ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಬಳಿ ದರೋಡೆ ಪ್ರಕರಣ- ಓರ್ವ ಆರೋಪಿಯ ಬಂಧನ

Public TV
2 Min Read
Chikkapete Metro Station a

– ಒಂಟಿಯಾಗಿ ಓಡಾಡುವವರೇ ಇವರ ಟಾರ್ಗೆಟ್

ಬೆಂಗಳೂರು: ಲಾಕ್‍ಡೌನ್ ಸಂದರ್ಭದಲ್ಲಿ ಜನರಿಗೆ ಬೆದರಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ನಗರ ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.

22 ವರ್ಷದ ಜಾನಿ ಬಂಧಿತ ಆರೋಪಿಯಾಗಿದ್ದು, ಈತ ಆಜಾದ್ ನಗರ ನಿವಾಸಿ ಎಂಬ ಮಾಹಿತಿ ಲಭಿಸಿದೆ. ಈ ಹಿಂದೆಯೇ ಆರೋಪಿ ದರೋಡೆ ಪ್ರಕರಣದಲ್ಲಿ ಜೈಲು ಸೇರಿ ಕಳೆದ ಮಾರ್ಚ್‍ನಲ್ಲಿ ಬಿಡುಗಡೆಯಾಗಿದ್ದ. ಆ ಬಳಿಕ ಮತ್ತೆ ತನ್ನ ಹಳೆ ಚಾಳಿ ಮುಂದುವರಿಸಿದ್ದ ಆರೋಪಿ, ಡ್ರ್ಯಾಗರ್ ಹಿಡಿದು ಬೆದರಿಸಿ ಹಣ, ಚಿನ್ನ ದರೋಡೆ ಮಾಡ್ತಿದ್ದ.

ಹಾಡಹಗಲೇ ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಆತನ ಮೇಲೆ ಹಲ್ಲೆ ಮಾಡಿ, ಬೆದರಿಸಿ ದರೋಡೆ ಮಾಡಲು ಮುಂದಾಗಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೇ ವಿಡಿಯೋವನ್ನು ಹಂಚಿಕೊಂಡಿದ್ದ ಐಪಿಎಸ್ ಅಧಿಕಾರಿ ರೂಪ ಅವರು, ಬೆಂಗಳೂರು ಪೊಲೀಸರಿಗೆ ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ ಕ್ರಮಕೈಗೊಳ್ಳಲು ಮನವಿ ಮಾಡಿದ್ದರು. ಬೆಂಗಳೂರು ಪೊಲೀಸರು ಕೂಡ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

ದರೋಡೆ ಪ್ರಕರಣದ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಆದರೆ ವಿಡಿಯೋ ವೈರಲ್ ಆದ ಬಳಿಕ ಪಶ್ಚಿಮ ವಿಭಾಗದ ಡಾ.ಸಂಜೀವ್. ಎಂ.ಪಾಟೀಲ್ ಅವರ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದರು. ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಸಿಟಿ ಮಾರ್ಕೆಟ್ ಪೊಲೀಸರು ಸದ್ಯ ವಿಡಿಯೋದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಜಾನಿ ಬಂಧಿಸಿದ್ದಾರೆ. ಇದೀಗ ತಲೆ ಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಬಂಧನಕ್ಕಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Chikkapete Metro Station a 1

Share This Article
Leave a Comment

Leave a Reply

Your email address will not be published. Required fields are marked *