ಚಿಕ್ಕಮಗಳೂರಿನಲ್ಲಿ ಇಬ್ಬರು ಸಾವು, 41 ಕೊರೊನಾ ಪ್ರಕರಣಗಳು ಪತ್ತೆ

Public TV
1 Min Read
CORONA VIRUS 4

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ 41 ಪಾಸಿಟಿವ್ ಪ್ರಕರಣಗಳು ಸೇರಿದಂತೆ 2 ಸಾವು ಸಂಭವಿಸಿರುವುದು ಜಿಲ್ಲೆಯ ಜನರ ನಿದ್ದೆಗಡಿಸಿದೆ.

Corona Discharge

ಚಿಕ್ಕಮಗಳೂರು 18, ಶೃಂಗೇರಿ 11, ಕೊಪ್ಪ, ಎನ್.ಆರ್.ಪುರ, ಕಡೂರು, ತರೀಕೆರೆಯಲ್ಲಿ ತಲಾ 3 ಪ್ರಕರಣಗಳು ಪತ್ತೆಯಾಗಿದ್ದು, ಈ 41 ಪ್ರಕರಣಗಳು ಜಿಲ್ಲೆಯ ಜನರನ್ನು ಭಯಭೀತರನ್ನಾಗಿಸಿದೆ. ನಾಲ್ಕು ದಿನದ ಹಿಂದೆ 168 ಪ್ರಕರಣಗದ್ದ ಜಿಲ್ಲೆಯಲ್ಲಿ ಇಂದು ಸೋಂಕಿತರ ಸಂಖ್ಯೆ 291ಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ 30-40 ಪ್ರಕರಣಗಳು ಕಂಡುಬರುತ್ತಿದ್ದು, ಜಿಲ್ಲೆಯ ಜನ ಕರೊನಾದಿಂದ ಕಂಗಾಲಾಗಿದ್ದಾರೆ.

ಕಳೆದ 4 ದಿನಗಳಲ್ಲಿ 124 ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯ ಜನ ಕಂಗಾಲಾಗಿದ್ದಾರೆ. 124 ಪ್ರಕರಣಗಳಲ್ಲಿ ಸುಮಾರು 40ಕ್ಕೂ ಅಧಿಕ ಪ್ರಕರಣಗಳಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಶೀತ, ಕೆಮ್ಮು, ಜ್ವರ ಎಂದು ಆಸ್ಪತ್ರೆಗೆ ಹೋದವರಿಗೆಲ್ಲ ಕರೊನಾ ಪಾಸಿಟಿವ್ ಬಂದಿರುವುದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

CORONA VIRUS

ಇಂದು 2 ಸಾವು: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು. ಈ ವರೆಗೆ ಒಟ್ಟು 9 ಜನರನ್ನು ಬಲಿ ಪಡೆದುಕೊಂಡಿದೆ. ಚಿಕ್ಕಮಗಳೂರಿನ ನಗರಸಭಾ ಮಾಜಿ ಅಧ್ಯಕ್ಷ 72 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ. ಮೃತರು ಸಕ್ಕರೆ ಖಾಯಿಲೆ, ಬಿಪಿ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಕೊಪ್ಪದ ಬಾಳಗಡಿಯ 70 ವರ್ಷದ ವೃದ್ಧೆ ಕೂಡ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕರೊನಾಗೆ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *