Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಡಿ ಹೇಳೋದು ಬಿಡಿ, ನಾನಂತೂ ಕೇಳಲ್ಲ: ಡಿ.ಕೆ.ಶಿವಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಚಾಡಿ ಹೇಳೋದು ಬಿಡಿ, ನಾನಂತೂ ಕೇಳಲ್ಲ: ಡಿ.ಕೆ.ಶಿವಕುಮಾರ್

Districts

ಚಾಡಿ ಹೇಳೋದು ಬಿಡಿ, ನಾನಂತೂ ಕೇಳಲ್ಲ: ಡಿ.ಕೆ.ಶಿವಕುಮಾರ್

Public TV
Last updated: November 29, 2020 4:20 pm
Public TV
Share
3 Min Read
DKShi 1 3
SHARE

– ಉಡುಪಿ ‘ಕೈ’ ಅಂಗಳದಲ್ಲಿ ಅಸಮಾಧಾನ
– ಕುಂದಾಪುರದ ಭಕ್ತರು ಹೇಳಿದ್ದ ಹರಕೆ ತೀರಿಸಿದ ಡಿಕೆಶಿ
– ರಾಜ್ಯಾಧ್ಯಕ್ಷರ ಕಾರ್ಯಕ್ರಮಕ್ಕೆ ಮಧ್ವರಾಜ್ ಗೈರು

ಉಡುಪಿ: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಮೊದಲ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಸಮಾವೇಶದ ಜೊತೆ ಸಾಲು ಸಾಲು ದೇಗುಲಗಳ ದರ್ಶನ ಮಾಡಿದ್ದಾರೆ. ತಿಹಾರ್ ಜೈಲಿನಲ್ಲಿದ್ದಾಗ ಭಕ್ತರು ಹೇಳಿದ್ದ ಹರಕೆ ತೀರಿಸಿದ್ದಾರೆ. ಇದೇ ವೇಳೆ ಡಿ.ಕೆ.ಶಿವಕುಮಾರ್ ಎದುರೇ ಕಾಂಗ್ರೆಸ್ ಅಂಗಳದಲ್ಲಿನ ಅಸಮಾಧಾನ ಪ್ರದರ್ಶನವಾಯ್ತು. ವೇದಿಕೆಯ ಮೇಲೆ ಮಾತನಾಡುವಾಗ ಚಾಡಿ ಹೇಳೋದು ಬಿಡಿ, ನಾನಂತೂ ಕೇಳಲ್ಲ ಎಂದು ಎಲ್ಲ ನಾಯಕರಿಗೆ ಚಾಟಿ ಬೀಸಿದರು.

DKSHI Temple

ಶನಿವಾರ ರಾತ್ರಿ ಉಡುಪಿಗೆ ಆಗಮಿಸಿದ ಡಿಕೆಶಿ ಕಮಲಶಿಲೆ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು. ಇಂದು ಬೆಳಗ್ಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಗೆ ನಡೆಯುವ ಉತ್ಸವದಲ್ಲಿ ಡಿಕೆಶಿ ಭಾಗಿಯಾದರು. ದಾರಿ ನಡುವೆ ಮಾರಣಕಟ್ಟೆ ಬ್ರಹ್ಮ ಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

DKSHI Temple 1

ಕುಂದಾಪುರ ಭಕ್ತರ ಹರಕೆ: ಐಟಿ ದಾಳಿ ನಂತರ ಡಿಕೆಶಿ ತಿಹಾರ್ ಜೈಲಿನಲ್ಲಿದ್ದ ವೇಳೆ ಪಕ್ಷದ ಕೆಲ ಕಾರ್ಯಕರ್ತರು ಹರಕೆ ಹೊತ್ತಿದ್ದರು. ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಕಮಲಶಿಲೆ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದರು. ಅಲ್ಲೇ ಭೋಜನ ಪ್ರಸಾದ ಸ್ವೀಕರಿಸಿದರು. ಈ ಬಗ್ಗೆ ಮಾತನಾಡಿದ ಡಿಕೆಶಿ ಸಂಕಷ್ಟದ ಕಾಲದಲ್ಲಿ ಸಾಕಷ್ಟು ಜನ ನನಗೆ ಬೆಂಬಲವಾಗಿ ನಿಂತಿದ್ದಾರೆ. ಪ್ರತಿಭಟನೆಗಳನ್ನು ನಡೆಸಿದ್ದಾರೆ. ದೇವರಿಗೆ ಹರಕೆ ಹೊತ್ತಿದ್ದಾರೆ ಅವರೆಲ್ಲರಿಗೂ ನಾನು ಚಿರಋಣಿ ಎಂದರು.

