Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರು, ಬೀದರ್‌ನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿಕ್ಕಮಗಳೂರು, ಬೀದರ್‌ನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ

Bengaluru City

ಚಿಕ್ಕಮಗಳೂರು, ಬೀದರ್‌ನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ

Public TV
Last updated: July 10, 2021 9:42 am
Public TV
Share
3 Min Read
rain 1
SHARE

– ಮಲೆನಾಡಿನಲ್ಲಿ 10 ದಿನಗಳ ನಂತರ ಮತ್ತೆ ವರುಣನ ಅಬ್ಬರ

ಚಿಕ್ಕಮಗಳೂರು/ಬೀದರ್: ಶುಕ್ರವಾರ ಚಿಕ್ಕಮಗಳೂರು ಮತ್ತು ಬೀದರ್ ಜಿಲ್ಲೆಯ ಔರಾದ್ ನಲ್ಲಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೀದರ್ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಜಾಗರಣೆ ಮಾಡುವಂತಾಗಿತ್ತು. ಇತ್ತ ಚಿಕ್ಕಮಗಳೂರು ಜಿಲ್ಲೆಯ ಜನರಲ್ಲಿ ಸಂತಸದ ಜೊತೆ ಆತಂಕ ಸಹ ಹೆಚ್ಚಾಗಿದೆ.

rain 5 medium

ಮುಂಗಾರು ಮಳೆ ಆಶಾದಾಯಕವಾಗಿ ಆರಂಭವಾಗಿದ್ದರೂ ಕೂಡ ಕಳೆದ ಹತ್ತು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿತ್ತು. ಆದರೆ, ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಡೀ ದಿನ ಆಗಾಗ್ಗೆ ಭಾರೀ ಮಳೆ ಸುರಿದಿದೆ.

rain 4 medium

ಮಲೆನಾಡಿಗರಿಗೆ ಸಂತಸದ ಜೊತೆ ಆತಂಕ:
ಕಡುಗಟ್ಟಿದ ಮೋಡ, ಭಾರೀ ಗಾಳಿಯಿಂದ ಜಿಲ್ಲೆಯ ಮಲೆನಾಡು ಭಾಗಗಳಾದ ಮೂಡಿಗೆರೆ, ಕಳಸ, ಎನ್.ಆರ್.ಪುರ, ಶೃಂಗೇರಿ, ಕೊಪ್ಪ ಹಾಗೂ ಬಾಳೆಹೊನ್ನೂರು ಭಾಗದಲ್ಲಿ ಮಳೆಯಾಗಿದೆ. ಆದರೆ, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬೈರಾಪುರ, ಚಾರ್ಮಾಡಿಘಾಟ್, ಬಾಳೂರು, ಬಣಕಲ್ ಭಾಗದಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದ ಮಲೆನಾಡಿಗರು ಮತ್ತೆ ಆತಂಕಗೊಂಡಿದ್ದಾರೆ. ಜಿಲ್ಲೆಗೆ ಈ ಮಳೆ ಅಗತ್ಯವಿತ್ತು. ಬಯಲುಸೀಮೆ ಹಾಗೂ ಮಲೆನಾಡು ಭಾಗಕ್ಕೂ ಮಳೆ ತೀರಾ ಅವಶ್ಯಕವಿತ್ತು. ಮಲೆನಾಡು ಭಾಗದಲ್ಲಿ ಭತ್ತ ಬೆಳೆದಿದ್ದ ರೈತರು ಮಳೆಗಾಗಿ ಆಕಾಶ ನೋಡುತ್ತಿದ್ದರು. ಭತ್ತದ ಸಿಸಿ ಮಡಿ ಬಿಸಿಲಿಗೆ ಬಾಡುವಂತಾಗಿತ್ತು. ಆದರೆ, ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಡೀ ದಿನ ಆಗಾಗ್ಗೆ ಸಮೃದ್ಧ ಮಳೆಯಾಗಿರೋದು ಕಾಫಿ ಬೆಳೆಗಾರರರು ಹಾಗೂ ರೈತರ ಮೊಗದಲ್ಲಿ ಮಂದಹಾಸ ತರಿಸಿದೆ.

rain 2 medium

ಮಳೆ ಮಲೆನಾಡಿಗರಿಗೆ ಸಂತಸ ತಂದರೂ ಅದಕ್ಕಿಂತ ಹೆಚ್ಚು ಆತಂಕ ತರುತ್ತಿದೆ. ಏಕೆಂದರೆ, ಕಳೆದ ಎರಡು ವರ್ಷದಲ್ಲಿ ಅಳಿದುಳಿದ ಬದುಕು ಎಲ್ಲಿ ಈ ಬಾರಿ ಕೊಚ್ಚಿ ಹೋಗುತ್ತೋ ಎಂದು ಮಲೆನಾಡಿಗರು ಮಳೆ ಬಂದರೆ ಖುಷಿಯ ಮಧ್ಯೆಯೂ ಕಂಗಾಲಾಗುತ್ತಿದ್ದಾರೆ. ಕಳೆದ ಎರಡು ವರ್ಷದ ಹಿಂದೆ, ಮಳೆಗಾಲದಲ್ಲಿ ಆದ ಅನಾಹುತಕ್ಕೆ ಪರಿಹಾರ ಸಿಕ್ಕಿಲ್ಲ. ಈ ವರ್ಷ ಮಳೆರಾಯ ಏನೇನು ಅವಾಂತರ ಸೃಷ್ಟಿಸುತ್ತಾನೋ, ಸರ್ಕಾರ ಸೂಕ್ತ ಪರಿಹಾರ ಕೊಡುತ್ತೋ ಅಥವಾ ಆಶ್ವಾಸನೆಯಲ್ಲೇ ಕಾಲ ಕಳೆಯುತ್ತೋ ಎಂದು ಜನ ಮಳೆ-ಸರ್ಕಾರ ಎರಡರ ಬಗ್ಗೆಯೂ ಚಿಂತೆಗೀಡಾಗಿದ್ದಾರೆ. 2019ರಲ್ಲಿ ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದ 6 ಕುಟುಂಬಗಳು ಸಂಪೂರ್ಣ ಕೊಚ್ಚಿ ಹೋಗಿದ್ದವು. ಅಲ್ಲಿಯ ಜನರಿಗೆ ಇಂದಿಗೂ ಸೂಕ್ತ ಹಾಗೂ ಸಮರ್ಪಕವಾದ ಪರಿಹಾರ ಸಿಕ್ಕಿಲ್ಲ. ಹಾಗಾಗಿ, ಮಲೆನಾಡಿಗರಿಗೆ ಮಳೆ ಅಂದರೆ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.

