Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಮಗಳೂರು, ಬೀದರ್‌ನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಿಕ್ಕಮಗಳೂರು, ಬೀದರ್‌ನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ

Bengaluru City

ಚಿಕ್ಕಮಗಳೂರು, ಬೀದರ್‌ನಲ್ಲಿ ಭಾರೀ ಮಳೆ – ಜನ ಜೀವನ ಅಸ್ತವ್ಯಸ್ತ

Public TV
Last updated: July 10, 2021 9:42 am
Public TV
Share
3 Min Read
rain 1
SHARE

– ಮಲೆನಾಡಿನಲ್ಲಿ 10 ದಿನಗಳ ನಂತರ ಮತ್ತೆ ವರುಣನ ಅಬ್ಬರ

ಚಿಕ್ಕಮಗಳೂರು/ಬೀದರ್: ಶುಕ್ರವಾರ ಚಿಕ್ಕಮಗಳೂರು ಮತ್ತು ಬೀದರ್ ಜಿಲ್ಲೆಯ ಔರಾದ್ ನಲ್ಲಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೀದರ್ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಜಾಗರಣೆ ಮಾಡುವಂತಾಗಿತ್ತು. ಇತ್ತ ಚಿಕ್ಕಮಗಳೂರು ಜಿಲ್ಲೆಯ ಜನರಲ್ಲಿ ಸಂತಸದ ಜೊತೆ ಆತಂಕ ಸಹ ಹೆಚ್ಚಾಗಿದೆ.

rain 5 medium

ಮುಂಗಾರು ಮಳೆ ಆಶಾದಾಯಕವಾಗಿ ಆರಂಭವಾಗಿದ್ದರೂ ಕೂಡ ಕಳೆದ ಹತ್ತು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿತ್ತು. ಆದರೆ, ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಡೀ ದಿನ ಆಗಾಗ್ಗೆ ಭಾರೀ ಮಳೆ ಸುರಿದಿದೆ.

rain 4 medium

ಮಲೆನಾಡಿಗರಿಗೆ ಸಂತಸದ ಜೊತೆ ಆತಂಕ:
ಕಡುಗಟ್ಟಿದ ಮೋಡ, ಭಾರೀ ಗಾಳಿಯಿಂದ ಜಿಲ್ಲೆಯ ಮಲೆನಾಡು ಭಾಗಗಳಾದ ಮೂಡಿಗೆರೆ, ಕಳಸ, ಎನ್.ಆರ್.ಪುರ, ಶೃಂಗೇರಿ, ಕೊಪ್ಪ ಹಾಗೂ ಬಾಳೆಹೊನ್ನೂರು ಭಾಗದಲ್ಲಿ ಮಳೆಯಾಗಿದೆ. ಆದರೆ, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬೈರಾಪುರ, ಚಾರ್ಮಾಡಿಘಾಟ್, ಬಾಳೂರು, ಬಣಕಲ್ ಭಾಗದಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದ ಮಲೆನಾಡಿಗರು ಮತ್ತೆ ಆತಂಕಗೊಂಡಿದ್ದಾರೆ. ಜಿಲ್ಲೆಗೆ ಈ ಮಳೆ ಅಗತ್ಯವಿತ್ತು. ಬಯಲುಸೀಮೆ ಹಾಗೂ ಮಲೆನಾಡು ಭಾಗಕ್ಕೂ ಮಳೆ ತೀರಾ ಅವಶ್ಯಕವಿತ್ತು. ಮಲೆನಾಡು ಭಾಗದಲ್ಲಿ ಭತ್ತ ಬೆಳೆದಿದ್ದ ರೈತರು ಮಳೆಗಾಗಿ ಆಕಾಶ ನೋಡುತ್ತಿದ್ದರು. ಭತ್ತದ ಸಿಸಿ ಮಡಿ ಬಿಸಿಲಿಗೆ ಬಾಡುವಂತಾಗಿತ್ತು. ಆದರೆ, ಜಿಲ್ಲೆಯ ಮಲೆನಾಡು ಭಾಗದಲ್ಲಿ ಇಡೀ ದಿನ ಆಗಾಗ್ಗೆ ಸಮೃದ್ಧ ಮಳೆಯಾಗಿರೋದು ಕಾಫಿ ಬೆಳೆಗಾರರರು ಹಾಗೂ ರೈತರ ಮೊಗದಲ್ಲಿ ಮಂದಹಾಸ ತರಿಸಿದೆ.

rain 2 medium

ಮಳೆ ಮಲೆನಾಡಿಗರಿಗೆ ಸಂತಸ ತಂದರೂ ಅದಕ್ಕಿಂತ ಹೆಚ್ಚು ಆತಂಕ ತರುತ್ತಿದೆ. ಏಕೆಂದರೆ, ಕಳೆದ ಎರಡು ವರ್ಷದಲ್ಲಿ ಅಳಿದುಳಿದ ಬದುಕು ಎಲ್ಲಿ ಈ ಬಾರಿ ಕೊಚ್ಚಿ ಹೋಗುತ್ತೋ ಎಂದು ಮಲೆನಾಡಿಗರು ಮಳೆ ಬಂದರೆ ಖುಷಿಯ ಮಧ್ಯೆಯೂ ಕಂಗಾಲಾಗುತ್ತಿದ್ದಾರೆ. ಕಳೆದ ಎರಡು ವರ್ಷದ ಹಿಂದೆ, ಮಳೆಗಾಲದಲ್ಲಿ ಆದ ಅನಾಹುತಕ್ಕೆ ಪರಿಹಾರ ಸಿಕ್ಕಿಲ್ಲ. ಈ ವರ್ಷ ಮಳೆರಾಯ ಏನೇನು ಅವಾಂತರ ಸೃಷ್ಟಿಸುತ್ತಾನೋ, ಸರ್ಕಾರ ಸೂಕ್ತ ಪರಿಹಾರ ಕೊಡುತ್ತೋ ಅಥವಾ ಆಶ್ವಾಸನೆಯಲ್ಲೇ ಕಾಲ ಕಳೆಯುತ್ತೋ ಎಂದು ಜನ ಮಳೆ-ಸರ್ಕಾರ ಎರಡರ ಬಗ್ಗೆಯೂ ಚಿಂತೆಗೀಡಾಗಿದ್ದಾರೆ. 2019ರಲ್ಲಿ ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದ 6 ಕುಟುಂಬಗಳು ಸಂಪೂರ್ಣ ಕೊಚ್ಚಿ ಹೋಗಿದ್ದವು. ಅಲ್ಲಿಯ ಜನರಿಗೆ ಇಂದಿಗೂ ಸೂಕ್ತ ಹಾಗೂ ಸಮರ್ಪಕವಾದ ಪರಿಹಾರ ಸಿಕ್ಕಿಲ್ಲ. ಹಾಗಾಗಿ, ಮಲೆನಾಡಿಗರಿಗೆ ಮಳೆ ಅಂದರೆ ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.

rain 6 medium

ಜಮೀನು, ಮನೆಗೆ ನುಗ್ಗಿದ ನೀರು:
ಬೀದರ್‌ನಲ್ಲಿ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಔರಾದ್ ತಾಲೂಕಿನಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಔರಾದ್ ತಾಲೂಕಿನ ಬೋರ್ಗಿ ಗ್ರಾಮದ ಜಗದೇವಿ ಎಂಬವರ ಮನೆಗೆ ನೀರು ನುಗ್ಗಿ ಮನೆಯಲ್ಲಿದ್ದ ಸಾವಿರಾರು ಮೌಲ್ಯದ ದವಸ ಧಾನ್ಯಗಳು ನೀರು ಪಾಲಾಗಿವೆ.

rain 3 medium

ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ತಡರಾತ್ರಿ ಮನೆಗೆ ನೀರು ನುಗ್ಗಿ ನೀರು ಹೊರ ಹಾಕಲು ಕುಟುಂಬಸ್ಥರು ರಾತ್ರಿಯಿಡಿ ಹರಸಾಹಸ ಪಟ್ಟಿದ್ದಾರೆ. ಜೊತೆಗೆ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಔರಾದ್ ತಾಲೂಕಿನ ಜಮೀನುಗಳು ಜಲಾವೃತವಾಗಿ ಲಕ್ಷಾಂತರ ಮೌಲ್ಯದ ಬೆಳೆ ಹಾನಿಯಾಗಿವೆ. ಅಲ್ಲದೇ ಸುರಿದ ಧಾರಾಕಾರ ಮಳೆಗೆ ಜೋಜನಾ ಬಳಿ ಇರುವ ಹಳ್ಳ ತುಂಬಿ ಜೋಜನಾ ಟು ಲಿಂಗದ ಹಳ್ಳಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಂದು ಕೂಡಾ ದಟ್ಟ ಮೋಡ ಕವಿದ ವಾತಾವರಣವಿದ್ದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಹೀಗಾಗಿ ಜಿಲ್ಲೆಯಲ್ಲಿ 10 ರಿಂದ 13ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

rain 7 medium

ಧಾರಕಾರ ಮಳೆಗೆ ಮನೆಗೆ ನೀರು ನುಗ್ಗಿ ಮನೆಯಲ್ಲಿದ್ದ ದವಸ, ಧಾನ್ಯಗಳು ನೀರು ಪಾಲಾಗಿದೆ. ಒಳಚರಂಡಿ ವ್ಯವಸ್ಥೆ ಸೇರಿ ಮೂಲಭೂತ ಸೌಕರ್ಯ ಒದಗಿಸಿ ಎಂದು ಸ್ಥಳೀಯ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ, ಸ್ಪಂದಿಸಿಲ್ಲ ಎಂದು ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮಳೆಯ ಅವಾಂತರದಿಂದಾಗಿ ನೊಂದವರು ಹಿಡಿಶಾಪ ಹಾಕುತ್ತಿದ್ದಾರೆ. ಇದನ್ನೂ ಓದಿ: ಯುವತಿ ನೇಣಿಗೆ ಶರಣು, ಯುವಕನ ಮನೆಗೆ ಬೆಂಕಿ – ಪತಿಯನ್ನ ಬಿಟ್ಟು ಇನಿಯನ ಜೊತೆ ಮದ್ವೆ

TAGGED:bidarChikkamagalurufarmerGroceryhomeofficersPublic TVwaterಅಧಿಕಾರಿಗಳುಚಿಕ್ಕಮಗಳೂರುದಿನಸಿನೀರುಪಬ್ಲಿಕ್ ಟಿವಿ Rainಬೀದರ್ಮನೆಮಳೆರೈತರು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
4 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆ 63 ಸ್ಥಾನ

Public TV
By Public TV
14 minutes ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
14 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
21 minutes ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
37 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?