Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chamarajanagar

ಚಾಮರಾಜನಗರದಲ್ಲಿ ಮಕ್ಕಳಿಗಾಗಿ 100 ಹಾಸಿಗೆಯುಳ್ಳ ಆಸ್ಪತ್ರೆ ಸಿದ್ಧಪಡಿಸಿ -ಸುರೇಶ್ ಕುಮಾರ್

Public TV
Last updated: May 24, 2021 9:27 pm
Public TV
Share
3 Min Read
FotoJet 7 23
SHARE

– ಕೋವಿಡ್ ಕ್ಯಾಪ್ಟನ್ ಆಂದೋಲನಕ್ಕೆ ಚಾಲನೆ

ಚಾಮರಾಜನಗರ: ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಆರೋಗ್ಯ ಸಮಸ್ಯೆಗಳು ಉದ್ಭವವಾಗಬಹುದೆಂಬ ತಜ್ಞರ ಅಭಿಪ್ರಾಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವ ಸಚಿವ ಎಸ್.ಸುರೇಶ್ ಕುಮಾರ್, ಚಾಮರಾಜನಗರದಲ್ಲಿ ಮಕ್ಕಳಿಗಾಗಿ 100 ಹಾಸಿಗೆಯುಳ್ಳ ಆಸ್ಪತ್ರೆಯನ್ನು ಕೂಡಲೇ ಸಿದ್ಧ ಪಡಿಸಬೇಕೆಂದು ನಿರ್ದೇಶನ ನೀಡಿದರು.

ಇಂದು ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಮಕ್ಕಳ ಆರೋಗ್ಯಕ್ಕೆ ಸಮಸ್ಯೆಯಾಗಬಾರದು. ತಜ್ಞರ ಸಲಹೆಗಳನ್ನು ಆಡಳಿತ ಯಂತ್ರ ಗಂಭೀರವಾಗಿ ಪರಿಗಣಿಸಬೇಕು. ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು ಎಂದರು.

ಕೋವಿಡ್ ಕ್ಯಾಪ್ಟನ್: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಸೋಂಕು ತಡೆಗಾಗಿ, ಸೋಂಕಿತರು ಕೋವಿಡ್ ಕೇರ್ ಕೇಂದ್ರಗಳಿಗೆ ಕಡ್ಡಾಯವಾಗಿ ದಾಖಲಾಗುವ ಕ್ರಮಗಳನ್ನು ಜಾರಿಯಲ್ಲಿಡಬೇಕೆಂದು ಸೂಚನೆ ನೀಡಲಾಗಿದೆ ಎಂದ ಸಚಿವರು, ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಲ್ಲಿ ಪರಿಣಾಮಕಾರಿಯಾಗಿ ಕೋವಿಡ್ ಮುಕ್ತ ಗ್ರಾಮ ಗುರಿಗೆ ಕೋವಿಡ್ ಕ್ಯಾಪ್ಟನ್ ಆಂದೋಲನಕ್ಕೆ ಇಂದಿನಿಂದ ಚಾಲನೆ ನೀಡಲಾಗಿದೆ ಎಂದು ಹೇಳಿದರು.

FotoJet 9 19

ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಿಗೂ ಕೋವಿಡ್ ಕ್ಯಾಪ್ಟನ್‍ಗಳನ್ನಾಗಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಇವರೊಂದಿಗೆ ವೈದ್ಯಾಧಿಕಾರಿಗಳು, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಜೊತೆಗಿದ್ದು, ಈ ಎಲ್ಲಾ ತಂಡಗಳ ಸೂಪರ್ ಕ್ಯಾಪ್ಟನ್ ಆಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಉಸ್ತುವಾರಿ ವಹಿಸಲಿದ್ದಾರೆ. ತಂಡಗಳು ಆಯಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಯ ಗ್ರಾಮಗಳಲ್ಲಿ ವಾಹನಗಳ ಮೂಲಕ ಸಂಚಾರ ಮಾಡಿ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಕರೆತರುವಿಕೆ, ಜಾಗೃತಿ, ಮುನ್ನೆಚ್ಚರಿಕೆ ಕ್ರಮಗಳು, ಸ್ಯಾನಿಟೈಜೇಷನ್ ಬಗ್ಗೆ ನಿಗಾ ವಹಿಸಲಿದ್ದಾರೆ. ಇಂದು ಜಿಲ್ಲಾಮಟ್ಟದಲ್ಲಿ ಕೋವಿಡ್ ಕ್ಯಾಪ್ಟನ್ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ನಾಳೆಯಿಂದ ತಾಲೂಕು ಮಟ್ಟದಲ್ಲಿಯೂ ಕೋವಿಡ್ ಕ್ಯಾಪ್ಟನ್ ಆಂದೋಲನಕ್ಕೆ ಚಾಲನೆ ನೀಡಲು ನಿರ್ಧಾರ ಕೈಗೊಳ್ಳಲಾಯಿತು ಎಂದು ನುಡಿದರು.

