ಬೆಂಗಳೂರು: ಸ್ಯಾಂಡಲ್ವುಡ್ ನಟಿ ಮೇಘನಾ ರಾಜ್ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಪತಿ ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ದಿನದಂದೇ ಈ ಸಂತಸದ ವಿಚಾರವನ್ನು ಅಭಿಮಾನಿಗಳ ಮುಂದೆ ಹಂಚಿಕೊಂಡಿದ್ದಾರೆ.
ಮೇಘನಾ ಹೇಳಿದ್ದೇನು?: ತನ್ನ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ, ಬೇರೆ ಯಾವ ದಿನವೂ ಉತ್ತಮವಾಗಿರಲಿಲ್ಲ, ಬೇರೆ ಯಾವುದೇ ತಂಡವು ಇಷ್ಟು ಉತ್ತಮವಾಗಿರಲಾರದು, ಇದು ನಿಮ್ಮ ಜನ್ಮದಿನ, ಇದು ನಮ್ಮ ಕನಸು ಆಗಿದೆ. ಇದು ನಿಮಗಾಗಿ ಚಿರು, ಪನ್ನ ಇಲ್ಲದಿದ್ದರೆ ನಾನು ಈ ಬಗ್ಗೆ ಯೋಚಿಸುತ್ತಿದ್ದೆನೋ ಇಲ್ಲವೋ ಗೊತ್ತಿಲ್ಲ, ಅಧಿಕೃತವಾಗಿ ಹೇಳುತ್ತಿದ್ದೇನೆ ಕ್ಯಾಮರಾ, ರೋಲಿಂಗ್, ಆ್ಯಕ್ಷನ್ ಎಂದು ಬರೆದುಕೊಂಡು ತಾವು ಪರದೆ ಮೇಲೆ ಕಾಣಿಸಿಕೊಳ್ಳುತ್ತಿರುವ ಕುರಿತಾಗಿ ಚಿರು ಹುಟ್ಟುಹಬ್ಬದಂದು ಹೇಳಿದ್ದಾರೆ.
View this post on Instagram
ಚಿರು ಹುಟ್ಟುಹಬ್ಬದ ದಿನ ಮೇಘನಾ ರಾಜ್ ತಾವು ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರವಾನ್ನು ಹೇಳಿರುವುದು ಅಭಿಮಾನಿಗಳಿಗೆ ಸಖತ್ ಸಂತೋಷ ತಂದಿದೆ. ಮೇಘನಾ ಚಿರು ಹುಟ್ಟುಹಬ್ಬದ ನಿಮಿತ್ತ ಸಾಕಷ್ಟು ಸರ್ಪ್ರೈಜ್ ನೀಡಲಿದ್ದಾರೆ ಎಂದು ಈ ಮೊದಲೇ ತಿಳಿಸಿದ್ದರು. ಇದನ್ನೂ ಓದಿ: ಚಿರಂಜೀವಿ ಸರ್ಜಾ ಸವಿ ನೆನಪು
ಚಿರಂಜೀವಿ ಸರ್ಜಾ ನಿಧನದ ಬಳಿಕ ನಟನೆಯಿಂದ ಗ್ಯಾಪ್ ಪಡೆದುಕೊಂಡಿದ್ದ ಮೇಘನಾ ರಾಜ್ ಅವರು ಈಗ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಆ ಚಿತ್ರ ಇಂದು ಚಿರು ಹುಟ್ಟುಹಬ್ಬದ ಪ್ರಯುಕ್ತ ಸೆಟ್ಟೇರುತ್ತಿದೆ. ಇದು ಅವರ ಅಭಿಮಾನಿಗಳಿಗೆ ಸಖತ್ ಖುಷಿ ನೀಡಿದೆ. ಮೇಘನಾ ಆದಷ್ಟು ಬೇಗ ಕಮ್ಬ್ಯಾಕ್ ಮಾಡಬೇಕು ಎಂಬುದೇ ಫ್ಯಾನ್ಸ್ ಬಯಕೆ ಆಗಿತ್ತು. ಆ ಬಯಕೆಯನ್ನು ಮೇಘನಾ ಈಡೇರಿಸುತ್ತಿದ್ದಾರೆ. ಚಿರು ಸ್ನೇಹಿತ ಪನ್ನಗಾಭರಣ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ: ಗೊಂಬೆಗಳ ಮಧ್ಯೆ ಪುಟ್ಟ ಗೊಂಬೆಯಂತೆ ಕುಳಿತ ರಾಯನ್
ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನಲೆ ಪತಿಯ ಸವಿನೆನಪಿನಾರ್ಥಕವಾಗಿ ಒಂದು ಫೋಟೋಶೂಟ್ ಮಾಡಿಸಿದ್ದಾರೆ. ರಾಜ ರಾಣಿ ಥೀಮ್ನಲ್ಲಿ ಮಾಡಿರುವ ಹೊಸ ಫೋಟೋಶೂಟ್ ಇದಾಗಿದೆ. ರಾಜ ವಿಧಿವಶರಾದ ಬಳಿಕ ರಾಣಿ, ಮಗನಿಗೆ ಆ ರಾಜನ ಬಗ್ಗೆ ತಿಳಿಸುವ ಥೀಮ್ ಅನ್ನು ಫೋಟೋಶೂಟ್ ಒಳಗೊಂಡಿದೆ. ರಾಜನ ನಿಧನದ ಬಳಿಕ ರಾಣಿ ತನ್ನ ಸಾಮ್ರಾಜ್ಯವನ್ನು ಹೇಗೆ ಸಮರ್ಥವಾಗಿ ಮುನ್ನಡೆಸುತ್ತಾಳೆ ಎಂಬ ಥೀಮ್ನಲ್ಲಿ ಮೇಘನಾ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ನಿನ್ನೆ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದರು. ಇದನ್ನೂ ಓದಿ: ಮಹಾರಾಣಿ ಧಿರಿಸಿನಲ್ಲಿ ಮೇಘನಾ ಫುಲ್ ಮಿಂಚಿಂಗ್
ಇಂದು ಮೇಘನಾ ರಾಜ್ ಪತಿಯ ಕುರಿತಾಗಿ ಭಾವನಾತ್ಮಕವಾಗಿ ಕೆಲವು ಸಾಲುಗಳನ್ನು ಬರೆದುಕೊಂಡಿದ್ದರು. ಇದನ್ನು ನೋಡಿದ ಕೆಲವು ಅಭಿಮಾನಿಗಳು ಕಣ್ಣೀರು ತುಂಬಿಕೊಂಡಿದ್ದಾರೆ. ನೆಚ್ಚಿನ ನಟನನ್ನು ಮಿಸ್ ಮಾಡಿಕೊಳ್ಳುವುತ್ತಿರುವುದರ ಕುರಿತಾಗಿ ಕಮೆಂಟ್ ಮಾಡುತ್ತಿದ್ದಾರೆ. ನಟ ಚಿರಂಜೀವಿ ಸರ್ಜಾ ಅವರು ಅಭಿಮಾನಿಗಳಿಂದ, ಕುಟುಂಬದಿಂದ ದೂರವಾಗಿರಬಹುದು. ಆದರೆ ಅವರು ನಟಿಸಿರುವ ಸಿನಿಮಾಗಳ ಮೂಲಕವಾಗಿ ಎಂದಿಗೂ ಜೀವಂತವಾಗಿದ್ದಾರೆ.