ ಬೂದಾಳ್ ಕೃಷ್ಣಮೂರ್ತಿ ಇಂದು ಬೆಳಗ್ಗೆ 7 ಗಂಟೆಯ ವೇಳೆಯಲ್ಲಿ ಕೆಂಗೇರಿ ಶಿರ್ಕಿ ಅಪಾರ್ಟಮೆಂಟಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಚಿತ್ರದುರ್ಗದಲ್ಲಿ 1949ರಲ್ಲಿ ಜನಿಸಿದ ಇವರು 1973ರಲ್ಲಿ ಸಿದ್ಧಲಿಂಗಯ್ಯನವರ ಬೂತಯ್ಯನ ಮಗ ಅಯ್ಯು ಚಲನಚಿತ್ರದ ಸಹಾಯಕ ನಿರ್ದೇಶಕರಾಗುವ ಮೂಲಕ ಚಿತ್ರರಂಗ ಪ್ರವೇಶಿಸಿದರು. ಎರಡು ದಂಡೆಯ ಮೇಲೆ, ಒಲವಿನ ಕಾಣಿಕೆ, ಸೀತಾಂಜನೇಯ, ಶುಭಲಗ್ನ, ಲಂಚ ಸಾಮ್ರಾಜ್ಯ ಮುಂತಾದ ಚಿತ್ರಗಳನ್ನು ಬೂದಾಳ್ ನಿರ್ದೇಶಿಸಿದ್ದರು.

ಪ್ರೊಫೆಸರ್, ಶ್ರೀಗಂಧ, ಅರಿಶಿನ ಕುಂಕುಮ, ಬಲ್ ನನ್ಮಗ, ಪ್ರಜಾಶಕ್ತಿ, ನಿರ್ಣಯ, ಆರ್ಯಭಟ ಮುಂತಾದ ಚಿತ್ರಗಳಲ್ಲಿ ಬೂದಾಳ್ ಕೃಷ್ಣಮೂರ್ತಿ ಅಭಿನಯಿಸಿದ್ದರು. ಕೆಲವು ಕಾಲದಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದರು.

Share This Article
Leave a Comment

Leave a Reply

Your email address will not be published. Required fields are marked *