-ವರ್ಷವಾದ್ರೂ ಸೇತುವೆ ನಿರ್ಮಿಸಲು ಮುಂದಾಗದ ಸರ್ಕಾರ
ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರೋ ಮಳೆಗೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಂಕೇನಹಳ್ಳಿ ಗ್ರಾಮದ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ.
ಕಳೆದ ಬಾರಿಯ ಪ್ರವಾಹದಲ್ಲಿ ಬಂಕೇನಹಳ್ಳಿ ಸೇತುವೆ ಕೊಚ್ಚಿ ಹೋಗಿತ್ತು. ಸೇತುವೆ ನಿರ್ಮಿಸಲು ಸರ್ಕಾರ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ತಾತ್ಕಾಲಿಕ ಬ್ರಿಡ್ಜ್ ನಿರ್ಮಾಣ ಮಾಡಿಕೊಂಡಿದ್ದರು. ಸದ್ಯ ಈ ಸೇತುವೆಯೂ ಮಳೆಗೆ ಕೊಚ್ಚಿ ಹೋಗಿದ್ದರಿಂದ ಐದಾರು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.
ಭಾನುವಾರ ಕೊಡಗು, ಮಂಗಳೂರು, ಉಡುಪಿ ಭಾಗಗಳಲ್ಲಿಯೂ ಭಾರೀ ಮಳೆಯಾಗಿದೆ. ಮಂಗಳೂರಿನ ಗುರುಪುರದ ಬಳಿ ಗುಡ್ಡ ಕುಸಿತದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ.