ವಿಜಯಪುರ: ಚಾಲಕನ ನಿರ್ಲಕ್ಷ್ಯದಿಂದ ಟಿಪ್ಪರ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ಇಂಡಿ ರಸ್ತೆಯ ಹೊರವಲಯದಲ್ಲಿ ನಡೆದಿದೆ.
ನಗರ ನಿವಾಸಿ ರೆಹಮಾನ್ ಮೃತ ದುರ್ದೈವಿಯಾಗಿದ್ದು, ಟಿಪ್ಪರ್ ಚಾಲಕನ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಲಾರಿ ಡಿಕ್ಕಿಯಾದ ಪರಿಣಾಮ ಯುವಕ ಸ್ಥಳದಲ್ಲೇ ಅಸುನೀಗಿದ್ದಾನೆ. ಲಾರಿ ಮುಂಭಾಗದ ಚಕ್ರಕ್ಕೆ ಸಿಲುಕೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟಕನಾ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.