Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಮರಾಜನಗರದಲ್ಲಿ ಮಕ್ಕಳಿಗಾಗಿ 100 ಹಾಸಿಗೆಯುಳ್ಳ ಆಸ್ಪತ್ರೆ ಸಿದ್ಧಪಡಿಸಿ -ಸುರೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಚಾಮರಾಜನಗರದಲ್ಲಿ ಮಕ್ಕಳಿಗಾಗಿ 100 ಹಾಸಿಗೆಯುಳ್ಳ ಆಸ್ಪತ್ರೆ ಸಿದ್ಧಪಡಿಸಿ -ಸುರೇಶ್ ಕುಮಾರ್

Chamarajanagar

ಚಾಮರಾಜನಗರದಲ್ಲಿ ಮಕ್ಕಳಿಗಾಗಿ 100 ಹಾಸಿಗೆಯುಳ್ಳ ಆಸ್ಪತ್ರೆ ಸಿದ್ಧಪಡಿಸಿ -ಸುರೇಶ್ ಕುಮಾರ್

Public TV
Last updated: May 24, 2021 9:27 pm
Public TV
Share
3 Min Read
FotoJet 7 23
SHARE

– ಕೋವಿಡ್ ಕ್ಯಾಪ್ಟನ್ ಆಂದೋಲನಕ್ಕೆ ಚಾಲನೆ

ಚಾಮರಾಜನಗರ: ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಆರೋಗ್ಯ ಸಮಸ್ಯೆಗಳು ಉದ್ಭವವಾಗಬಹುದೆಂಬ ತಜ್ಞರ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವ ಸಚಿವ ಎಸ್.ಸುರೇಶ್ ಕುಮಾರ್, ಚಾಮರಾಜನಗರದಲ್ಲಿ ಮಕ್ಕಳಿಗಾಗಿ 100 ಹಾಸಿಗೆಯುಳ್ಳ ಆಸ್ಪತ್ರೆಯನ್ನು ಕೂಡಲೇ ಸಿದ್ಧ ಪಡಿಸಬೇಕೆಂದು ನಿರ್ದೇಶನ ನೀಡಿದರು.

ಇಂದು ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಮಕ್ಕಳ ಆರೋಗ್ಯಕ್ಕೆ ಸಮಸ್ಯೆಯಾಗಬಾರದು. ತಜ್ಞರ ಸಲಹೆಗಳನ್ನು ಆಡಳಿತ ಯಂತ್ರ ಗಂಭೀರವಾಗಿ ಪರಿಗಣಿಸಬೇಕು. ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು ಎಂದರು.

ಕೋವಿಡ್ ಕ್ಯಾಪ್ಟನ್: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಸೋಂಕು ತಡೆಗಾಗಿ, ಸೋಂಕಿತರು ಕೋವಿಡ್ ಕೇರ್ ಕೇಂದ್ರಗಳಿಗೆ ಕಡ್ಡಾಯವಾಗಿ ದಾಖಲಾಗುವ ಕ್ರಮಗಳನ್ನು ಜಾರಿಯಲ್ಲಿಡಬೇಕೆಂದು ಸೂಚನೆ ನೀಡಲಾಗಿದೆ ಎಂದ ಸಚಿವರು, ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಲ್ಲಿ ಪರಿಣಾಮಕಾರಿಯಾಗಿ ಕೋವಿಡ್ ಮುಕ್ತ ಗ್ರಾಮ ಗುರಿಗೆ ಕೋವಿಡ್ ಕ್ಯಾಪ್ಟನ್ ಆಂದೋಲನಕ್ಕೆ ಇಂದಿನಿಂದ ಚಾಲನೆ ನೀಡಲಾಗಿದೆ ಎಂದು ಹೇಳಿದರು.

FotoJet 9 19

ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಿಗೂ ಕೋವಿಡ್ ಕ್ಯಾಪ್ಟನ್‍ಗಳನ್ನಾಗಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಇವರೊಂದಿಗೆ ವೈದ್ಯಾಧಿಕಾರಿಗಳು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಜೊತೆಗಿದ್ದು, ಈ ಎಲ್ಲಾ ತಂಡಗಳ ಸೂಪರ್ ಕ್ಯಾಪ್ಟನ್ ಆಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಉಸ್ತುವಾರಿ ವಹಿಸಲಿದ್ದಾರೆ. ತಂಡಗಳು ಆಯಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಯ ಗ್ರಾಮಗಳಲ್ಲಿ ವಾಹನಗಳ ಮೂಲಕ ಸಂಚಾರ ಮಾಡಿ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಕರೆತರುವಿಕೆ, ಜಾಗೃತಿ, ಮುನ್ನೆಚ್ಚರಿಕೆ ಕ್ರಮಗಳು, ಸ್ಯಾನಿಟೈಜೇಷನ್ ಬಗ್ಗೆ ನಿಗಾ ವಹಿಸಲಿದ್ದಾರೆ. ಇಂದು ಜಿಲ್ಲಾಮಟ್ಟದಲ್ಲಿ ಕೋವಿಡ್ ಕ್ಯಾಪ್ಟನ್ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ನಾಳೆಯಿಂದ ತಾಲೂಕು ಮಟ್ಟದಲ್ಲಿಯೂ ಕೋವಿಡ್ ಕ್ಯಾಪ್ಟನ್ ಆಂದೋಲನಕ್ಕೆ ಚಾಲನೆ ನೀಡಲು ನಿರ್ಧಾರ ಕೈಗೊಳ್ಳಲಾಯಿತು ಎಂದು ನುಡಿದರು.

ಮೂರನೇ ಅಲೆಯ ಕುರಿತಂತೆ ಅಧ್ಯಯನ: 3ನೇ ಅಲೆಯ ಸಂದರ್ಭವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸಿದ್ದತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಚಾಮರಾಜನಗರದ ವೈದ್ಯಕೀಯ ಕಾಲೇಜಿನ ಡೀನ್ ಅವರು, ಮಕ್ಕಳ ತಜ್ಞರೊಂದಿಗೆ 3ನೇ ಅಲೆಯ ಕುರಿತು ವಿವರವಾಗಿ ಅಧ್ಯಯನ ಮಾಡಿ ಮುಂದಿನ ಟಾಸ್ಕ್ ಪೋರ್ಸ್ ಸಭೆಯ ವೇಳೆಗೆ ಸ್ಪಷ್ಟ ಚಿತ್ರಣ ನೀಡುವಂತೆ ಸೂಚಿಸಲಾಗಿದೆ. ಅವರ ಅಧ್ಯಯನ ವರದಿಯ ಪ್ರಕಾರ ಮುಂದಿನ ನೀತಿ ನಿರೂಪಣೆಗೆ ಮುಂದಾಗುತ್ತೇವೆ ಎಂದು ಸಚಿವರು ಹೇಳಿದರು.

Corona Bed

ಮಕ್ಕಳ ವಿಭಾಗಕ್ಕೆ ವೈದ್ಯಕೀಯ ಕಾಲೇಜು: ವೈದ್ಯಕೀಯ ಕಾಲೇಜಿನ ನೂತನ ಆಸ್ಪತ್ರೆಯ ಕಟ್ಟಡಕ್ಕೆ ಹೆರಿಗೆ ಶಿಶು ಆರೈಕೆ ವಿಭಾಗ ಸ್ಥಳಾಂತರವಾಗುತ್ತಿದೆ. ಈ ಕಟ್ಟಡದ ಮೇಲ್ಭಾಗದಲ್ಲಿಯೇ 100 ಹಾಸಿಗೆಗಳ ಮಕ್ಕಳ ವಿಭಾಗವನ್ನು ಸಿದ್ದಪಡಿಸಬಹುದಾಗಿದೆ. ಇದರ ಜೊತೆಗೆ ಮಕ್ಕಳಿಗಾಗಿಯೇ ಕೋವಿಡ್ ಕೇರ್ ಕೇಂದ್ರವನ್ನು ಮಾಡುವ ಸಂಬಂಧ ಕ್ರಮ ವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಸೋಂಕು ತಡೆಗಾಗಿ ಹೋಂ ಐಸೋಲೇಷನ್‍ಗೆ ಅವಕಾಶ ನೀಡದೇ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಬೇಕೆಂಬ ಮಹತ್ವರ ತೀರ್ಮಾನವನ್ನು ಕಳೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಕೈಗೊಂಡ ಪರಿಣಾಮ 400 ಹಾಸಿಗೆಗಳಷ್ಟೇ ಭರ್ತಿಯಾಗಿದ್ದ ಕೋವಿಡ್ ಕೇರ್ ಸೇಂಟರ್‍ಗಳಲ್ಲಿ ಇಂದು ಪ್ರಸ್ತುತ 1 ಸಾವಿರಕ್ಕೂ ಹೆಚ್ಚು ಸೋಂಕಿತರಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಶೇ. 70ರಷ್ಟು ಸೋಂಕು ಹರಡುತ್ತಿದ್ದು, ನಗರ ಪ್ರದೇಶಗಳಲ್ಲಿ ಸೋಂಕಿತರ ಪ್ರಮಾಣ ಶೇ. 30ರಷ್ಟಿದೆ. ಹೀಗಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಹೋಂ ಐಸೋಲೇಷನ್‍ಗೆ ಅವಕಾಶ ನೀಡದೇ ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲು ಮಾಡುವ ಪ್ರಕ್ರಿಯೆಯನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಅನುಸರಿಸಬೇಕೆಂಬ ಒಮ್ಮತದ ನಿರ್ಧಾರವನ್ನು ಕಾರ್ಯಪಡೆ ಕೈಗೊಂಡಿತು ಎಂದು ಹೇಳಿದರು.

ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕು ವ್ಯಾಪಿಸುವುದನ್ನು ಪರಿಣಾಮಕಾರಿಯಾಗಿ ತಡೆಯಲು ಲಾಕ್ ಡೌನ್ ಅನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಲು ಹಾಗೂ ಜನಸಂದಣಿ ತಪ್ಪಿಸಲು ಹಣ್ಣು, ತರಕಾರಿ ಮಾರಾಟ ಅವಧಿಯನ್ನು ತಗ್ಗಿಸಲು ಸಹ ಕಾರ್ಯಪಡೆ ಸಮಿತಿ ತೀರ್ಮಾನ ತೆಗೆದುಕೊಂಡಿದೆ ಎಂದು ಸಚಿವರು ಹೇಳಿದರು.

corona virus 1 1

ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್ ರವರು ಮಾತನಾಡಿ ಕೋವಿಡ್ ನಿಯಂತ್ರಣ ಸಂಬಂಧ ವಿಸ್ತøತವಾಗಿ ತಮ್ಮ ಅಭಿಪ್ರಾಯ, ಸಲಹೆಗಳನ್ನು ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು ವಿವರಿಸಿ ಲಾಕ್‍ಡೌನ್ ವೇಳೆ ಹಲವಾರು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 2,400 ವಾಹನಗಳನ್ನು ಜಪ್ತಿ ಮಾಡಲಾಗಿದೆ. 199 ಎಫ್.ಐ.ಆರ್ ದಾಖಲು ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದ ವಿರುದ್ಧ 250 ಪ್ರಕರಣ ದಾಖಲು ಮಾಡಲಾಗಿದೆ ಎಂದರು.

ಸಭೆಯಲ್ಲಿ ಕೋವಿಡ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ವಿವರವಾಗಿ ಚರ್ಚೆ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬಡೋಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್, ನೋಡಲ್ ಅಧಿಕಾರಿಗಳಾದ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಬಿ.ಆರ್.ಟಿ ಕ್ಷೇತ್ರ ನಿರ್ದೇಶಕರಾದ ಡಾ. ಸಂತೋಷ್‍ಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ತಹಶೀಲ್ದಾರ್ ರವಿಶಂಕರ್ ಸೇರಿದಂತೆ ಇತರೆ ಅಧಿಕಾರಿಗಳು ಪಾಲ್ಗೊಂಡರು.

TAGGED:chamarajanagarchildrenCoronaCovid 19Public TVಕೊರೊನಾಕೋವಿಡ್ 19ಚಾಮರಾಜನಗರಪಬ್ಲಿಕ್ ಟಿವಿ Suresh Kumarಮಕ್ಕಳುಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema

You Might Also Like

Bidar ai camera
Bidar

ಆಟೋದಲ್ಲಿ ಮಹಿಳೆ ಕಳೆದುಕೊಂಡಿದ್ದ 29 ಸಾವಿರ ಪತ್ತೆಹಚ್ಚಿದ AI ಕ್ಯಾಮೆರಾ

Public TV
By Public TV
12 minutes ago
Karnataka State Budget 2025
Bengaluru City

ಮಾ.6 ರಂದು ಬಜೆಟ್‌ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Public TV
By Public TV
53 minutes ago
Bengaluru Byadarahalli Robbery
Bengaluru City

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ

Public TV
By Public TV
1 hour ago
Head on collision between a scooty and a bike
Districts

ಸ್ಕೂಟಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ದಾರುಣ ಸಾವು

Public TV
By Public TV
1 hour ago
Sanjaya Baru Mamata Banerjee
Latest

ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

Public TV
By Public TV
2 hours ago
Basanagouda Patil Yatnal 1
Districts

ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?