ಮೂರನೇ ಅಲೆಯ ಕುರಿತಂತೆ ಅಧ್ಯಯನ: 3ನೇ ಅಲೆಯ ಸಂದರ್ಭವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸಿದ್ದತೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಚಾಮರಾಜನಗರದ ವೈದ್ಯಕೀಯ ಕಾಲೇಜಿನ ಡೀನ್ ಅವರು, ಮಕ್ಕಳ ತಜ್ಞರೊಂದಿಗೆ 3ನೇ ಅಲೆಯ ಕುರಿತು ವಿವರವಾಗಿ ಅಧ್ಯಯನ ಮಾಡಿ ಮುಂದಿನ ಟಾಸ್ಕ್ ಪೋರ್ಸ್ ಸಭೆಯ ವೇಳೆಗೆ ಸ್ಪಷ್ಟ ಚಿತ್ರಣ ನೀಡುವಂತೆ ಸೂಚಿಸಲಾಗಿದೆ. ಅವರ ಅಧ್ಯಯನ ವರದಿಯ ಪ್ರಕಾರ ಮುಂದಿನ ನೀತಿ ನಿರೂಪಣೆಗೆ ಮುಂದಾಗುತ್ತೇವೆ ಎಂದು ಸಚಿವರು ಹೇಳಿದರು.

Corona Bed

ಮಕ್ಕಳ ವಿಭಾಗಕ್ಕೆ ವೈದ್ಯಕೀಯ ಕಾಲೇಜು: ವೈದ್ಯಕೀಯ ಕಾಲೇಜಿನ ನೂತನ ಆಸ್ಪತ್ರೆಯ ಕಟ್ಟಡಕ್ಕೆ ಹೆರಿಗೆ ಶಿಶು ಆರೈಕೆ ವಿಭಾಗ ಸ್ಥಳಾಂತರವಾಗುತ್ತಿದೆ. ಈ ಕಟ್ಟಡದ ಮೇಲ್ಭಾಗದಲ್ಲಿಯೇ 100 ಹಾಸಿಗೆಗಳ ಮಕ್ಕಳ ವಿಭಾಗವನ್ನು ಸಿದ್ದಪಡಿಸಬಹುದಾಗಿದೆ. ಇದರ ಜೊತೆಗೆ ಮಕ್ಕಳಿಗಾಗಿಯೇ ಕೋವಿಡ್ ಕೇರ್ ಕೇಂದ್ರವನ್ನು ಮಾಡುವ ಸಂಬಂಧ ಕ್ರಮ ವಹಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಸೋಂಕು ತಡೆಗಾಗಿ ಹೋಂ ಐಸೋಲೇಷನ್‍ಗೆ ಅವಕಾಶ ನೀಡದೇ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಬೇಕೆಂಬ ಮಹತ್ವರ ತೀರ್ಮಾನವನ್ನು ಕಳೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಕೈಗೊಂಡ ಪರಿಣಾಮ 400 ಹಾಸಿಗೆಗಳಷ್ಟೇ ಭರ್ತಿಯಾಗಿದ್ದ ಕೋವಿಡ್ ಕೇರ್ ಸೇಂಟರ್‍ಗಳಲ್ಲಿ ಇಂದು ಪ್ರಸ್ತುತ 1 ಸಾವಿರಕ್ಕೂ ಹೆಚ್ಚು ಸೋಂಕಿತರಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿ ಶೇ. 70ರಷ್ಟು ಸೋಂಕು ಹರಡುತ್ತಿದ್ದು, ನಗರ ಪ್ರದೇಶಗಳಲ್ಲಿ ಸೋಂಕಿತರ ಪ್ರಮಾಣ ಶೇ. 30ರಷ್ಟಿದೆ. ಹೀಗಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಹೋಂ ಐಸೋಲೇಷನ್‍ಗೆ ಅವಕಾಶ ನೀಡದೇ ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲು ಮಾಡುವ ಪ್ರಕ್ರಿಯೆಯನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಅನುಸರಿಸಬೇಕೆಂಬ ಒಮ್ಮತದ ನಿರ್ಧಾರವನ್ನು ಕಾರ್ಯಪಡೆ ಕೈಗೊಂಡಿತು ಎಂದು ಹೇಳಿದರು.