DKSHI Temple 2

ಇಂದು ಬೆಳಗ್ಗೆ ಕೊಲ್ಲೂರು ಮುಕಾಂಬಿಕಾ ದರ್ಶನ ಕೈಗೊಂಡರು. ಯಾವುದೇ ಚಂಡಿಕಾ ಹೊಮ ನಡೆಸದ ಡಿಕೆ ಶಿವಕುಮಾರ್ ದೇವಾಲಯದ ರಥೋತ್ಸವದಲ್ಲಿ ಭಾಗಿಯಾದರು. ದೇವಾಲಯದ ವತಿಯಿಂದ ಗೌರವ ಪ್ರಸಾದ ಸ್ವೀಕರಿಸಿದರು.

DKSHI Temple 3

ಪ್ರಮೋದ್ ಮಧ್ವರಾಜ್ ಗೈರು: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಉಡುಪಿ ಜಿಲ್ಲೆಗೆ ಅಧಿಕಾರ ವಹಿಸಿಕೊಂಡು ಮೊದಲ ಬಾರಿಗೆ ಭೇಟಿ ಕೊಟ್ಟಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್‍ನ ಭಿನ್ನಮತ ಮತ್ತೆ ಪ್ರದರ್ಶನಗೊಂಡಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರಾಜ್ಯಾಧ್ಯಕ್ಷರ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ರಾಜ್ಯಾಧ್ಯಕ್ಷರು ಜಿಲ್ಲೆಗೆ ಪ್ರಥಮ ಬಾರಿ ಆಗಮಿಸಿದ್ದರೂ ಪ್ರಮೋದ್ ಮಧ್ವರಾಜ್ ಶುಭಕೋರಿ ಒಂದೇ ಒಂದು ಕಟೌಟ್ ಜಿಲ್ಲೆಯಲ್ಲಿ ಕಾಣಿಸಲಿಲ್ಲ.

DKSHI 1

ಉಡುಪಿ ಬಣ ರಾಜಕೀಯ: ಸಮಾವೇಶ ನಡೆಯುವ ಸಭಾಂಗಣದ ಹೊರಗೆ ಪ್ರಮೋದ್ ಮಧ್ವರಾಜ್ ಬೆಂಬಲಿಗರು ಪೆಂಡಾಲ್ ಹಾಕಿ ಮೌನ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದರು. ಡಿಕೆಶಿ ಸಮಾವೇಶಕ್ಕೆ ಬಂದಿಳಿಯುತ್ತಿದ್ದಂತೆ ಉಡುಪಿಯ ಬಣ ರಾಜಕೀಯ ಜಗಜ್ಜಾಹೀರಾಯಿತು. ಸಭಾಂಗಣದ ಆವರಣದಲ್ಲಿ ವಿವಿಧ ಬಣದ ಮುಖಂಡರು, ಕಾರ್ಯಕರ್ತರು ಡಿಕೆಶಿ ಅವರ ಮುಂದೆ ಕಾಣಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರು. ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್, ಮಧ್ವರಾಜ್ ಬಣ, ಎನ್ ಎಸ್ ಯುಐ, ಸೇವಾದಳ, ಹೀಗೆ ಹಲವು ಗುಂಪುಗಳು ಡಿಕೆಶಿ ಅವರನ್ನು ಅಕ್ಷರಶಃ ಎಳೆದಾಡಿದರು.

DKSHI 3

ಮೌನ ಪ್ರತಿಭಟನೆ ನಡೆಸಲು ಪೆಂಡಾಲ್ ಹಾಕಲಾಗಿತ್ತು. ಈ ಪೆಂಡಾಲ್ ಗೆ ಡಿಕೆಶಿ ಪ್ರವೇಶಿಸಿದರು. ಸಣ್ಣ ಮಾತುಕತೆ ಮಾಡಿ ಪರಿಸ್ಥಿತಿ ತಿಳಿಗೊಳಿಸಿ ಸಮಾವೇಶ ಜಾಗಕ್ಕೆ ಕರೆದೊಯ್ದರು.

