ಚಾಮರಾಜನಗರ: ಜಿಲ್ಲೆಯಲ್ಲಿ ಅಪರೂಪದ ಚಿಪ್ಪುಹಂದಿ ಕಾಣಿಸಿಕೊಂಡಿದ್ದು, ಇದನ್ನು ಕಂಡ ಸ್ಥಳೀಯರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅರಣ್ಯ ಇಲಾಖೆ ಸಹಾಯದಿಂದ ರಕ್ಷಣೆ ಮಾಡಿದ್ದಾರೆ.
ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದಲ್ಲಿ ಚಿಪ್ಪುಹಂದಿ ಪತ್ತೆಯಾಗಿದ್ದು, ರಕ್ಷಣೆ ಮಾಡಲಾಗಿದೆ. ಮಂಗಲ ಗ್ರಾಮದ ಮಹೇಶ್ ಅವರ ಬಾಳೆ ತೋಟದಲ್ಲಿ ಈ ಅಪರೂಪದ ಚಿಪ್ಪುಹಂದಿ ಕಾಣಿಸಿಕೊಂಡಿದ್ದು, ಇದನ್ನು ಕಂಡ ಸ್ಥಳೀಯರು ಒಂದು ಕ್ಷಣ ಆಶ್ಚರ್ಯಗೊಂಡಿದ್ದಾರೆ. ನಂತರ ಅದಕ್ಕೆ ಯಾವುದೇ ರೀತಿಯ ತೊಂದರೆ ನೀಡದೆ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಹಿಡಿದು ಕೊಟ್ಟಿದ್ದಾರೆ.
ಚಿಪ್ಪು ಹಂದಿ ಕಂಡ ತಕ್ಷಣ ತೋಟದ ಮಾಲೀಕ ಮಹೇಶ್ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ, ಅಪರೂಪರದ ಚಿಪ್ಪು ಹಂದಿಯನ್ನು ರಕ್ಷಣೆ ಮಾಡಿದ್ದಾರೆ. ಸೆರೆ ಹಿಡಿದ ಬಳಿಕ ಚಿಪ್ಪು ಹಂದಿಯನ್ನು ಕಾಡಿಗೆ ಬಿಟ್ಟಿದ್ದಾರೆ.