rain 6 medium

ಜಮೀನು, ಮನೆಗೆ ನುಗ್ಗಿದ ನೀರು:
ಬೀದರ್‌ನಲ್ಲಿ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಔರಾದ್ ತಾಲೂಕಿನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಔರಾದ್ ತಾಲೂಕಿನ ಬೋರ್ಗಿ ಗ್ರಾಮದ ಜಗದೇವಿ ಎಂಬವರ ಮನೆಗೆ ನೀರು ನುಗ್ಗಿ ಮನೆಯಲ್ಲಿದ್ದ ಸಾವಿರಾರು ಮೌಲ್ಯದ ದವಸ ಧಾನ್ಯಗಳು ನೀರು ಪಾಲಾಗಿವೆ.

rain 3 medium

ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಡರಾತ್ರಿ ಮನೆಗೆ ನೀರು ನುಗ್ಗಿ ನೀರು ಹೊರ ಹಾಕಲು ಕುಟುಂಬಸ್ಥರು ರಾತ್ರಿಯಿಡಿ ಹರಸಾಹಸ ಪಟ್ಟಿದ್ದಾರೆ. ಜೊತೆಗೆ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಔರಾದ್ ತಾಲೂಕಿನ ಜಮೀನುಗಳು ಜಲಾವೃತವಾಗಿ ಲಕ್ಷಾಂತರ ಮೌಲ್ಯದ ಬೆಳೆ ಹಾನಿಯಾಗಿವೆ. ಅಲ್ಲದೇ ಸುರಿದ ಧಾರಾಕಾರ ಮಳೆಗೆ ಜೋಜನಾ ಬಳಿ ಇರುವ ಹಳ್ಳ ತುಂಬಿ ಜೋಜನಾ ಟು ಲಿಂಗದ ಹಳ್ಳಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಂದು ಕೂಡಾ ದಟ್ಟ ಮೋಡ ಕವಿದ ವಾತಾವರಣವಿದ್ದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಹೀಗಾಗಿ ಜಿಲ್ಲೆಯಲ್ಲಿ 10 ರಿಂದ 13ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

rain 7 medium

ಧಾರಕಾರ ಮಳೆಗೆ ಮನೆಗೆ ನೀರು ನುಗ್ಗಿ ಮನೆಯಲ್ಲಿದ್ದ ದವಸ, ಧಾನ್ಯಗಳು ನೀರು ಪಾಲಾಗಿದೆ. ಒಳಚರಂಡಿ ವ್ಯವಸ್ಥೆ ಸೇರಿ ಮೂಲಭೂತ ಸೌಕರ್ಯ ಒದಗಿಸಿ ಎಂದು ಸ್ಥಳೀಯ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ, ಸ್ಪಂದಿಸಿಲ್ಲ ಎಂದು ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮಳೆಯ ಅವಾಂತರದಿಂದಾಗಿ ನೊಂದವರು ಹಿಡಿಶಾಪ ಹಾಕುತ್ತಿದ್ದಾರೆ. ಇದನ್ನೂ ಓದಿ: ಯುವತಿ ನೇಣಿಗೆ ಶರಣು, ಯುವಕನ ಮನೆಗೆ ಬೆಂಕಿ – ಪತಿಯನ್ನ ಬಿಟ್ಟು ಇನಿಯನ ಜೊತೆ ಮದ್ವೆ

TAGGED:bidarChikkamagalurufarmerGroceryhomeofficersPublic TVwaterಅಧಿಕಾರಿಗಳುಚಿಕ್ಕಮಗಳೂರುದಿನಸಿನೀರುಪಬ್ಲಿಕ್ ಟಿವಿ Rainಬೀದರ್ಮನೆಮಳೆರೈತರು
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

subbareddy 1
Bengaluru City

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
5 minutes ago
vinay kulkarni
Court

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

Public TV
By Public TV
18 minutes ago
PM Modi Arvind Bellad
Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ್‌

Public TV
By Public TV
27 minutes ago
Hatti Gold Mine 2
Districts

ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ!

Public TV
By Public TV
45 minutes ago
ಸಾಂರ್ದಭಿಕ ಚಿತ್ರ
Bengaluru City

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ – ಅಕ್ರಮ ತಡೆಗೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣು

Public TV
By Public TV
53 minutes ago
Arvind Kejriwal Manish Sisodia
Latest

ಮದ್ಯನೀತಿ ಹಗರಣ ಕೇಸ್‌ನಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಕಳಂಕ ಮುಕ್ತ – ಕಣ್ಣೀರಿಟ್ಟ ಮಾಜಿ ಸಿಎಂ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?