DKSHI 2

ಚಾಡಿ ಹೇಳೋದು ಬಿಡಿ: ಸಮಾವೇಶ ಉದ್ಘಾಟಿಸಿ ಮಾತನಾಡಿದ ಡಿಕೆ ಶಿವಕುಮಾರ್, ನನ್ನಿಂದಲೇ ಪಕ್ಷ ಅಂತ ಅಂದುಕೊಂಡಿದ್ದರೆ ಬಿಟ್ಟು ಬಿಡಿ. ಬ್ಲ್ಯಾಕ್ ಮೇಲ್ ಮಾಡಬಹುದು ಅಂತ ಭಾವಿಸಿದ್ರೆ ಅದು ಭ್ರಮೆ. ಯಾರಾದ್ರೂ ಪಕ್ಷ ಬಿಟ್ಟು ಹೋಗುವವರಿದ್ರೆ ಗೌರವವಾಗಿ ಕಳಸಿಕೊಡೋಣ. ಯಾರೂ ಕೂಡಾ ಪರ್ಮನೆಂಟ್ ಅಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರೋದು ಸೌಭಾಗ್ಯ. ಮೊದಲು ಶಿಸ್ತು ಬೇಕು, ಅಧಿಕಾರ ಎಲ್ಲರಿಗೂ ಸಿಗುತ್ತೆ ಜಿಲ್ಲೆಯಲ್ಲಿ ಒಬ್ರೂ ಶಾಸಕರಿಲ್ಲ ಕಾರ್ಯಕರ್ತರು ಏನ್ ಮಾಡ್ಬೇಕು? ಎಲ್ಲಿ ತ್ಯಾಗ, ಶ್ರಮ ಇಲ್ಲವೋ ಅಲ್ಲಿ ಫಲ ಇಲ್ಲ. ಹಿಂದೆ ಆಗಿದ್ದನ್ನೆಲ್ಲ ಮರೆತುಬಿಡಿ. ಚಾಡಿ ಹೇಳೋದು ಬಿಡಿ, ನಾನಂತೂ ಯಾವ ಚಾಡಿನೂ ಕೇಳಲ್ಲ ಅಂತ ಭಿನ್ನಮತ ಮಾಡುವ ಎಲ್ಲಾ ನಾಯಕರಿಗೆ ಡಿಕೆಶಿ ಚಾಟಿ ಬೀಸಿದರು.

TAGGED:DK ShivakumarKPCCPramod MadhwarajPublic TVudupiಉಡುಪಿಕಾಂಗ್ರೆಸ್ಕೆಪಿಸಿಸಿಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಪ್ರಮೋದ್ ಮಧ್ವರಾಜ್
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

CRIME
Crime

ತಿಂಡಿ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್

Public TV
By Public TV
10 minutes ago
CMS HASSAN
Crime

ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ – ಸಿಬ್ಬಂದಿ ವಿರುದ್ಧ ಶಂಕೆ

Public TV
By Public TV
17 minutes ago
Zimbabwe Team
Cricket

ಜಿಂಬಾಬ್ವೆಯಿಂದ ಲಂಕಾದಹನ – ಕೊನೆಯ ಓವರ್‌ನಲ್ಲಿ ರೋಚಕ ಜಯ

Public TV
By Public TV
31 minutes ago
BY Vijayendra
Bengaluru City

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ

Public TV
By Public TV
31 minutes ago
NAMMA METRO 1
Bengaluru City

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಗುಡ್‌ನ್ಯೂಸ್?

Public TV
By Public TV
1 hour ago
kalaburagi mahanagara palike logo row
Districts

ಕಮಲಕ್ಕೆ ಕೈ ಹಾಕಿದ ಕಾಂಗ್ರೆಸ್‌ – ಕಲಬುರಗಿ ಪಾಲಿಕೆಯಲ್ಲಿ ಈಗ ‘ಲೋಗೋ’ ಯುದ್ಧ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?