ಗ್ರಾಮಾಂತರ ಪ್ರದೇಶಗಳಲ್ಲಿ ಸೋಂಕು ವ್ಯಾಪಿಸುವುದನ್ನು ಪರಿಣಾಮಕಾರಿಯಾಗಿ ತಡೆಯಲು ಲಾಕ್ ಡೌನ್ ಅನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಲು ಹಾಗೂ ಜನಸಂದಣಿ ತಪ್ಪಿಸಲು ಹಣ್ಣು, ತರಕಾರಿ ಮಾರಾಟ ಅವಧಿಯನ್ನು ತಗ್ಗಿಸಲು ಸಹ ಕಾರ್ಯಪಡೆ ಸಮಿತಿ ತೀರ್ಮಾನ ತೆಗೆದುಕೊಂಡಿದೆ ಎಂದು ಸಚಿವರು ಹೇಳಿದರು.

corona virus 1 1

ಶಾಸಕರಾದ ಆರ್. ನರೇಂದ್ರ, ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್ ರವರು ಮಾತನಾಡಿ ಕೋವಿಡ್ ನಿಯಂತ್ರಣ ಸಂಬಂಧ ವಿಸ್ತøತವಾಗಿ ತಮ್ಮ ಅಭಿಪ್ರಾಯ, ಸಲಹೆಗಳನ್ನು ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು ವಿವರಿಸಿ ಲಾಕ್‍ಡೌನ್ ವೇಳೆ ಹಲವಾರು ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ 2,400 ವಾಹನಗಳನ್ನು ಜಪ್ತಿ ಮಾಡಲಾಗಿದೆ. 199 ಎಫ್.ಐ.ಆರ್ ದಾಖಲು ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದ ವಿರುದ್ಧ 250 ಪ್ರಕರಣ ದಾಖಲು ಮಾಡಲಾಗಿದೆ ಎಂದರು.

ಸಭೆಯಲ್ಲಿ ಕೋವಿಡ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ವಿವರವಾಗಿ ಚರ್ಚೆ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬಡೋಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್, ನೋಡಲ್ ಅಧಿಕಾರಿಗಳಾದ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಬಿ.ಆರ್.ಟಿ ಕ್ಷೇತ್ರ ನಿರ್ದೇಶಕರಾದ ಡಾ. ಸಂತೋಷ್‍ಕುಮಾರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೊನ್ನೇಗೌಡ, ತಹಶೀಲ್ದಾರ್ ರವಿಶಂಕರ್ ಸೇರಿದಂತೆ ಇತರೆ ಅಧಿಕಾರಿಗಳು ಪಾಲ್ಗೊಂಡರು.

TAGGED:chamarajanagarchildrenCoronaCovid 19Public TVಕೊರೊನಾಕೋವಿಡ್ 19ಚಾಮರಾಜನಗರಪಬ್ಲಿಕ್ ಟಿವಿ Suresh Kumarಮಕ್ಕಳುಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
19 hours ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
1 day ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
2 days ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago

You Might Also Like

Ramanagara
Districts

Video Viral | ಬೈಕ್‌ನಲ್ಲಿ ಹೋಗ್ತಿದ್ದ ಹಿಂದೂ ಯುವಕ, ಅನ್ಯಕೋಮಿನ ಯುವತಿ ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ

Public TV
By Public TV
46 seconds ago
as per daivas word thief caught in 3 days koragajjas miracle in mudradi udupi 2
Districts

ದೈವ ನುಡಿದಂತೆ 3 ದಿನದಲ್ಲಿ ಸಿಕ್ಕಿಬಿದ್ದ ಕಳ್ಳ – ಉಡುಪಿಯಲ್ಲಿ ಕೊರಗಜ್ಜನ ಪವಾಡ

Public TV
By Public TV
14 minutes ago
Chinnaswamy Stampede
Bengaluru City

Exclusive | ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ, ಸಮಯಾವಕಾಶದ ಕೊರತೆ ಅಂದ್ರೂ ಡೋಂಟ್ ಕೇರ್ ಅಂದಿದ್ದ ಸರ್ಕಾರ

Public TV
By Public TV
23 minutes ago
SOMANNA 1
Districts

ಇಡೀ ಬಜೆಟ್ ಪರಿಹಾರವಾಗಿ ಕೊಟ್ರೂ ಹೋದ ಜೀವ ವಾಪಸ್ ಬರುತ್ತಾ? – ಸೋಮಣ್ಣ

Public TV
By Public TV
37 minutes ago
Weather
Bengaluru City

ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಚುರುಕು – ಜೂ.13ರವರೆಗೆ ವ್ಯಾಪಕ ಮಳೆ ಸಾಧ್ಯತೆ

Public TV
By Public TV
1 hour ago
LOVERS 1
Chikkamagaluru

55ರ ಆಂಟಿ ಜೊತೆಗೆ ಯುವಕ ಲವ್ವಿಡವ್ವಿ; ಲವರ್‌ಗಾಗಿ ಆಕೆಯ ಗಂಡನನ್ನೇ ಕೊಂದು ಸುಟ್ಟುಹಾಕಿದ್ದ ಮೂವರು ಅರೆಸ್ಟ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?